AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀರ್​ ಅಹ್ಮದ್​ಗೆ ನ್ಯಾಯಾಂಗ ನಿಂದನೆ ಸಂಕಷ್ಟ, ಹೈಕೋರ್ಟ್​ಗೆ ಅರ್ಜಿ

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್​ ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿದಿದೆ. ಸಚಿವ ಜಮೀರ್ ಅಹಮ್ಮದ್ ಖಾನ್ ಸಿಎಂ ಸಿದ್ದರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡುವ ಭರದಲ್ಲಿ ಹೈಕೋರ್ಟ್​ ಆದೇಶದ ಬಗ್ಗೆ ಲಘುವಾಗಿ ಮಾತನಾಡಿದ್ದು, ಇದೀಗ ಅವರಿಗೆ ಸಂಕಷ್ಟ ತಂದಿಟ್ಟಿದೆ.

ಜಮೀರ್​ ಅಹ್ಮದ್​ಗೆ ನ್ಯಾಯಾಂಗ ನಿಂದನೆ ಸಂಕಷ್ಟ, ಹೈಕೋರ್ಟ್​ಗೆ ಅರ್ಜಿ
ಸಚಿವ ಜಮೀರ್​ ಅಹ್ಮದ್​
ಪ್ರಸನ್ನ ಗಾಂವ್ಕರ್​
| Edited By: |

Updated on:Sep 28, 2024 | 1:33 PM

Share

ಬೆಂಗಳೂರು, ಸೆಪ್ಟೆಂಬರ್​ 28: ಸಚಿವ ಜಮೀರ್ ಅಹ್ಮದ್ (Zameer Ahmed) ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ (TJ Abraham) ಹೈಕೋರ್ಟ್​ನಲ್ಲಿ (High Court) ನ್ಯಾಯಾಂಗ ನಿಂದನೆ (Contempt of Court) ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಸಚಿವ ಜಮೀರ್ ಅಹ್ಮದ್​ ಅವರಿಗೆ ನ್ಯಾಯಂಗ ನಿಂದನೆ ಸಂಕಷ್ಟ ಎದರಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್​ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಸಚಿವ ಜಮೀರ್​ ಅಹ್ಮದ್​ ಖಾನ್​ ಲಘುವಾಗಿ ಮಾತನಾಡಿದ್ದರು. ಸಿದ್ದರಾಮಯ್ಯ ಅವರ ವಿರುದ್ಧ ​ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದಿತ್ತು.

ಇದನ್ನೂ ಓದಿ: ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಇದಕ್ಕೆ, ಕಾಂಗ್ರೆಸ್​ ಮುಖಂಡ ಜಮೀರ್ ಅಹ್ಮದ್​ ಖಾನ್ “ಹೈಕೋರ್ಟ್​ ಆದೇಶ ರಾಜಕೀಯ ತೀರ್ಪು” ಎಂದು ಹೇಳಿದ್ದರು. ಇದು ಜಮೀರ್ ಅಹ್ಮದ್​ ಖಾನ್ ಅವರಿ​ಗೆ ಸಂಕಷ್ಟ ತಂದೊಡ್ಡಿದೆ. ಈ ಸಂಬಂಧ ಜಮೀರ್​ ಅಹ್ಮದ್​ ಖಾನ್​ ಅವರ ವಿರುದ್ಧ ಟಿಜೆ ಅಬ್ರಾಹಂ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ಬಾಯಿ ತಪ್ಪಿ ಬಂದಿದೆ: ಜಮೀರ್​

ಹೈಕೋರ್ಟ್​ ತೀರ್ಪು ರಾಜಕೀಯ ಪ್ರೇರಿತ ಎಂಬ ಅರ್ಥದಲ್ಲಿ ನಾನು ಹೇಳಿಲ್ಲ. ಬಾಯಿ ತಪ್ಪಿ ಬಂದಿದೆ. ​ಹೈಕೋರ್ಟ್​ ತೀರ್ಪು ಬಂದ ನಂತರ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿವೆ. ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ. ನ್ಯಾಯಾಲಯದ ಬಗ್ಗೆ ಅಪಾರ ಗೌರವ ಇದೆ. ನ್ಯಾಯಾಲಯದ ತೀರ್ಪಿಗೆ ತಲೆ ಬಾಗುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್​ ಸ್ಪಷ್ಟಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:33 pm, Sat, 28 September 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ