AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎಫೆಕ್ಟ್​: 15 ಕೆಜಿ ಟೊಮ್ಯಾಟೋಗೆ ಕೇವಲ 15 ರೂಪಾಯಿ; ಮನನೊಂದ ರೈತನಿಂದ ಫಸಲು ತುಂಬಿದ ಹೊಲ ನಾಶ

ಸುಮಾರು ₹3 ಲಕ್ಷ ಖರ್ಚು ಮಾಡಿ ಟೊಮ್ಯಾಟೊ ಬೆಳೆದಿದ್ದ ಕಟಮಾಚನಹಳ್ಳಿ ಗ್ರಾಮದ ರೈತ ಶ್ರೀನಿವಾಸಪ್ಪ ಈ ಬಾರಿ ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದರು. ಆದರೆ, ಕೊರೊನಾ ಕಾರಣದಿಂದ 15 ಕೆಜಿ ಟೊಮ್ಯಾಟೊ ಕ್ರೇಟ್‌ಗೆ ಕೇವಲ 15 ರೂ ಸಿಗುತ್ತಿದ್ದು ತೀವ್ರ ನಷ್ಟವನ್ನು ಅನುಭವಿಸುವಂತಾಗಿದೆ.

ಕೊರೊನಾ ಎಫೆಕ್ಟ್​: 15 ಕೆಜಿ ಟೊಮ್ಯಾಟೋಗೆ ಕೇವಲ 15 ರೂಪಾಯಿ; ಮನನೊಂದ ರೈತನಿಂದ ಫಸಲು ತುಂಬಿದ ಹೊಲ ನಾಶ
ಬೆಳೆ ನಾಶಪಡಿಸುತ್ತಿರುವ ರೈತ
Skanda
| Edited By: |

Updated on: Apr 24, 2021 | 12:01 PM

Share

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಕರ್ಫ್ಯೂ ಪರಿಣಾಮದಿಂದಾಗಿ ಕೆಲ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಹಾಗೂ ಬೆಲೆ ಸಿಗದೇ ರೈತರು ಕಂಗಾಲಾಗಿದ್ದಾರೆ. ಅತ್ತ ಕರ್ಫ್ಯೂ ವಿಧಿಸದಿದ್ದರೆ ಕೊರೊನಾ ಭಯ, ಇತ್ತ ವಿಧಿಸಿದರೆ ಬೆಲೆ ಸಿಗದೇ ಪರದಾಡಬೇಕಾದ ಭಯ ರೈತರನ್ನು ಆವರಿಸಿದ್ದು, ಅನೇಕರು ಹೈರಾಣಾಗಿದ್ದಾರೆ. ಇದರಿಂದ ಬೇಸತ್ತ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕಟಮಾಚನಹಳ್ಳಿ ಗ್ರಾಮದ ರೈತರೊಬ್ಬರು ತಾವು ಬೆಳೆದ ಟೊಮ್ಯಾಟೋ ಬೆಳೆಯನ್ನು ನಾಶ ಮಾಡಿದ್ದಾರೆ.

ಸುಮಾರು ₹3 ಲಕ್ಷ ಖರ್ಚು ಮಾಡಿ ಟೊಮ್ಯಾಟೊ ಬೆಳೆದಿದ್ದ ಕಟಮಾಚನಹಳ್ಳಿ ಗ್ರಾಮದ ರೈತ ಶ್ರೀನಿವಾಸಪ್ಪ ಈ ಬಾರಿ ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದರು. ಆದರೆ, ಕೊರೊನಾ ಕಾರಣದಿಂದ 15 ಕೆಜಿ ಟೊಮ್ಯಾಟೊ ಕ್ರೇಟ್‌ಗೆ ಕೇವಲ 15 ರೂ ಸಿಗುತ್ತಿದ್ದು ತೀವ್ರ ನಷ್ಟವನ್ನು ಅನುಭವಿಸುವಂತಾಗಿದೆ. ಹೀಗಾಗಿ ಸೂಕ್ತ ಬೆಲೆಗೆ ಟೊಮ್ಯಾಟೋ ಕೊಳ್ಳುವವರಿಲ್ಲವೆಂದು ಬೇಸತ್ತ ರೈತ ಫಸಲು ತುಂಬಿದ್ದ ಹೊಲವನ್ನೇ ನಾಶ ಮಾಡಿದ್ದಾರೆ.

ಕಳೆದ ಬಾರಿಯೂ ಲಾಕ್​ಡೌನ್ ಸಂದರ್ಭದಲ್ಲಿ ಅನೇಕ ರೈತರಿಗೆ ಸೂಕ್ತ ಮಾರುಕಟ್ಟೆ ಸಿಗದೇ, ಕೊಳ್ಳುವ ಗ್ರಾಹಕರಿಲ್ಲದೇ ನಷ್ಟ ಎದುರಾಗಿತ್ತು. ಕಳೆದ ವರ್ಷ ಅನುಭವಿಸಿದ್ದ ನಷ್ಟವನ್ನು ಈ ಬಾರಿ ಉತ್ತಮ ಬೆಳೆ ತೆಗೆದು ಸರಿದೂಗಿಸಿಕೊಳ್ಳೋಣವೆಂಬ ಆಸೆಯಲ್ಲಿದ್ದ ರೈತರಿಗೆ ಕೊರೊನಾ ಎರಡನೇ ಅಲೆ ಮತ್ತೆ ಸಂಕಷ್ಟವನ್ನು ತಂದೊಡ್ಡಿದೆ.

ಇದನ್ನೂ ಓದಿ: ಹುಣಸೆ ಹಣ್ಣಿಗೆ ಬಂಪರ್ ಬೆಲೆ; ಕೊರೊನಾದಿಂದ ಕಂಗೆಟ್ಟ ರೈತರ ಮೊಗದಲ್ಲಿ ಮಂದಹಾಸ

ಬಾಗಲಕೋಟೆ ರೈತರಲ್ಲಿ ಆತಂಕ; ಕೊರೊನಾ ಎರಡನೇ ಅಲೆಗೆ ತತ್ತರಿಸಿದ ಟೊಮ್ಯಾಟೊ ಬೆಳೆಗಾರ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ