AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀರ್​ ಅಹ್ಮದ್​ಗೆ ನ್ಯಾಯಾಂಗ ನಿಂದನೆ ಸಂಕಷ್ಟ, ಹೈಕೋರ್ಟ್​ಗೆ ಅರ್ಜಿ

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್​ ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿದಿದೆ. ಸಚಿವ ಜಮೀರ್ ಅಹಮ್ಮದ್ ಖಾನ್ ಸಿಎಂ ಸಿದ್ದರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡುವ ಭರದಲ್ಲಿ ಹೈಕೋರ್ಟ್​ ಆದೇಶದ ಬಗ್ಗೆ ಲಘುವಾಗಿ ಮಾತನಾಡಿದ್ದು, ಇದೀಗ ಅವರಿಗೆ ಸಂಕಷ್ಟ ತಂದಿಟ್ಟಿದೆ.

ಜಮೀರ್​ ಅಹ್ಮದ್​ಗೆ ನ್ಯಾಯಾಂಗ ನಿಂದನೆ ಸಂಕಷ್ಟ, ಹೈಕೋರ್ಟ್​ಗೆ ಅರ್ಜಿ
ಸಚಿವ ಜಮೀರ್​ ಅಹ್ಮದ್​
ಪ್ರಸನ್ನ ಗಾಂವ್ಕರ್​
| Edited By: ವಿವೇಕ ಬಿರಾದಾರ|

Updated on:Sep 28, 2024 | 1:33 PM

Share

ಬೆಂಗಳೂರು, ಸೆಪ್ಟೆಂಬರ್​ 28: ಸಚಿವ ಜಮೀರ್ ಅಹ್ಮದ್ (Zameer Ahmed) ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ (TJ Abraham) ಹೈಕೋರ್ಟ್​ನಲ್ಲಿ (High Court) ನ್ಯಾಯಾಂಗ ನಿಂದನೆ (Contempt of Court) ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಸಚಿವ ಜಮೀರ್ ಅಹ್ಮದ್​ ಅವರಿಗೆ ನ್ಯಾಯಂಗ ನಿಂದನೆ ಸಂಕಷ್ಟ ಎದರಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್​ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಸಚಿವ ಜಮೀರ್​ ಅಹ್ಮದ್​ ಖಾನ್​ ಲಘುವಾಗಿ ಮಾತನಾಡಿದ್ದರು. ಸಿದ್ದರಾಮಯ್ಯ ಅವರ ವಿರುದ್ಧ ​ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದಿತ್ತು.

ಇದನ್ನೂ ಓದಿ: ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಇದಕ್ಕೆ, ಕಾಂಗ್ರೆಸ್​ ಮುಖಂಡ ಜಮೀರ್ ಅಹ್ಮದ್​ ಖಾನ್ “ಹೈಕೋರ್ಟ್​ ಆದೇಶ ರಾಜಕೀಯ ತೀರ್ಪು” ಎಂದು ಹೇಳಿದ್ದರು. ಇದು ಜಮೀರ್ ಅಹ್ಮದ್​ ಖಾನ್ ಅವರಿ​ಗೆ ಸಂಕಷ್ಟ ತಂದೊಡ್ಡಿದೆ. ಈ ಸಂಬಂಧ ಜಮೀರ್​ ಅಹ್ಮದ್​ ಖಾನ್​ ಅವರ ವಿರುದ್ಧ ಟಿಜೆ ಅಬ್ರಾಹಂ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ಬಾಯಿ ತಪ್ಪಿ ಬಂದಿದೆ: ಜಮೀರ್​

ಹೈಕೋರ್ಟ್​ ತೀರ್ಪು ರಾಜಕೀಯ ಪ್ರೇರಿತ ಎಂಬ ಅರ್ಥದಲ್ಲಿ ನಾನು ಹೇಳಿಲ್ಲ. ಬಾಯಿ ತಪ್ಪಿ ಬಂದಿದೆ. ​ಹೈಕೋರ್ಟ್​ ತೀರ್ಪು ಬಂದ ನಂತರ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿವೆ. ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ. ನ್ಯಾಯಾಲಯದ ಬಗ್ಗೆ ಅಪಾರ ಗೌರವ ಇದೆ. ನ್ಯಾಯಾಲಯದ ತೀರ್ಪಿಗೆ ತಲೆ ಬಾಗುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್​ ಸ್ಪಷ್ಟಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:33 pm, Sat, 28 September 24

Follow Us
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಯಿಲ್ ಟ್ಯಾಂಕರ್ ಪಲ್ಟಿ; ಎಣ್ಣೆ ಹಿಡಿಯಲು ಬಕೆಟ್ ಹಿಡಿದು ನುಗ್ಗಿದ ಜನ!
ಆಯಿಲ್ ಟ್ಯಾಂಕರ್ ಪಲ್ಟಿ; ಎಣ್ಣೆ ಹಿಡಿಯಲು ಬಕೆಟ್ ಹಿಡಿದು ನುಗ್ಗಿದ ಜನ!
'ರಾಮಾಯಣ' ಚಿತ್ರದ ಪೆನ್ಸಿಲ್ ಆರ್ಟ್
'ರಾಮಾಯಣ' ಚಿತ್ರದ ಪೆನ್ಸಿಲ್ ಆರ್ಟ್
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?