AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿಂದು ಹೊಸದಾಗಿ 78 ಜನರಿಗೆ ಕೊರೊನಾ ಸೋಂಕು; ಓರ್ವ ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಡಿ.22) ಕೊರೊನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇನ್ನು ಬೆಂಗಳೂರು(Bengaluru)ನಗರದಲ್ಲೇ ಹೊಸದಾಗಿ 68 ಜನರಿಗೆ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಕ್ರಿಯ ಕೇಸ್‌ಗಳ ಸಂಖ್ಯೆ 175ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು ಹೊಸದಾಗಿ 78 ಜನರಿಗೆ ಕೊರೊನಾ ಸೋಂಕು; ಓರ್ವ ಸಾವು
ಕರ್ನಾಟಕದಲ್ಲಿ ಕೋವಿಡ್ ಕೇಸ್​
ವಿನಯ್​ ಕಾಶಪ್ಪನವರ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 22, 2023 | 8:21 PM

Share

ಬೆಂಗಳೂರು, ಡಿ.22: ರಾಜ್ಯದಲ್ಲಿ ಇಂದು ಹೊಸದಾಗಿ 78 ಜನರಿಗೆ ಕೊರೊನಾ ಸೋಂಕು (Corona virus) ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇನ್ನು ಬೆಂಗಳೂರು(Bengaluru)ನಗರದಲ್ಲೇ ಹೊಸದಾಗಿ 68 ಜನರಿಗೆ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಕ್ರಿಯ ಕೇಸ್‌ಗಳ ಸಂಖ್ಯೆ 175ಕ್ಕೆ ಏರಿಕೆಯಾಗಿದ್ದು, 162 ಸೋಂಕಿತರು ಹೋಂ ಐಸೋಲೇಷನ್‌ನಲ್ಲಿ ಇದ್ದರೆ, 13 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 3.29 ಕ್ಕೆ ಏರಿಕೆಯಾಗಿದೆ.

ಕೋವಿಡ್ ನಿಯಂತ್ರಣಕ್ಕೆ ಸಂಪುಟ ಉಪ ಸಮಿತಿ ರಚನೆ

ರಾಜ್ಯದಲ್ಲಿ ಕೊರೊನಾ ವೈರಸ್​ ಹೆಚ್ಚಾಗುತ್ತಿರುವ ಹಿನ್ನಲೆ ರಾಜ್ಯ ಸರ್ಕಾರ ಕೋವಿಡ್​ ನಿರ್ವಹಣೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಮೂರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚಿಸಿದೆ. ಸಚಿವರಾದ ಹಚ್. ಸಿ.ಮಹದೇವಪ್ಪ, ಶರಣು ಪ್ರಕಾಶ್ ಪಾಟೀಲ್ ಹಾಗೂ ಎಂ. ಸಿ ಸುಧಾಕರ್ ಅವರನ್ನು ಉಪಸಮಿತಿ ಸದಸ್ಯರನ್ನಾಗಿ ನೇಮಕ ಮಾಡಿದೆ. ಈ ಸಮಿತಿಯು ಕೊವಿಡ್ ಸೇರಿ ಸಾಂಕ್ರಾಮಿಕ ರೋಗಗಳ ಕುರಿತು ಪರಾಮರ್ಶಿಸಲಿದೆ.

ಇದನ್ನೂ ಓದಿ:ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಪುಟ ಉಪ ಸಮಿತಿ ರಚನೆ: ಸಮಿತಿಯಲ್ಲಿ ಯಾರ್ಯಾರು ಇದ್ದಾರೆ?

ಬೆಂಗಳೂರು ನಗರದ ಆಸ್ಪತ್ರೆಗಳಲ್ಲಿ ಸಿದ್ಧತೆ

ಇನ್ನು ಕೊರೊನಾ ಹಾಟ್​ಸ್ಪಾಟ್​ ಆಗುತ್ತಿರುವ ವಿಕ್ಟೋರಿಯಾ, ವಾಣಿ ವಿಲಾಸ, ಮಿಂಟೋ ಆಸ್ಪತ್ರೆಗಳಲ್ಲಿ ಸಿ‌ದ್ಧತೆ ಮಾಡಿಕೊಳ್ಳಲಾಗಿದೆ. ಆಸ್ಪತ್ರೆಯ ಒಪಿಡಿ ಬ್ಲಾಕ್​ಗಳಲ್ಲಿ ಟ್ರಯಾಜ್ ಸೆಂಟರ್ ನಿರ್ಮಾಣ ಮಾಡಲಾಗಿದೆ. ನಿತ್ಯ ಆಸ್ಪತ್ರೆ ಕ್ಯಾಂಪಸ್​ನಲ್ಲಿ ಸಿಬ್ಬಂದಿಗಳು RT-PCR ಟೆಸ್ಟ್ ಮಾಡುತ್ತಿದ್ದಾರೆ. ಅದರಂತೆ ನಿನ್ನೆ 200 ಜನರಿಗೆ ಟೆಸ್ಟ್ ಮಾಡಲಾಗಿದ್ದು, 10 ಜನರಿಗೆ ಪಾಸಿಟಿವ್​ ಕಂಡುಬಂದಿತ್ತು. ಕೊವಿಡ್ ಸೋಂಕಿತರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಪುರುಷರು, ಮಹಿಳೆಯರು, ಮಕ್ಕಳಿಗೆ ಪ್ರತ್ಯೇಕ ವಾರ್ಡ್​ ನಿರ್ಮಾಣ ಮಾಡಲಾಗಿದೆ. ಐಸಿಯುನಲ್ಲಿ 6 ಬೆಡ್​ಗಳನ್ನು ಇರಿಸಲಾಗಿದೆ. ಚಿಕಿತ್ಸೆ ನೀಡಲು ನರ್ಸ್, ವೈದ್ಯರು, ಟೆಕ್ನಷಿಯನ್ಸ್​​​ಗಳನ್ನು ಆಸ್ಪತ್ರೆ ಹೊಂದಿದೆ. ಆಸ್ಪತ್ರೆಯಲ್ಲಿ ಪಿಪಿಇ ಕಿಟ್, ಮಾಸ್ಕ್, ಆಕ್ಸಿಜನ್ ಸಿಲಿಂಡರ್, ಲಿಕ್ವಿಡ್ ಆಕ್ಸಿಜನ್ ಹಾಗೂ ಆಕ್ಸಿಜನ್ ಜನರೇಟರ್​ಗಳನ್ನ ಪರಿಶೀಲಿಸಿ ಸಿದ್ಧಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:59 pm, Fri, 22 December 23

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ