Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎಫೆಕ್ಟ್​: 15 ಕೆಜಿ ಟೊಮ್ಯಾಟೋಗೆ ಕೇವಲ 15 ರೂಪಾಯಿ; ಮನನೊಂದ ರೈತನಿಂದ ಫಸಲು ತುಂಬಿದ ಹೊಲ ನಾಶ

ಸುಮಾರು ₹3 ಲಕ್ಷ ಖರ್ಚು ಮಾಡಿ ಟೊಮ್ಯಾಟೊ ಬೆಳೆದಿದ್ದ ಕಟಮಾಚನಹಳ್ಳಿ ಗ್ರಾಮದ ರೈತ ಶ್ರೀನಿವಾಸಪ್ಪ ಈ ಬಾರಿ ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದರು. ಆದರೆ, ಕೊರೊನಾ ಕಾರಣದಿಂದ 15 ಕೆಜಿ ಟೊಮ್ಯಾಟೊ ಕ್ರೇಟ್‌ಗೆ ಕೇವಲ 15 ರೂ ಸಿಗುತ್ತಿದ್ದು ತೀವ್ರ ನಷ್ಟವನ್ನು ಅನುಭವಿಸುವಂತಾಗಿದೆ.

ಕೊರೊನಾ ಎಫೆಕ್ಟ್​: 15 ಕೆಜಿ ಟೊಮ್ಯಾಟೋಗೆ ಕೇವಲ 15 ರೂಪಾಯಿ; ಮನನೊಂದ ರೈತನಿಂದ ಫಸಲು ತುಂಬಿದ ಹೊಲ ನಾಶ
ಬೆಳೆ ನಾಶಪಡಿಸುತ್ತಿರುವ ರೈತ
Follow us
Skanda
| Updated By: preethi shettigar

Updated on: Apr 24, 2021 | 12:01 PM

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಕರ್ಫ್ಯೂ ಪರಿಣಾಮದಿಂದಾಗಿ ಕೆಲ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಹಾಗೂ ಬೆಲೆ ಸಿಗದೇ ರೈತರು ಕಂಗಾಲಾಗಿದ್ದಾರೆ. ಅತ್ತ ಕರ್ಫ್ಯೂ ವಿಧಿಸದಿದ್ದರೆ ಕೊರೊನಾ ಭಯ, ಇತ್ತ ವಿಧಿಸಿದರೆ ಬೆಲೆ ಸಿಗದೇ ಪರದಾಡಬೇಕಾದ ಭಯ ರೈತರನ್ನು ಆವರಿಸಿದ್ದು, ಅನೇಕರು ಹೈರಾಣಾಗಿದ್ದಾರೆ. ಇದರಿಂದ ಬೇಸತ್ತ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕಟಮಾಚನಹಳ್ಳಿ ಗ್ರಾಮದ ರೈತರೊಬ್ಬರು ತಾವು ಬೆಳೆದ ಟೊಮ್ಯಾಟೋ ಬೆಳೆಯನ್ನು ನಾಶ ಮಾಡಿದ್ದಾರೆ.

ಸುಮಾರು ₹3 ಲಕ್ಷ ಖರ್ಚು ಮಾಡಿ ಟೊಮ್ಯಾಟೊ ಬೆಳೆದಿದ್ದ ಕಟಮಾಚನಹಳ್ಳಿ ಗ್ರಾಮದ ರೈತ ಶ್ರೀನಿವಾಸಪ್ಪ ಈ ಬಾರಿ ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದರು. ಆದರೆ, ಕೊರೊನಾ ಕಾರಣದಿಂದ 15 ಕೆಜಿ ಟೊಮ್ಯಾಟೊ ಕ್ರೇಟ್‌ಗೆ ಕೇವಲ 15 ರೂ ಸಿಗುತ್ತಿದ್ದು ತೀವ್ರ ನಷ್ಟವನ್ನು ಅನುಭವಿಸುವಂತಾಗಿದೆ. ಹೀಗಾಗಿ ಸೂಕ್ತ ಬೆಲೆಗೆ ಟೊಮ್ಯಾಟೋ ಕೊಳ್ಳುವವರಿಲ್ಲವೆಂದು ಬೇಸತ್ತ ರೈತ ಫಸಲು ತುಂಬಿದ್ದ ಹೊಲವನ್ನೇ ನಾಶ ಮಾಡಿದ್ದಾರೆ.

ಕಳೆದ ಬಾರಿಯೂ ಲಾಕ್​ಡೌನ್ ಸಂದರ್ಭದಲ್ಲಿ ಅನೇಕ ರೈತರಿಗೆ ಸೂಕ್ತ ಮಾರುಕಟ್ಟೆ ಸಿಗದೇ, ಕೊಳ್ಳುವ ಗ್ರಾಹಕರಿಲ್ಲದೇ ನಷ್ಟ ಎದುರಾಗಿತ್ತು. ಕಳೆದ ವರ್ಷ ಅನುಭವಿಸಿದ್ದ ನಷ್ಟವನ್ನು ಈ ಬಾರಿ ಉತ್ತಮ ಬೆಳೆ ತೆಗೆದು ಸರಿದೂಗಿಸಿಕೊಳ್ಳೋಣವೆಂಬ ಆಸೆಯಲ್ಲಿದ್ದ ರೈತರಿಗೆ ಕೊರೊನಾ ಎರಡನೇ ಅಲೆ ಮತ್ತೆ ಸಂಕಷ್ಟವನ್ನು ತಂದೊಡ್ಡಿದೆ.

ಇದನ್ನೂ ಓದಿ: ಹುಣಸೆ ಹಣ್ಣಿಗೆ ಬಂಪರ್ ಬೆಲೆ; ಕೊರೊನಾದಿಂದ ಕಂಗೆಟ್ಟ ರೈತರ ಮೊಗದಲ್ಲಿ ಮಂದಹಾಸ

ಬಾಗಲಕೋಟೆ ರೈತರಲ್ಲಿ ಆತಂಕ; ಕೊರೊನಾ ಎರಡನೇ ಅಲೆಗೆ ತತ್ತರಿಸಿದ ಟೊಮ್ಯಾಟೊ ಬೆಳೆಗಾರ

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ