AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಸವಾರರಿಗೆ ಬೆಲೆ ಏರಿಕೆ ಬಿಸಿ: ಕರ್ನಾಟಕದ 9 ಹೆದ್ದಾರಿಗಳಲ್ಲಿ ಏಪ್ರಿಲ್ 1 ರಿಂದ ಟೋಲ್ ದರ ಶೇ 5ರಷ್ಟು ಹೆಚ್ಚಳ

ಏಪ್ರಿಲ್ 1 ರಿಂದ ವಾಹನ ಸವಾರರ ಜೇಬಿಗೆ ಕತ್ತರಿ ಬೀಳಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೇಶಾದ್ಯಂತ ಟೋಲ್ ದರವನ್ನು ಶೇ 5 ರಷ್ಟು ಹೆಚ್ಚಿಸಲು ನಿರ್ಧರಿಸಿದ್ದು, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸೇರಿದಂತೆ ಕರ್ನಾಟಕದ 9 ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿಯಾಗಲಿದೆ. ವಾರ್ಷಿಕ ಪಾಸ್ ದರದಲ್ಲೂ ಏರಿಕೆಯಾಗುತ್ತಿದ್ದು, ಈ ಬೆಲೆ ಏರಿಕೆಯ ಬಿಸಿ ಯಾವೆಲ್ಲಾ ವಾಹನಗಳಿಗೆ ತಟ್ಟಲಿದೆ? ಮತ್ತು ಯಾವೆಲ್ಲಾ ಹೆದ್ದಾರಿಗಳಲ್ಲಿ ದರ ಹೆಚ್ಚಾಗಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ವಾಹನ ಸವಾರರಿಗೆ ಬೆಲೆ ಏರಿಕೆ ಬಿಸಿ: ಕರ್ನಾಟಕದ 9 ಹೆದ್ದಾರಿಗಳಲ್ಲಿ ಏಪ್ರಿಲ್ 1 ರಿಂದ ಟೋಲ್ ದರ ಶೇ 5ರಷ್ಟು ಹೆಚ್ಚಳ
ಏಪ್ರಿಲ್ 1 ರಿಂದ ಟೋಲ್ ಹೆಚ್ಚಳ (ಸಾಂದರ್ಭಿಕ ಚಿತ್ರ)Image Credit source: tv9
Kiran Surya
| Edited By: |

Updated on: Mar 30, 2026 | 7:34 AM

Share

ಬೆಂಗಳೂರು, ಮಾರ್ಚ್ 30: ಹೊಸ ಹಣಕಾಸು ವರ್ಷದ ಆರಂಭದ ದಿನವೇ ವಾಹನ ಸವಾರರಿಗೆ ದೊಡ್ಡ ಶಾಕ್ ಎದುರಾಗಿದೆ. ಏಪ್ರಿಲ್ 1 ಬುಧವಾರದಿಂದ ಜಾರಿಗೆ ಬರುವಂತೆ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಪ್ರಯಾಣ ಶುಲ್ಕವನ್ನು (Toll Price) ಹೆಚ್ಚಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ತೀರ್ಮಾನಿಸಿದೆ. ಇದರಿಂದಾಗಿ ಕರ್ನಾಟಕದ ಪ್ರಮುಖ 9 ಹೆದ್ದಾರಿಗಳಲ್ಲಿ ಸಂಚಾರ ನಡೆಸುವ ಕಾರು, ಬಸ್ ಮತ್ತು ಲಾರಿಗಳ ಟೋಲ್ ದರದಲ್ಲಿ ಶೇ 4 ರಿಂದ 5 ರಷ್ಟು ಏರಿಕೆಯಾಗಲಿದೆ.

ಟೋಲ್ ವಾರ್ಷಿಕ ಪಾಸ್ ದರವೂ ಏರಿಕೆ!

ರಾಜ್ಯದ ಆರ್ಥಿಕ ಜೀವನಾಡಿಗಳಂತಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ, ಬೆಂಗಳೂರು-ತುಮಕೂರು, ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು-ಹಾಸನ ಸೇರಿದಂತೆ ಒಟ್ಟು 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಸ ದರ ಅನ್ವಯವಾಗಲಿದೆ. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು ಹೊರತುಪಡಿಸಿ ಉಳಿದೆಲ್ಲಾ ವರ್ಗದ ವಾಹನಗಳಿಗೆ ಈ ಹೊರೆ ತಟ್ಟಲಿದೆ. ವಿಶೇಷವೆಂದರೆ ವಾರ್ಷಿಕ ಪಾಸ್ ದರವೂ ಸಹ ಏರಿಕೆಯಾಗಲಿದ್ದು, 3,000 ರೂ. ಇದ್ದ ಶುಲ್ಕ ಈಗ 3,075 ರೂ.ಗೆ ಏರಲಿದೆ.

ಯಾವೆಲ್ಲ ಹೆದ್ದಾರಿಗಳಲ್ಲಿ ಟೋಲ್ ದರ ಹೆಚ್ಚಳ?

  • ರಾಷ್ಟ್ರೀಯ ಹೆದ್ದಾರಿ 48: ಬೆಂಗಳೂರು – ತುಮಕೂರು-ಹಾವೇರಿ-ಬೆಳಗಾವಿ-ಮುಂಬೈ
  • ರಾಷ್ಟ್ರೀಯ ಹೆದ್ದಾರಿ 275: ಬೆಂಗಳೂರು – ಮೈಸೂರು ಎಕ್ಸ್​​ಪ್ರೆಸ್ ವೇ
  • ರಾಷ್ಟ್ರೀಯ ಹೆದ್ದಾರಿ 44: ಬೆಂಗಳೂರು – ಹೈದರಾಬಾದ್
  • ರಾಷ್ಟ್ರೀಯ ಹೆದ್ದಾರಿ – 75 ಬೆಂಗಳೂರು- ಹಾಸನ- ಮಂಗಳೂರು
  • ರಾಷ್ಟ್ರೀಯ ಹೆದ್ದಾರಿ 75: ಬೆಂಗಳೂರು-ಹೊಸಕೋಟೆ-ಕೋಲಾರ
  • ರಾಷ್ಟ್ರೀಯ ಹೆದ್ದಾರಿ 66: ಮಂಗಳೂರು-ಉಡುಪಿ-ಕುಂದಾಪುರ
  • ರಾಷ್ಟ್ರೀಯ ಹೆದ್ದಾರಿ 50/52: ವಿಜಯಪುರ-ಹೊಸಪೇಟೆ-ಚಿತ್ರದುರ್ಗ
  • ರಾಷ್ಟ್ರೀಯ ಹೆದ್ದಾರಿ 150A: ಹಿರಿಯೂರು-ಬಳ್ಳಾರಿ-ಜೇವರ್ಗಿ
  • ರಾಷ್ಟ್ರೀಯ ಹೆದ್ದಾರಿ 766 ಮೈಸೂರು ಟು ಗುಂಡ್ಲಪೇಟೆ

ಇದನ್ನೂ ಓದಿ: ಕರ್ನಾಟಕ ವಾಹನ ಸವಾರರಿಗೆ ಶಾಕ್, ಏಪ್ರಿಲ್ 1 ರಿಂದ ಟೋಲ್ ದರ ಹೆಚ್ಚಳ

ಸಾರ್ವಜನಿಕರ ಆಕ್ರೋಶ

ಪ್ರತಿ ವರ್ಷ ನಿರ್ವಹಣೆಯ ಹೆಸರಿನಲ್ಲಿ ಶೇ 5ರಷ್ಟು ಟೋಲ್ ದರ ಏರಿಕೆ ಮಾಡುತ್ತಿರುವುದಕ್ಕೆ ವಾಹನ ಸವಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ನಮ್ಮ ಸಂಬಳ ವರ್ಷಕ್ಕೆ ಶೇ 1 ಅಥವಾ 2ರಷ್ಟು ಮಾತ್ರ ಏರಿಕೆಯಾಗುತ್ತದೆ, ಆದರೆ ಟೋಲ್ ದರ ಮಾತ್ರ ಶೇ. 5ರಷ್ಟು ಹೆಚ್ಚಾಗುತ್ತಿದೆ. ಇದು ಎಷ್ಟು ಸರಿ’ ಎಂದು ವಾಹನ ಮಾಲೀಕರು ಪ್ರಶ್ನಿಸುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ಟೋಲ್ ದರ ಏರಿಕೆ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮುಲು-ಸಚಿವ ತಿಮ್ಮಾಪುರ ಪ್ರಚಾರದ ವೇಳೆ ಕೈ ಕೈ ಮಿಲಾಯಿಸಿಸಿದ ಕಾರ್ಯಕರ್ತರು
ರಾಮುಲು-ಸಚಿವ ತಿಮ್ಮಾಪುರ ಪ್ರಚಾರದ ವೇಳೆ ಕೈ ಕೈ ಮಿಲಾಯಿಸಿಸಿದ ಕಾರ್ಯಕರ್ತರು
ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾ
ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾ
ತನ್ನ ಕಾರು ಚಾಲಕನ ಮಗನಿಗೆ ಎಲೆಕ್ಷನ್ ಟಿಕೆಟ್ ಕೊಟ್ಟ ವಿಜಯ್: ವಿಡಿಯೋ
ತನ್ನ ಕಾರು ಚಾಲಕನ ಮಗನಿಗೆ ಎಲೆಕ್ಷನ್ ಟಿಕೆಟ್ ಕೊಟ್ಟ ವಿಜಯ್: ವಿಡಿಯೋ
‘ಧುರಂಧರ್ 2’, ‘ಕೇರಳ ಸ್ಟೋರಿ’ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
‘ಧುರಂಧರ್ 2’, ‘ಕೇರಳ ಸ್ಟೋರಿ’ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
ರಹಾನೆ ಅಬ್ಬರಕ್ಕೆ ಹೌಹಾರಿದ ಮುಂಬೈ ಬೌಲರ್ಸ್
ರಹಾನೆ ಅಬ್ಬರಕ್ಕೆ ಹೌಹಾರಿದ ಮುಂಬೈ ಬೌಲರ್ಸ್
ಜಿಎಂ ಸಿದ್ದೇಶ್ವರ್, ರೇಣುಕಾಚಾರ್ಯರನ್ನು ಒಗ್ಗೂಡಿಸಿದ ವಿಜಯೇಂದ್ರ
ಜಿಎಂ ಸಿದ್ದೇಶ್ವರ್, ರೇಣುಕಾಚಾರ್ಯರನ್ನು ಒಗ್ಗೂಡಿಸಿದ ವಿಜಯೇಂದ್ರ
ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿರುವ B-52 ಬಾಂಬರ್!
ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿರುವ B-52 ಬಾಂಬರ್!
ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?
ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?
ಆರ್​​ಸಿಬಿ ಮ್ಯಾಚ್ ಸುಸೂತ್ರ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಆರ್​​ಸಿಬಿ ಮ್ಯಾಚ್ ಸುಸೂತ್ರ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ರಾಮ ಮಂದಿರದಲ್ಲಿ ಹನುಮ ಭಕ್ತಿ;ಮಂಗಳಾರತಿವರೆಗೂ ಕಾದು ಪ್ರಾರ್ಥನೆಗೈದ ಕೋತಿ
ರಾಮ ಮಂದಿರದಲ್ಲಿ ಹನುಮ ಭಕ್ತಿ;ಮಂಗಳಾರತಿವರೆಗೂ ಕಾದು ಪ್ರಾರ್ಥನೆಗೈದ ಕೋತಿ