AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato Price Hike: ಟೊಮೆಟೊ ಬೆಲೆ ಏರಿಕೆ; ಲಕ್ಷ, ಕೋಟಿ ರೂಪಾಯಿಗಳಲ್ಲಿ ಆದಾಯ ಗಳಿಸುತ್ತಿದ್ದಾರೆ ಕರ್ನಾಟಕದ ರೈತರು

ಕರ್ನಾಟಕದ ಮಂಡ್ಯ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ರೈತರು ಟೊಮೆಟೊ ಬೆಳೆಯನ್ನು ಮಾರಾಟ ಮಾಡುವ ಮೂಲಕ ಲಕ್ಷ ಅಥವಾ ಕೋಟಿ ರೂಪಾಯಿ ಗಳಿಸುತ್ತಿದ್ದಾರೆ.

Tomato Price Hike: ಟೊಮೆಟೊ ಬೆಲೆ ಏರಿಕೆ; ಲಕ್ಷ, ಕೋಟಿ ರೂಪಾಯಿಗಳಲ್ಲಿ ಆದಾಯ ಗಳಿಸುತ್ತಿದ್ದಾರೆ ಕರ್ನಾಟಕದ ರೈತರು
ಟೊಮೆಟೊ
ಗಣಪತಿ ಶರ್ಮಾ
|

Updated on:Jul 26, 2023 | 6:19 PM

Share

ಬೆಂಗಳೂರು: ರಿಸ್ಕ್ ತೆಗೆದುಕೊಂಡು ದೊಡ್ಡ ಪ್ರಮಾಣದಲ್ಲಿ ಟೊಮೆಟೊ (Tomato) ಬೆಳೆದ ಕರ್ನಾಟಕದ ರೈತರಿಗೆ ಈ ವರ್ಷ ಭಾರಿ ಲಾಭ ದೊರೆತಿದೆ. ಪ್ರತಿ ವರ್ಷ ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ ಕೋಲಾರ ಜಿಲ್ಲೆಯ ಅನೇಕ ರೈತರು ಟೊಮೆಟೊ ಬೆಳೆಯನ್ನು ಸೂಕ್ತ ದರ ಸಿಗದೆ ಬೇಸರದಿಂದ ಬೆಂಗಳೂರಿನಿಂದ ಚೆನ್ನೈಗೆ ಸಂಪರ್ಕಿಸುವ ಜನನಿಬಿಡ ಹೆದ್ದಾರಿಯಲ್ಲಿ ರಸ್ತೆಗೆ ಎಸೆಯುವ ಬಗ್ಗೆ ವರದಿಯಾಗುತ್ತಿರುತ್ತದೆ. ಇದು ದುರದೃಷ್ಟಕರ. ಆದರೆ, ಇಂದು ಟೊಮೆಟೊದ ತೀವ್ರ ಕೊರತೆಯಿರುವ ಸಮಯದಲ್ಲಿ ಇದನ್ನು ಪೂರೈಸುವ ಮೂಲಕ ಅನೇಕ ರೈತರು ಲಕ್ಷಗಟ್ಟಲೆ ಸಂಪಾದನೆ ಮಾಡಿ ಖುಷಿಯಾಗಿದ್ದಾರೆ.

ಲಕ್ಷ, ಕೋಟಿ ರೂ. ಲಾಭ ಪಡೆಯುತ್ತಿರುವ ಟೊಮೆಟೊ ಬೆಳೆಗಾರರು

ಕರ್ನಾಟಕದ ಮಂಡ್ಯ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ರೈತರು ಟೊಮೆಟೊ ಬೆಳೆಯನ್ನು ಮಾರಾಟ ಮಾಡುವ ಮೂಲಕ ಲಕ್ಷ ಅಥವಾ ಕೋಟಿ ರೂಪಾಯಿ ಗಳಿಸುತ್ತಿದ್ದಾರೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ಉಲ್ಲೇಖಿಸಿದೆ. ಒಬ್ಬ ರೈತ 20 ದಿನಗಳ ಅವಧಿಯಲ್ಲಿ 1,000 ಬಾಕ್ಸ್‌ಗಳನ್ನು (15 ಕೆಜಿ ತೂಕ) ಮಾರಾಟ ಮಾಡಿದ್ದು, ಪ್ರತಿ ಬಾಕ್ಸ್ 1,800 ರೂಪಾಯಿಗೆ ಮಾರಾಟವಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಅದೇ ರೀತಿ ಮಂಡ್ಯ ಜಿಲ್ಲೆಯ ಮತ್ತೊಬ್ಬ ರೈತ ಟೊಮೆಟೊ ಮಾರಾಟ ಮಾಡಿ 4 ಕೋಟಿ ರೂಪಾಯಿ ಗಳಿಸಿದ್ದಾರಂತೆ. ಆದರೆ, ಹೆಚ್ಚಿನ ರೈತರು ಬೆಳೆದ ಬೆಳೆ ಕೀಟ ಬಾಧೆಯಿಂದ ನಾಶವಾಗಿವೆ. ಅನೇಕ ರೈತರು ಬೆಳೆದಿರುವ ಟೊಮೆಟೊ ಸುಮಾರು ಶೇ 35 ರಿಂದ 40 ರಷ್ಟು ಕೀಟಗಳ ದಾಳಿಗೆ ಹಾಳಾಗಿದ್ದು, ಲಾಭ ಕಡಿಮೆಯಾಗಿದೆ ಎನ್ನಲಾಗಿದೆ.

ಬೇರೆ ರಾಜ್ಯಗಳಿಂದಲೂ ಟೊಮೆಟೊಗೆ ಬೇಡಿಕೆ

ಟೊಮೆಟೊ ಕೊರತೆ ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ಹೀಗಾಗಿ ಹಲವು ರಾಜ್ಯಗಳು ಖರೀದಿಗೆ ಮುಂದಾಗಿವೆ ಎಂದು ವರದಿಯಾಗಿದೆ. ಉತ್ತಮ ದರ್ಜೆಯ ಅಥವಾ ಉತ್ಕೃಷ್ಟ ವಿಧದ ಟೊಮೆಟೊಗಳನ್ನು ಇತರ ರಾಜ್ಯಗಳಿಗೆ ರಫ್ತು ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಟೊಮೆಟೊ ಬೆಲೆ ಏರಿಕೆಯಾಗಲು ಇದು ಕೂಡ ಒಂದು ಕಾರಣವಾಗಿದೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ತಿಳಿಸಿದೆ.

ಇದನ್ನೂ ಓದಿ: Tomato Price Hike: ಟೊಮೆಟೊ ಕೃಷಿಯಿಂದ 1.8 ಕೋಟಿ ರೂ. ಗಳಿಸಿದ ತೆಲಂಗಾಣದ ರೈತ!

ಉತ್ಕೃಷ್ಟ ವಿಧದ ಟೊಮೆಟೊ ಪ್ರತಿ ಬಾಕ್ಸ್‌ಗೆ 1,800 ರಿಂದ 2,000 ರೂ.ಗೆ ಮಾರಾಟವಾದರೆ, ಉಳಿದವು 1.200 ರೂಪಾಯಿಗಳಿಂದ 1,500 ರೂವರೆಗೆ ಮಾರಾಟವಾಗಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:18 pm, Wed, 26 July 23

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ