AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ‘ಹೈ ಅಲರ್ಟ್’: ಟೊಮೆಟೊ ಜ್ವರದ ಭೀತಿ, ಮಕ್ಕಳು ಕೈ ಬೆರಳುಗಳನ್ನು ಚೀಪದಂತೆ ಎಚ್ಚರವಹಿಸಿ

ನೆರೆಯ ರಾಜ್ಯಗಳಾದ ಕೇರಳ, ತಮಿಳುನಾಡಿನಲ್ಲಿ ಟೊಮೆಟೊ ಜ್ವರ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲೂ ಭೀತಿ ಎದುರಾಗಿದೆ. ಈ ನಿಟ್ಟಿನಲ್ಲಿ ಗಡಿಭಾಗದಲ್ಲಿ ಕಟ್ಟೆಚ್ಚರವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

ಕರ್ನಾಟಕ 'ಹೈ ಅಲರ್ಟ್': ಟೊಮೆಟೊ ಜ್ವರದ ಭೀತಿ, ಮಕ್ಕಳು ಕೈ ಬೆರಳುಗಳನ್ನು ಚೀಪದಂತೆ ಎಚ್ಚರವಹಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 27, 2022 | 11:27 AM

Share

ಬೆಂಗಳೂರು: ನೆರೆಯ ರಾಜ್ಯಗಳಲ್ಲಿ ಟೊಮೆಟೊ ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕರ್ನಾಟಕ ರಾಜ್ಯಕ್ಕೂ ಕಾಲಿಡುವ ಭೀತಿ ಎದುರಾಗಿದೆ. ಈ ನಿಟ್ಟಿನಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಆರೋಗ್ಯ ಇಲಾಖೆ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ನೆರೆಯ ರಾಜ್ಯ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಮೇ 6ರಂದು ಮೊದಲ ಪ್ರಕರಣ ದಾಖಲಾಗಿತ್ತು. ಸದ್ಯ ಕೇರಳದಲ್ಲಿ ಈ ಪ್ರಕರಣಗಳ ಸಂಖ್ಯೆ ವೇಗವಾಗಿ ಏರಿಕೆಯಾಗಿದ್ದು, ತಮಿಳುನಾಡಿನಲ್ಲೂ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಡುವೆ ಕರ್ನಾಟಕದಲ್ಲೂ ಅಕಾಲಿಕ ಮಳೆಯ ನಡುವೆ ಟೊಮೆಟೊ ಜ್ವರದ ಭೀತಿ ಎದುರಾದ ಹಿನ್ನೆಲೆ ಆರೋಗ್ಯ ಇಲಾಖೆಯು ಕಟ್ಟೆಚ್ಚರ ವಹಿಸಲು ಚಿಂತನೆ ನಡೆಸಿದೆ.

ಟೊಮೆಟೊ ಫ್ಲೂ ಹೆಚ್ಚುತ್ತಿರುವ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ನೀಡಿದ ಎಚ್ಚರಿಕೆಯ ಬೆನ್ನಲ್ಲೆ ರಾಜ್ಯದಲ್ಲಿ ಟೊಮೆಟೊ ಜ್ವರ ಹೆಚ್ಚದಂತೆ ಅಗತ್ಯ ಕ್ರಮಕ್ಕೆ ನಿರ್ಧಾರ ಕೈಗೊಂಡಿರುವ ಆರೋಗ್ಯ ಇಲಾಖೆಯು, ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲು ಹಾಗೂ ಜನರ ಮೇಲೆ ನಿಗಾ ಇಡುವಂತೆ ಡಿಹೆಚ್​ಓಗಳಿಗೆ ಸೂಚನೆ ನೀಡಿದೆ.

ಮಕ್ಕಳಲ್ಲಿ ಬಹು ಬೇಗ ಹರಡುತ್ತಿರುವ ಫ್ಲೂ

ಟೊಮೆಟೊ ಜ್ವರವು ಮಕ್ಕಳಲ್ಲಿ ಅದರಲ್ಲೂ ಶಾಲೆಗೆ ಹೋಗುತ್ತಿರುವ ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ಭೀತಿ ಹೆಚ್ಚಾಗಿದೆ. ಈ ಜ್ವರವು ಮಕ್ಕಳಲ್ಲಿ ಬಹುಬೇಗನೆ ಹರಡುತ್ತಿದ್ದು, ಮಕ್ಕಳ ಬಗ್ಗೆ ಕಾಳಜಿ ವಹಿಸುವಂತೆ ಹಾಗೂ ಮಕ್ಕಳು ಕೈ ಬೆರಳುಗಳನ್ನು ಚೀಪುವುದುನ್ನು ತಪ್ಪಿಸುವಂತೆ ಪೋಷಕರಿಗೆ ಆರೋಗ್ಯ ಇಲಾಖೆಯು ಸೂಚನೆ ನೀಡಿದೆ.

ಟೊಮೆಟೊ ಜ್ವರದ ಲಕ್ಷಣಗಳು

ಮೊದಲಿಗೆ ಸಣ್ಣ ಗುಳ್ಳೆಗಳು ಕಾಣಿಸಿಕೊಳ್ಳುತ್ತವೆ, ಮೈ ಕೈ, ಬಾಯಿ ಸುತ್ತ ಕೆಂಪು ಗುಳ್ಳೆಗಳು, ಅತಿಸಾರ, ಜ್ವರ, ವಾಂತಿ, ಮೈಕೈ‌ನೋವು ಟೊಮೆಟೊ ಜ್ವರದ ಲಕ್ಷಣಗಳಾಗಿವೆ. ಇಂತಹ ಲಕ್ಷಣಗಳು ಕಂಡುಬಂದರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರದೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:25 am, Sat, 27 August 22

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!