AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato Price Hike: ಟೊಮೆಟೊ ಬೆಲೆ ಏರಿಕೆ; ಲಕ್ಷ, ಕೋಟಿ ರೂಪಾಯಿಗಳಲ್ಲಿ ಆದಾಯ ಗಳಿಸುತ್ತಿದ್ದಾರೆ ಕರ್ನಾಟಕದ ರೈತರು

ಕರ್ನಾಟಕದ ಮಂಡ್ಯ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ರೈತರು ಟೊಮೆಟೊ ಬೆಳೆಯನ್ನು ಮಾರಾಟ ಮಾಡುವ ಮೂಲಕ ಲಕ್ಷ ಅಥವಾ ಕೋಟಿ ರೂಪಾಯಿ ಗಳಿಸುತ್ತಿದ್ದಾರೆ.

Tomato Price Hike: ಟೊಮೆಟೊ ಬೆಲೆ ಏರಿಕೆ; ಲಕ್ಷ, ಕೋಟಿ ರೂಪಾಯಿಗಳಲ್ಲಿ ಆದಾಯ ಗಳಿಸುತ್ತಿದ್ದಾರೆ ಕರ್ನಾಟಕದ ರೈತರು
ಟೊಮೆಟೊ
Follow us
Ganapathi Sharma
|

Updated on:Jul 26, 2023 | 6:19 PM

ಬೆಂಗಳೂರು: ರಿಸ್ಕ್ ತೆಗೆದುಕೊಂಡು ದೊಡ್ಡ ಪ್ರಮಾಣದಲ್ಲಿ ಟೊಮೆಟೊ (Tomato) ಬೆಳೆದ ಕರ್ನಾಟಕದ ರೈತರಿಗೆ ಈ ವರ್ಷ ಭಾರಿ ಲಾಭ ದೊರೆತಿದೆ. ಪ್ರತಿ ವರ್ಷ ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ ಕೋಲಾರ ಜಿಲ್ಲೆಯ ಅನೇಕ ರೈತರು ಟೊಮೆಟೊ ಬೆಳೆಯನ್ನು ಸೂಕ್ತ ದರ ಸಿಗದೆ ಬೇಸರದಿಂದ ಬೆಂಗಳೂರಿನಿಂದ ಚೆನ್ನೈಗೆ ಸಂಪರ್ಕಿಸುವ ಜನನಿಬಿಡ ಹೆದ್ದಾರಿಯಲ್ಲಿ ರಸ್ತೆಗೆ ಎಸೆಯುವ ಬಗ್ಗೆ ವರದಿಯಾಗುತ್ತಿರುತ್ತದೆ. ಇದು ದುರದೃಷ್ಟಕರ. ಆದರೆ, ಇಂದು ಟೊಮೆಟೊದ ತೀವ್ರ ಕೊರತೆಯಿರುವ ಸಮಯದಲ್ಲಿ ಇದನ್ನು ಪೂರೈಸುವ ಮೂಲಕ ಅನೇಕ ರೈತರು ಲಕ್ಷಗಟ್ಟಲೆ ಸಂಪಾದನೆ ಮಾಡಿ ಖುಷಿಯಾಗಿದ್ದಾರೆ.

ಲಕ್ಷ, ಕೋಟಿ ರೂ. ಲಾಭ ಪಡೆಯುತ್ತಿರುವ ಟೊಮೆಟೊ ಬೆಳೆಗಾರರು

ಕರ್ನಾಟಕದ ಮಂಡ್ಯ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ರೈತರು ಟೊಮೆಟೊ ಬೆಳೆಯನ್ನು ಮಾರಾಟ ಮಾಡುವ ಮೂಲಕ ಲಕ್ಷ ಅಥವಾ ಕೋಟಿ ರೂಪಾಯಿ ಗಳಿಸುತ್ತಿದ್ದಾರೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ಉಲ್ಲೇಖಿಸಿದೆ. ಒಬ್ಬ ರೈತ 20 ದಿನಗಳ ಅವಧಿಯಲ್ಲಿ 1,000 ಬಾಕ್ಸ್‌ಗಳನ್ನು (15 ಕೆಜಿ ತೂಕ) ಮಾರಾಟ ಮಾಡಿದ್ದು, ಪ್ರತಿ ಬಾಕ್ಸ್ 1,800 ರೂಪಾಯಿಗೆ ಮಾರಾಟವಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಅದೇ ರೀತಿ ಮಂಡ್ಯ ಜಿಲ್ಲೆಯ ಮತ್ತೊಬ್ಬ ರೈತ ಟೊಮೆಟೊ ಮಾರಾಟ ಮಾಡಿ 4 ಕೋಟಿ ರೂಪಾಯಿ ಗಳಿಸಿದ್ದಾರಂತೆ. ಆದರೆ, ಹೆಚ್ಚಿನ ರೈತರು ಬೆಳೆದ ಬೆಳೆ ಕೀಟ ಬಾಧೆಯಿಂದ ನಾಶವಾಗಿವೆ. ಅನೇಕ ರೈತರು ಬೆಳೆದಿರುವ ಟೊಮೆಟೊ ಸುಮಾರು ಶೇ 35 ರಿಂದ 40 ರಷ್ಟು ಕೀಟಗಳ ದಾಳಿಗೆ ಹಾಳಾಗಿದ್ದು, ಲಾಭ ಕಡಿಮೆಯಾಗಿದೆ ಎನ್ನಲಾಗಿದೆ.

ಬೇರೆ ರಾಜ್ಯಗಳಿಂದಲೂ ಟೊಮೆಟೊಗೆ ಬೇಡಿಕೆ

ಟೊಮೆಟೊ ಕೊರತೆ ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ಹೀಗಾಗಿ ಹಲವು ರಾಜ್ಯಗಳು ಖರೀದಿಗೆ ಮುಂದಾಗಿವೆ ಎಂದು ವರದಿಯಾಗಿದೆ. ಉತ್ತಮ ದರ್ಜೆಯ ಅಥವಾ ಉತ್ಕೃಷ್ಟ ವಿಧದ ಟೊಮೆಟೊಗಳನ್ನು ಇತರ ರಾಜ್ಯಗಳಿಗೆ ರಫ್ತು ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಟೊಮೆಟೊ ಬೆಲೆ ಏರಿಕೆಯಾಗಲು ಇದು ಕೂಡ ಒಂದು ಕಾರಣವಾಗಿದೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ತಿಳಿಸಿದೆ.

ಇದನ್ನೂ ಓದಿ: Tomato Price Hike: ಟೊಮೆಟೊ ಕೃಷಿಯಿಂದ 1.8 ಕೋಟಿ ರೂ. ಗಳಿಸಿದ ತೆಲಂಗಾಣದ ರೈತ!

ಉತ್ಕೃಷ್ಟ ವಿಧದ ಟೊಮೆಟೊ ಪ್ರತಿ ಬಾಕ್ಸ್‌ಗೆ 1,800 ರಿಂದ 2,000 ರೂ.ಗೆ ಮಾರಾಟವಾದರೆ, ಉಳಿದವು 1.200 ರೂಪಾಯಿಗಳಿಂದ 1,500 ರೂವರೆಗೆ ಮಾರಾಟವಾಗಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:18 pm, Wed, 26 July 23

ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ