AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ‘ಹೈ ಅಲರ್ಟ್’: ಟೊಮೆಟೊ ಜ್ವರದ ಭೀತಿ, ಮಕ್ಕಳು ಕೈ ಬೆರಳುಗಳನ್ನು ಚೀಪದಂತೆ ಎಚ್ಚರವಹಿಸಿ

ನೆರೆಯ ರಾಜ್ಯಗಳಾದ ಕೇರಳ, ತಮಿಳುನಾಡಿನಲ್ಲಿ ಟೊಮೆಟೊ ಜ್ವರ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲೂ ಭೀತಿ ಎದುರಾಗಿದೆ. ಈ ನಿಟ್ಟಿನಲ್ಲಿ ಗಡಿಭಾಗದಲ್ಲಿ ಕಟ್ಟೆಚ್ಚರವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

ಕರ್ನಾಟಕ 'ಹೈ ಅಲರ್ಟ್': ಟೊಮೆಟೊ ಜ್ವರದ ಭೀತಿ, ಮಕ್ಕಳು ಕೈ ಬೆರಳುಗಳನ್ನು ಚೀಪದಂತೆ ಎಚ್ಚರವಹಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 27, 2022 | 11:27 AM

Share

ಬೆಂಗಳೂರು: ನೆರೆಯ ರಾಜ್ಯಗಳಲ್ಲಿ ಟೊಮೆಟೊ ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕರ್ನಾಟಕ ರಾಜ್ಯಕ್ಕೂ ಕಾಲಿಡುವ ಭೀತಿ ಎದುರಾಗಿದೆ. ಈ ನಿಟ್ಟಿನಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಆರೋಗ್ಯ ಇಲಾಖೆ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ನೆರೆಯ ರಾಜ್ಯ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಮೇ 6ರಂದು ಮೊದಲ ಪ್ರಕರಣ ದಾಖಲಾಗಿತ್ತು. ಸದ್ಯ ಕೇರಳದಲ್ಲಿ ಈ ಪ್ರಕರಣಗಳ ಸಂಖ್ಯೆ ವೇಗವಾಗಿ ಏರಿಕೆಯಾಗಿದ್ದು, ತಮಿಳುನಾಡಿನಲ್ಲೂ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಡುವೆ ಕರ್ನಾಟಕದಲ್ಲೂ ಅಕಾಲಿಕ ಮಳೆಯ ನಡುವೆ ಟೊಮೆಟೊ ಜ್ವರದ ಭೀತಿ ಎದುರಾದ ಹಿನ್ನೆಲೆ ಆರೋಗ್ಯ ಇಲಾಖೆಯು ಕಟ್ಟೆಚ್ಚರ ವಹಿಸಲು ಚಿಂತನೆ ನಡೆಸಿದೆ.

ಟೊಮೆಟೊ ಫ್ಲೂ ಹೆಚ್ಚುತ್ತಿರುವ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ನೀಡಿದ ಎಚ್ಚರಿಕೆಯ ಬೆನ್ನಲ್ಲೆ ರಾಜ್ಯದಲ್ಲಿ ಟೊಮೆಟೊ ಜ್ವರ ಹೆಚ್ಚದಂತೆ ಅಗತ್ಯ ಕ್ರಮಕ್ಕೆ ನಿರ್ಧಾರ ಕೈಗೊಂಡಿರುವ ಆರೋಗ್ಯ ಇಲಾಖೆಯು, ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲು ಹಾಗೂ ಜನರ ಮೇಲೆ ನಿಗಾ ಇಡುವಂತೆ ಡಿಹೆಚ್​ಓಗಳಿಗೆ ಸೂಚನೆ ನೀಡಿದೆ.

ಮಕ್ಕಳಲ್ಲಿ ಬಹು ಬೇಗ ಹರಡುತ್ತಿರುವ ಫ್ಲೂ

ಟೊಮೆಟೊ ಜ್ವರವು ಮಕ್ಕಳಲ್ಲಿ ಅದರಲ್ಲೂ ಶಾಲೆಗೆ ಹೋಗುತ್ತಿರುವ ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ಭೀತಿ ಹೆಚ್ಚಾಗಿದೆ. ಈ ಜ್ವರವು ಮಕ್ಕಳಲ್ಲಿ ಬಹುಬೇಗನೆ ಹರಡುತ್ತಿದ್ದು, ಮಕ್ಕಳ ಬಗ್ಗೆ ಕಾಳಜಿ ವಹಿಸುವಂತೆ ಹಾಗೂ ಮಕ್ಕಳು ಕೈ ಬೆರಳುಗಳನ್ನು ಚೀಪುವುದುನ್ನು ತಪ್ಪಿಸುವಂತೆ ಪೋಷಕರಿಗೆ ಆರೋಗ್ಯ ಇಲಾಖೆಯು ಸೂಚನೆ ನೀಡಿದೆ.

ಟೊಮೆಟೊ ಜ್ವರದ ಲಕ್ಷಣಗಳು

ಮೊದಲಿಗೆ ಸಣ್ಣ ಗುಳ್ಳೆಗಳು ಕಾಣಿಸಿಕೊಳ್ಳುತ್ತವೆ, ಮೈ ಕೈ, ಬಾಯಿ ಸುತ್ತ ಕೆಂಪು ಗುಳ್ಳೆಗಳು, ಅತಿಸಾರ, ಜ್ವರ, ವಾಂತಿ, ಮೈಕೈ‌ನೋವು ಟೊಮೆಟೊ ಜ್ವರದ ಲಕ್ಷಣಗಳಾಗಿವೆ. ಇಂತಹ ಲಕ್ಷಣಗಳು ಕಂಡುಬಂದರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರದೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:25 am, Sat, 27 August 22

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ