ಕೊರೊನಾ ಎಫೆಕ್ಟ್​: 15 ಕೆಜಿ ಟೊಮ್ಯಾಟೋಗೆ ಕೇವಲ 15 ರೂಪಾಯಿ; ಮನನೊಂದ ರೈತನಿಂದ ಫಸಲು ತುಂಬಿದ ಹೊಲ ನಾಶ

ಸುಮಾರು ₹3 ಲಕ್ಷ ಖರ್ಚು ಮಾಡಿ ಟೊಮ್ಯಾಟೊ ಬೆಳೆದಿದ್ದ ಕಟಮಾಚನಹಳ್ಳಿ ಗ್ರಾಮದ ರೈತ ಶ್ರೀನಿವಾಸಪ್ಪ ಈ ಬಾರಿ ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದರು. ಆದರೆ, ಕೊರೊನಾ ಕಾರಣದಿಂದ 15 ಕೆಜಿ ಟೊಮ್ಯಾಟೊ ಕ್ರೇಟ್‌ಗೆ ಕೇವಲ 15 ರೂ ಸಿಗುತ್ತಿದ್ದು ತೀವ್ರ ನಷ್ಟವನ್ನು ಅನುಭವಿಸುವಂತಾಗಿದೆ.

ಕೊರೊನಾ ಎಫೆಕ್ಟ್​: 15 ಕೆಜಿ ಟೊಮ್ಯಾಟೋಗೆ ಕೇವಲ 15 ರೂಪಾಯಿ; ಮನನೊಂದ ರೈತನಿಂದ ಫಸಲು ತುಂಬಿದ ಹೊಲ ನಾಶ
ಬೆಳೆ ನಾಶಪಡಿಸುತ್ತಿರುವ ರೈತ
Follow us
| Updated By: preethi shettigar

Updated on: Apr 24, 2021 | 12:01 PM

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಕರ್ಫ್ಯೂ ಪರಿಣಾಮದಿಂದಾಗಿ ಕೆಲ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಹಾಗೂ ಬೆಲೆ ಸಿಗದೇ ರೈತರು ಕಂಗಾಲಾಗಿದ್ದಾರೆ. ಅತ್ತ ಕರ್ಫ್ಯೂ ವಿಧಿಸದಿದ್ದರೆ ಕೊರೊನಾ ಭಯ, ಇತ್ತ ವಿಧಿಸಿದರೆ ಬೆಲೆ ಸಿಗದೇ ಪರದಾಡಬೇಕಾದ ಭಯ ರೈತರನ್ನು ಆವರಿಸಿದ್ದು, ಅನೇಕರು ಹೈರಾಣಾಗಿದ್ದಾರೆ. ಇದರಿಂದ ಬೇಸತ್ತ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕಟಮಾಚನಹಳ್ಳಿ ಗ್ರಾಮದ ರೈತರೊಬ್ಬರು ತಾವು ಬೆಳೆದ ಟೊಮ್ಯಾಟೋ ಬೆಳೆಯನ್ನು ನಾಶ ಮಾಡಿದ್ದಾರೆ.

ಸುಮಾರು ₹3 ಲಕ್ಷ ಖರ್ಚು ಮಾಡಿ ಟೊಮ್ಯಾಟೊ ಬೆಳೆದಿದ್ದ ಕಟಮಾಚನಹಳ್ಳಿ ಗ್ರಾಮದ ರೈತ ಶ್ರೀನಿವಾಸಪ್ಪ ಈ ಬಾರಿ ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದರು. ಆದರೆ, ಕೊರೊನಾ ಕಾರಣದಿಂದ 15 ಕೆಜಿ ಟೊಮ್ಯಾಟೊ ಕ್ರೇಟ್‌ಗೆ ಕೇವಲ 15 ರೂ ಸಿಗುತ್ತಿದ್ದು ತೀವ್ರ ನಷ್ಟವನ್ನು ಅನುಭವಿಸುವಂತಾಗಿದೆ. ಹೀಗಾಗಿ ಸೂಕ್ತ ಬೆಲೆಗೆ ಟೊಮ್ಯಾಟೋ ಕೊಳ್ಳುವವರಿಲ್ಲವೆಂದು ಬೇಸತ್ತ ರೈತ ಫಸಲು ತುಂಬಿದ್ದ ಹೊಲವನ್ನೇ ನಾಶ ಮಾಡಿದ್ದಾರೆ.

ಕಳೆದ ಬಾರಿಯೂ ಲಾಕ್​ಡೌನ್ ಸಂದರ್ಭದಲ್ಲಿ ಅನೇಕ ರೈತರಿಗೆ ಸೂಕ್ತ ಮಾರುಕಟ್ಟೆ ಸಿಗದೇ, ಕೊಳ್ಳುವ ಗ್ರಾಹಕರಿಲ್ಲದೇ ನಷ್ಟ ಎದುರಾಗಿತ್ತು. ಕಳೆದ ವರ್ಷ ಅನುಭವಿಸಿದ್ದ ನಷ್ಟವನ್ನು ಈ ಬಾರಿ ಉತ್ತಮ ಬೆಳೆ ತೆಗೆದು ಸರಿದೂಗಿಸಿಕೊಳ್ಳೋಣವೆಂಬ ಆಸೆಯಲ್ಲಿದ್ದ ರೈತರಿಗೆ ಕೊರೊನಾ ಎರಡನೇ ಅಲೆ ಮತ್ತೆ ಸಂಕಷ್ಟವನ್ನು ತಂದೊಡ್ಡಿದೆ.

ಇದನ್ನೂ ಓದಿ: ಹುಣಸೆ ಹಣ್ಣಿಗೆ ಬಂಪರ್ ಬೆಲೆ; ಕೊರೊನಾದಿಂದ ಕಂಗೆಟ್ಟ ರೈತರ ಮೊಗದಲ್ಲಿ ಮಂದಹಾಸ

ಬಾಗಲಕೋಟೆ ರೈತರಲ್ಲಿ ಆತಂಕ; ಕೊರೊನಾ ಎರಡನೇ ಅಲೆಗೆ ತತ್ತರಿಸಿದ ಟೊಮ್ಯಾಟೊ ಬೆಳೆಗಾರ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ