ಹಾಸನಾಂಬೆ ವಾರ್ಷಿಕ ದರ್ಶನೋತ್ಸವಕ್ಕೆ ತೆರೆ; ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಂದ್

ಹಾಸನ: ಕಳೆದ 11 ದಿನಗಳಿಂದ ನಡೆಯುತ್ತಿದ್ದ ಹಾಸನಾಂಬೆಯ ದರ್ಶನೋತ್ಸವ ಇಂದು ಬೆಳಗ್ಗೆ 6 ಗಂಟೆಗೆ ಮುಕ್ತಾಯವಾಗಿದೆ. ಒಟ್ಟು 13 ದಿನ ದೇವಾಲಯದ ಗರ್ಭಗುಡಿ ಬಾಗಿಲು ತೆರೆದಿತ್ತು. ಅದರಲ್ಲಿ 11 ದಿನಗಳ ಕಾಲ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಇಂದು ಮಧ್ಯಾಹ್ನ 12.30ಕ್ಕೆ ಶಾಸ್ತ್ರೋಕ್ತವಾಗಿ ದೇವಾಲಯದ ಗರ್ಭಗುಡಿ ಬಾಗಿಲು ಮುಚ್ಚಲಾಗುವುದು. ಇಂದು ವಿಸರ್ಜನಾ ಪೂಜೆ ಬಳಿಕ ಉಸ್ತುವಾರಿ ಸಚಿವ ಮಾಧುಸ್ವಾಮಿ, ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲನ್ನು ಹಾಸನಾಂಬೆ ದೇವಾಲಯದ ಆಡಳಿತ ಮಂಡಳಿಯವರು ಮುಚ್ಚಲಿದ್ದಾರೆ. ಕಳೆದ 11 […]

ಹಾಸನಾಂಬೆ ವಾರ್ಷಿಕ ದರ್ಶನೋತ್ಸವಕ್ಕೆ ತೆರೆ; ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಂದ್
ಹಾಸನಾಂಬೆ
ಸಾಧು ಶ್ರೀನಾಥ್​

Updated on: Oct 29, 2019 | 11:21 AM

ಹಾಸನ: ಕಳೆದ 11 ದಿನಗಳಿಂದ ನಡೆಯುತ್ತಿದ್ದ ಹಾಸನಾಂಬೆಯ ದರ್ಶನೋತ್ಸವ ಇಂದು ಬೆಳಗ್ಗೆ 6 ಗಂಟೆಗೆ ಮುಕ್ತಾಯವಾಗಿದೆ. ಒಟ್ಟು 13 ದಿನ ದೇವಾಲಯದ ಗರ್ಭಗುಡಿ ಬಾಗಿಲು ತೆರೆದಿತ್ತು. ಅದರಲ್ಲಿ 11 ದಿನಗಳ ಕಾಲ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.

ಇಂದು ಮಧ್ಯಾಹ್ನ 12.30ಕ್ಕೆ ಶಾಸ್ತ್ರೋಕ್ತವಾಗಿ ದೇವಾಲಯದ ಗರ್ಭಗುಡಿ ಬಾಗಿಲು ಮುಚ್ಚಲಾಗುವುದು. ಇಂದು ವಿಸರ್ಜನಾ ಪೂಜೆ ಬಳಿಕ ಉಸ್ತುವಾರಿ ಸಚಿವ ಮಾಧುಸ್ವಾಮಿ, ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲನ್ನು ಹಾಸನಾಂಬೆ ದೇವಾಲಯದ ಆಡಳಿತ ಮಂಡಳಿಯವರು ಮುಚ್ಚಲಿದ್ದಾರೆ.

ಕಳೆದ 11 ದಿನಗಳಿಂದ ಲಕ್ಷಾಂತರ ಭಕ್ತರು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಕೊನೆಯ ಮೂರು ದಿನ ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಬೆಳಗ್ಗೆಯಿಂದಲೇ ದೇವಾಲಯದಲ್ಲಿ ಭಕ್ತರು ತುಂಬಿ ತುಳುಕುತ್ತಿದ್ದರು.

Published On - 9:55 am, Tue, 29 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us