AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎಫೆಕ್ಟ್​: 15 ಕೆಜಿ ಟೊಮ್ಯಾಟೋಗೆ ಕೇವಲ 15 ರೂಪಾಯಿ; ಮನನೊಂದ ರೈತನಿಂದ ಫಸಲು ತುಂಬಿದ ಹೊಲ ನಾಶ

ಸುಮಾರು ₹3 ಲಕ್ಷ ಖರ್ಚು ಮಾಡಿ ಟೊಮ್ಯಾಟೊ ಬೆಳೆದಿದ್ದ ಕಟಮಾಚನಹಳ್ಳಿ ಗ್ರಾಮದ ರೈತ ಶ್ರೀನಿವಾಸಪ್ಪ ಈ ಬಾರಿ ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದರು. ಆದರೆ, ಕೊರೊನಾ ಕಾರಣದಿಂದ 15 ಕೆಜಿ ಟೊಮ್ಯಾಟೊ ಕ್ರೇಟ್‌ಗೆ ಕೇವಲ 15 ರೂ ಸಿಗುತ್ತಿದ್ದು ತೀವ್ರ ನಷ್ಟವನ್ನು ಅನುಭವಿಸುವಂತಾಗಿದೆ.

ಕೊರೊನಾ ಎಫೆಕ್ಟ್​: 15 ಕೆಜಿ ಟೊಮ್ಯಾಟೋಗೆ ಕೇವಲ 15 ರೂಪಾಯಿ; ಮನನೊಂದ ರೈತನಿಂದ ಫಸಲು ತುಂಬಿದ ಹೊಲ ನಾಶ
ಬೆಳೆ ನಾಶಪಡಿಸುತ್ತಿರುವ ರೈತ
Skanda
| Edited By: |

Updated on: Apr 24, 2021 | 12:01 PM

Share

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಕರ್ಫ್ಯೂ ಪರಿಣಾಮದಿಂದಾಗಿ ಕೆಲ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಹಾಗೂ ಬೆಲೆ ಸಿಗದೇ ರೈತರು ಕಂಗಾಲಾಗಿದ್ದಾರೆ. ಅತ್ತ ಕರ್ಫ್ಯೂ ವಿಧಿಸದಿದ್ದರೆ ಕೊರೊನಾ ಭಯ, ಇತ್ತ ವಿಧಿಸಿದರೆ ಬೆಲೆ ಸಿಗದೇ ಪರದಾಡಬೇಕಾದ ಭಯ ರೈತರನ್ನು ಆವರಿಸಿದ್ದು, ಅನೇಕರು ಹೈರಾಣಾಗಿದ್ದಾರೆ. ಇದರಿಂದ ಬೇಸತ್ತ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕಟಮಾಚನಹಳ್ಳಿ ಗ್ರಾಮದ ರೈತರೊಬ್ಬರು ತಾವು ಬೆಳೆದ ಟೊಮ್ಯಾಟೋ ಬೆಳೆಯನ್ನು ನಾಶ ಮಾಡಿದ್ದಾರೆ.

ಸುಮಾರು ₹3 ಲಕ್ಷ ಖರ್ಚು ಮಾಡಿ ಟೊಮ್ಯಾಟೊ ಬೆಳೆದಿದ್ದ ಕಟಮಾಚನಹಳ್ಳಿ ಗ್ರಾಮದ ರೈತ ಶ್ರೀನಿವಾಸಪ್ಪ ಈ ಬಾರಿ ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದರು. ಆದರೆ, ಕೊರೊನಾ ಕಾರಣದಿಂದ 15 ಕೆಜಿ ಟೊಮ್ಯಾಟೊ ಕ್ರೇಟ್‌ಗೆ ಕೇವಲ 15 ರೂ ಸಿಗುತ್ತಿದ್ದು ತೀವ್ರ ನಷ್ಟವನ್ನು ಅನುಭವಿಸುವಂತಾಗಿದೆ. ಹೀಗಾಗಿ ಸೂಕ್ತ ಬೆಲೆಗೆ ಟೊಮ್ಯಾಟೋ ಕೊಳ್ಳುವವರಿಲ್ಲವೆಂದು ಬೇಸತ್ತ ರೈತ ಫಸಲು ತುಂಬಿದ್ದ ಹೊಲವನ್ನೇ ನಾಶ ಮಾಡಿದ್ದಾರೆ.

ಕಳೆದ ಬಾರಿಯೂ ಲಾಕ್​ಡೌನ್ ಸಂದರ್ಭದಲ್ಲಿ ಅನೇಕ ರೈತರಿಗೆ ಸೂಕ್ತ ಮಾರುಕಟ್ಟೆ ಸಿಗದೇ, ಕೊಳ್ಳುವ ಗ್ರಾಹಕರಿಲ್ಲದೇ ನಷ್ಟ ಎದುರಾಗಿತ್ತು. ಕಳೆದ ವರ್ಷ ಅನುಭವಿಸಿದ್ದ ನಷ್ಟವನ್ನು ಈ ಬಾರಿ ಉತ್ತಮ ಬೆಳೆ ತೆಗೆದು ಸರಿದೂಗಿಸಿಕೊಳ್ಳೋಣವೆಂಬ ಆಸೆಯಲ್ಲಿದ್ದ ರೈತರಿಗೆ ಕೊರೊನಾ ಎರಡನೇ ಅಲೆ ಮತ್ತೆ ಸಂಕಷ್ಟವನ್ನು ತಂದೊಡ್ಡಿದೆ.

ಇದನ್ನೂ ಓದಿ: ಹುಣಸೆ ಹಣ್ಣಿಗೆ ಬಂಪರ್ ಬೆಲೆ; ಕೊರೊನಾದಿಂದ ಕಂಗೆಟ್ಟ ರೈತರ ಮೊಗದಲ್ಲಿ ಮಂದಹಾಸ

ಬಾಗಲಕೋಟೆ ರೈತರಲ್ಲಿ ಆತಂಕ; ಕೊರೊನಾ ಎರಡನೇ ಅಲೆಗೆ ತತ್ತರಿಸಿದ ಟೊಮ್ಯಾಟೊ ಬೆಳೆಗಾರ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?