Tomato Price Hike: ಟೊಮೆಟೊ ಬೆಲೆ ಏರಿಕೆ; ಲಕ್ಷ, ಕೋಟಿ ರೂಪಾಯಿಗಳಲ್ಲಿ ಆದಾಯ ಗಳಿಸುತ್ತಿದ್ದಾರೆ ಕರ್ನಾಟಕದ ರೈತರು

ಕರ್ನಾಟಕದ ಮಂಡ್ಯ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ರೈತರು ಟೊಮೆಟೊ ಬೆಳೆಯನ್ನು ಮಾರಾಟ ಮಾಡುವ ಮೂಲಕ ಲಕ್ಷ ಅಥವಾ ಕೋಟಿ ರೂಪಾಯಿ ಗಳಿಸುತ್ತಿದ್ದಾರೆ.

Tomato Price Hike: ಟೊಮೆಟೊ ಬೆಲೆ ಏರಿಕೆ; ಲಕ್ಷ, ಕೋಟಿ ರೂಪಾಯಿಗಳಲ್ಲಿ ಆದಾಯ ಗಳಿಸುತ್ತಿದ್ದಾರೆ ಕರ್ನಾಟಕದ ರೈತರು
ಟೊಮೆಟೊ
Follow us
|

Updated on:Jul 26, 2023 | 6:19 PM

ಬೆಂಗಳೂರು: ರಿಸ್ಕ್ ತೆಗೆದುಕೊಂಡು ದೊಡ್ಡ ಪ್ರಮಾಣದಲ್ಲಿ ಟೊಮೆಟೊ (Tomato) ಬೆಳೆದ ಕರ್ನಾಟಕದ ರೈತರಿಗೆ ಈ ವರ್ಷ ಭಾರಿ ಲಾಭ ದೊರೆತಿದೆ. ಪ್ರತಿ ವರ್ಷ ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ ಕೋಲಾರ ಜಿಲ್ಲೆಯ ಅನೇಕ ರೈತರು ಟೊಮೆಟೊ ಬೆಳೆಯನ್ನು ಸೂಕ್ತ ದರ ಸಿಗದೆ ಬೇಸರದಿಂದ ಬೆಂಗಳೂರಿನಿಂದ ಚೆನ್ನೈಗೆ ಸಂಪರ್ಕಿಸುವ ಜನನಿಬಿಡ ಹೆದ್ದಾರಿಯಲ್ಲಿ ರಸ್ತೆಗೆ ಎಸೆಯುವ ಬಗ್ಗೆ ವರದಿಯಾಗುತ್ತಿರುತ್ತದೆ. ಇದು ದುರದೃಷ್ಟಕರ. ಆದರೆ, ಇಂದು ಟೊಮೆಟೊದ ತೀವ್ರ ಕೊರತೆಯಿರುವ ಸಮಯದಲ್ಲಿ ಇದನ್ನು ಪೂರೈಸುವ ಮೂಲಕ ಅನೇಕ ರೈತರು ಲಕ್ಷಗಟ್ಟಲೆ ಸಂಪಾದನೆ ಮಾಡಿ ಖುಷಿಯಾಗಿದ್ದಾರೆ.

ಲಕ್ಷ, ಕೋಟಿ ರೂ. ಲಾಭ ಪಡೆಯುತ್ತಿರುವ ಟೊಮೆಟೊ ಬೆಳೆಗಾರರು

ಕರ್ನಾಟಕದ ಮಂಡ್ಯ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ರೈತರು ಟೊಮೆಟೊ ಬೆಳೆಯನ್ನು ಮಾರಾಟ ಮಾಡುವ ಮೂಲಕ ಲಕ್ಷ ಅಥವಾ ಕೋಟಿ ರೂಪಾಯಿ ಗಳಿಸುತ್ತಿದ್ದಾರೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ಉಲ್ಲೇಖಿಸಿದೆ. ಒಬ್ಬ ರೈತ 20 ದಿನಗಳ ಅವಧಿಯಲ್ಲಿ 1,000 ಬಾಕ್ಸ್‌ಗಳನ್ನು (15 ಕೆಜಿ ತೂಕ) ಮಾರಾಟ ಮಾಡಿದ್ದು, ಪ್ರತಿ ಬಾಕ್ಸ್ 1,800 ರೂಪಾಯಿಗೆ ಮಾರಾಟವಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಅದೇ ರೀತಿ ಮಂಡ್ಯ ಜಿಲ್ಲೆಯ ಮತ್ತೊಬ್ಬ ರೈತ ಟೊಮೆಟೊ ಮಾರಾಟ ಮಾಡಿ 4 ಕೋಟಿ ರೂಪಾಯಿ ಗಳಿಸಿದ್ದಾರಂತೆ. ಆದರೆ, ಹೆಚ್ಚಿನ ರೈತರು ಬೆಳೆದ ಬೆಳೆ ಕೀಟ ಬಾಧೆಯಿಂದ ನಾಶವಾಗಿವೆ. ಅನೇಕ ರೈತರು ಬೆಳೆದಿರುವ ಟೊಮೆಟೊ ಸುಮಾರು ಶೇ 35 ರಿಂದ 40 ರಷ್ಟು ಕೀಟಗಳ ದಾಳಿಗೆ ಹಾಳಾಗಿದ್ದು, ಲಾಭ ಕಡಿಮೆಯಾಗಿದೆ ಎನ್ನಲಾಗಿದೆ.

ಬೇರೆ ರಾಜ್ಯಗಳಿಂದಲೂ ಟೊಮೆಟೊಗೆ ಬೇಡಿಕೆ

ಟೊಮೆಟೊ ಕೊರತೆ ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ಹೀಗಾಗಿ ಹಲವು ರಾಜ್ಯಗಳು ಖರೀದಿಗೆ ಮುಂದಾಗಿವೆ ಎಂದು ವರದಿಯಾಗಿದೆ. ಉತ್ತಮ ದರ್ಜೆಯ ಅಥವಾ ಉತ್ಕೃಷ್ಟ ವಿಧದ ಟೊಮೆಟೊಗಳನ್ನು ಇತರ ರಾಜ್ಯಗಳಿಗೆ ರಫ್ತು ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಟೊಮೆಟೊ ಬೆಲೆ ಏರಿಕೆಯಾಗಲು ಇದು ಕೂಡ ಒಂದು ಕಾರಣವಾಗಿದೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ತಿಳಿಸಿದೆ.

ಇದನ್ನೂ ಓದಿ: Tomato Price Hike: ಟೊಮೆಟೊ ಕೃಷಿಯಿಂದ 1.8 ಕೋಟಿ ರೂ. ಗಳಿಸಿದ ತೆಲಂಗಾಣದ ರೈತ!

ಉತ್ಕೃಷ್ಟ ವಿಧದ ಟೊಮೆಟೊ ಪ್ರತಿ ಬಾಕ್ಸ್‌ಗೆ 1,800 ರಿಂದ 2,000 ರೂ.ಗೆ ಮಾರಾಟವಾದರೆ, ಉಳಿದವು 1.200 ರೂಪಾಯಿಗಳಿಂದ 1,500 ರೂವರೆಗೆ ಮಾರಾಟವಾಗಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:18 pm, Wed, 26 July 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!