AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂಬೆಳಗ್ಗೆಯೇ ತಂಬಾಕು ಹರಾಜು ಪೂಜೆ ನೆರವೇರಿಸಿದ ಬಿಜೆಪಿ ಸಂಸದ ಪ್ರತಾಪ್‌ ಸಿಂಹಗೆ ರೈತರಿಂದ ಘೇರಾವ್

ಬೆಳಗ್ಗೆ 7.30ಕ್ಕೆ ಪ್ರತಾಪ್ ಸಿಂಹ ಪೂಜೆ ಮಾಡಿದರು. ಈ ವೇಳೆ ರೈತರೊಂದಿಗೆ ಮಾತಿನ ಚಕಮಕಿ ನಡೆಯಿತು. ಇಷ್ಟು ಬೇಗ ಯಾಕೆ ಪೂಜೆ ಮಾಡಿದ್ರಿ ಎಂದು ಮುತ್ತಿಗೆ ಹಾಕಿದ ರೈತರು ಪ್ರಶ್ನಿಸಿದರು. ಸರಿಯಾಗಿ ಆರಂಭಿಕ ಬೆಲೆ‌‌ ನೀಡಿಲ್ಲ ಎಂದು ತರಾಟೆಗೆ ಎತೆಗೆದುಕೊಂಡರು. ಕೇವಲ 185 ರೂಪಾಯಿ ಅರಂಭಿಕ ಬೆಲೆ ನೀಡಲಾಗಿದೆ ಎಂದು ರೈತರು ಅಸಮಾಧಾನಗೊಂಡರು.

ಬೆಳ್ಳಂಬೆಳಗ್ಗೆಯೇ ತಂಬಾಕು ಹರಾಜು ಪೂಜೆ ನೆರವೇರಿಸಿದ ಬಿಜೆಪಿ ಸಂಸದ ಪ್ರತಾಪ್‌ ಸಿಂಹಗೆ ರೈತರಿಂದ ಘೇರಾವ್
ಬೆಳ್ಳಂಬೆಳಗ್ಗೆಯೇ ತಂಬಾಕು ಹರಾಜು ಪೂಜೆ ನೆರವೇರಿಸಿದ ಬಿಜೆಪಿ ಸಂಸದ ಪ್ರತಾಪ್‌ ಸಿಂಹಗೆ ರೈತರಿಂದ ಘೇರಾವ್
TV9 Web
| Edited By: |

Updated on:Sep 24, 2021 | 10:43 AM

Share

ಮೈಸೂರು: ತಂಬಾಕು ಹರಾಜು ಪೂಜೆಗೆ ಬಂದಿದ್ದ ಬಿಜೆಪಿ ಸಂಸದ ಪ್ರತಾಪ್‌ ಸಿಂಹಗೆ ರೈತರಿಂದ ಘೇರಾವ್ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ತಂಬಾಕು ಹರಾಜು ಮಾರ್ಕೆಟ್‌ನಲ್ಲಿ ಬಿಜೆಪಿ ಸಂಸದ ಪ್ರತಾಪ್‌ ಸಿಂಹಗೆ ರೈತರು ಘೇರಾವ್ ಮಾಡಿದ್ದಾರೆ.

ಮುಹೂರ್ತ ನೋಡಿ ಪೂಜೆ ಆರಂಭಿಸಿದ್ದಕ್ಕೆ ಗರಂ ಆದ ರೈತರು ಆರಂಭದಲ್ಲೇ ಕಡಿಮೆ ಬೆಲೆಗೆ ಹರಾಜಾಗಿದ್ದಕ್ಕೂ ಅಸಮಾಧಾನಗೊಂಡರು. ಬೆಳಗ್ಗೆಯೇ ಏಕೆ ಆರಂಭ ಮಾಡುತ್ತಿದ್ದೀರೆಂದು ರೈತರು ಪ್ರಶ್ನೆ ಮಾಡಿದರು. ಅದಕ್ಕೆ ಮುಹೂರ್ತ ನೋಡಿ ಆರಂಭ ಮಾಡ್ತಿದ್ದೇವೆ ಎಂದು ಸಂಸದ ಪ್ರತಾಪ್ ಉತ್ತರಿಸಿದರು. ಅದಕ್ಕೆ ತಂಬಾಕು ಹರಾಜು ಪೂಜೆಗೆ ಬಂದಿದ್ದ ಪ್ರತಾಪ್ ಸಿಂಹ ಮತ್ತು ಮಾಜಿ ಸಂಸದ ಸಿ.ಹೆಚ್. ವಿಜಯ ಶಂಕರ್‌ಗೆ ಘೇರಾವ್ ಮಾಡಿದ್ದಾರೆ.

ಈ ವೇಳೆ ರೈತರೊಂದಿಗೆ ಮಾತಿನ ಚಕಮಕಿ ನಡೆಯಿತು. ಸರಿಯಾಗಿ ಆರಂಭಿಕ ಬೆಲೆ‌‌ ನೀಡಿಲ್ಲ ಎಂದು ತರಾಟೆಗೆ ಎತೆಗೆದುಕೊಂಡರು. ಕೇವಲ 185 ರೂಪಾಯಿ ಅರಂಭಿಕ ಬೆಲೆ ನೀಡಲಾಗಿದೆ ಎಂದು ರೈತರು ಅಸಮಾಧಾನಗೊಂಡರು. ಬೆಳಗ್ಗೆ 7.30ಕ್ಕೆ ಪ್ರತಾಪ್ ಸಿಂಹ ಪೂಜೆ ಮಾಡಿದರು. ಇಷ್ಟು ಬೇಗ ಯಾಕೆ ಪೂಜೆ ಮಾಡಿದ್ರಿ ಎಂದು ಮುತ್ತಿಗೆ ಹಾಕಿದ ರೈತರು ಪ್ರಶ್ನಿಸಿದರು.

ಇದನ್ನೂ ಓದಿ: ಜಮೀನು ದಾಖಲೆ ಪತ್ರಕ್ಕೆ ಸತಾಯಿಸುತ್ತಿರುವ ಅಧಿಕಾರಿಗಳು, ಬಸ್ ನಿಲ್ದಾಣದಲ್ಲೇ‌ ವಾಸ ಮಾಡಿರುವ ಕುಟುಂಬ

ಇದನ್ನೂ ಓದಿ: ನಮ್ಮ ಶಾಸಕರೇ ಡಿಸಿಸಿ ಬ್ಯಾಂಕ್‌ಗಳಲ್ಲಿ 245 ಕೋಟಿ ಸಾಲ ಪಡೆದು ಒಂದೇ ಒಂದು ರೂ ಕಟ್ಟಿಲ್ಲ! ಸಹಕಾರ ಸಚಿವ ಸೋಮಶೇಖರ್ ಅಳಲು

(tobacco farmers gherao mysore mp pratap simha in piriyapatna)

Published On - 10:33 am, Fri, 24 September 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ