AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆಗೆ ಕೊಲೆ ಎನ್ನುವ ಪ್ರತೀಕಾರದ ಮನೋಭಾವನೆ ಸರಿಯಲ್ಲ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಆರ್ ಅಶೋಕ

ಕೊಲೆಗೆ ಕೊಲೆ ಎನ್ನುವ ಪ್ರತೀಕಾರದ ಮನೋಭಾವನೆ ಸರಿಯಲ್ಲ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಆರ್ ಅಶೋಕ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: May 28, 2025 | 2:29 PM

Share

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಯಾರನ್ನೋ ಓಲೈಕೆ ಮಾಡುವ ಭರದಲ್ಲಿ ತಾರತಮ್ಮವೆಸಗಿದರೆ ಅನಾಹುತಗಳು ನಡೆಯುತ್ತವೆ, ಈ ಹಿನ್ನೆಲೆಯಲ್ಲಿ ಸರ್ಕಾರ ಜನಪರವಾಗಿದ್ದುಕೊಂಡು ನಿಷ್ಪಕ್ಷಪಾತವಾಗಿ ಆಡಳಿತ ನೀಡಿದರೆ ಎಲ್ಲವೂ ಸುಸೂತ್ರವಾಗಿ ನಡೆಯುತ್ತದೆ ಎಂದ ಅಶೋಕ ಬೆಂಗಳೂರಿನ ಹೆಚ್​ಎಎಲ್ ಸಂಸ್ಥೆಯನ್ನು ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಉದ್ಭವಿಸಲ್ಲ ಎಂದರು.

ಬೆಂಗಳೂರು, ಮೇ 28: ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಅಬ್ದುಲ್ ರೆಹಮಾನ್ ಕೊಲೆ ಬಗ್ಗೆ ಮಾತಾಡಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ, ಗಲಭೆ ಪೀಡಿತ ಪ್ರದೇಶಗಳಲ್ಲಿ ಸೆಕ್ಷನ್ 144 ಜಾರಿಗೊಳಿಸುವ ಮೂಲಕ ಕಾನೂನು ಸುವ್ಯವಸ್ಥೆಯನ್ನು (Law and Order) ಕಾಯ್ದುಕೊಳ್ಳಬಹುದು ಅಂತ ಈ ಸರ್ಕಾರ ಭಾವಿಸಿರುವುದರಿಂದ ಕರಾವಳಿ ಭಾಗದಲ್ಲಿ ಹತ್ಯೆಗಳು ನಡೆಯುತ್ತಿವೆ, ಒಂದು ನಿರ್ದಿಷ್ಟ ಸಮುದಾಯವನ್ನು ಓಲೈಕೆ ಮಾಡುತ್ತಿರುವುದರಿಂದ ಲವ್ ಜಿಹಾದ್ ನಡೆಯುತ್ತಿದೆ, ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆಗಳು ಕೇಳಿಬರುತ್ತಿವೆ, ಮೊನ್ನೆ ಹಿಂದೂ ಕಾರ್ಯಕರ್ತನೊಬ್ಬನ ಹತ್ಯೆ ನಡೆದಾಗ ಬಿಜೆಪಿ ಪ್ರತಿಭಟನೆ ನಡೆಸಿತು, ಆದರೆ ಕೊಲೆಗೆ ಕೊಲೆ ಎಂಬ ಪ್ರತೀಕಾರದ ಮನೋಭಾವ ಸರಿಯಲ್ಲ ಎಂದು ಹೇಳಿದರು.

ಇದನ್ನೂ ಓದಿ:  ಮುನಿರತ್ನ ವಿರುದ್ಧ ಕ್ರಮ ಜರುಗಿಸದ ಅಶೋಕ ಮತ್ತು ವಿಜಯೇಂದ್ರ ಅಸಮರ್ಥ ನಾಯಕರು: ಡಿಕೆ ಸುರೇಶ್

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.