AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡ್ಲಿ, ಹೋಳಿಗೆ ಬೆನ್ನಲ್ಲೇ ಟೊಮೇಟೊ ಸಾಸ್​ನಿಂದ ಕೂಡ ಆರೋಗ್ಯಕ್ಕೆ ಕುತ್ತು

ಆಹಾರ ಮತ್ತು ಆರೋಗ್ಯ ಇಲಾಖೆಯ ವರದಿಯ ಪ್ರಕಾರ, ಹಲವು ಟೊಮೇಟೊ ಸಾಸ್​ನಲ್ಲಿ ಅಪಾಯಕಾರಿ ರಾಸಾಯನಿಕಗಳು ಮತ್ತು ಕಲಬೆರಕೆ ಪತ್ತೆಯಾಗಿದೆ. ಸೋಡಿಯಂ ಬೆಂಜೊಯೆಟ್ ಮತ್ತು ಕೃತಕ ಬಣ್ಣಗಳ ಬಳಕೆಯಿಂದ ಆರೋಗ್ಯಕ್ಕೆ ಹಾನಿಯಾಗುವ ಸಾಧ್ಯತೆ ಇದೆ. ಮಕ್ಕಳು ಮತ್ತು ವಯಸ್ಕರಲ್ಲಿ ರಕ್ತದೊತ್ತಡ, ನಿಶಕ್ತಿ ಮತ್ತು ಮನಸ್ಥಿತಿಯ ಬದಲಾವಣೆಗಳಂತಹ ಸಮಸ್ಯೆಗಳು ಉಂಟಾಗಬಹುದು. ಆದ್ದರಿಂದ, ಆರೋಗ್ಯಕರ ಆಹಾರ ಪದ್ಧತಿಯನ್ನು ಅನುಸರಿಸುವುದು ಮುಖ್ಯ ಎಂದು ವೈದ್ಯರು ಎಚ್ಚರಿಸಿದ್ದಾರೆ.

ಇಡ್ಲಿ, ಹೋಳಿಗೆ ಬೆನ್ನಲ್ಲೇ ಟೊಮೇಟೊ ಸಾಸ್​ನಿಂದ ಕೂಡ ಆರೋಗ್ಯಕ್ಕೆ ಕುತ್ತು
ಟೊಮೇಟೊ ಸಾಸ್​
Vinay Kashappanavar
| Edited By: |

Updated on: Mar 04, 2025 | 9:53 AM

Share

ಬೆಂಗಳೂರು, ಮಾರ್ಚ್​ 04: ಬಾಯಿ ಚಪ್ಪರಿಸಿ ಸವಿಯುವ ಟೊಮೇಟೊ ಸಾಸ್ (Tomato sauce) ಕೂಡ ಆರೋಗ್ಯಕ್ಕೆ ಮಾರಕವಾಗಿದೆ. ಹೌದು, ಇಡ್ಲಿ, ಬಟಾಣಿ ಮತ್ತು ಹೋಳಿಗೆ ಬೆನ್ನಲ್ಲೇ ಟೊಮೇಟೊ ಸಾಸ್ ಕೂಡ ಆರೋಗ್ಯಕ್ಕೆ ಹಾನಿಕಾರಕ ಎಂಬ ಅಂಶ ಆರೋಗ್ಯ ಇಲಾಖೆಯ (Health Department) ವರದಿಯಿಂದ ಧೃಡವಾಗಿದೆ.

ಆಹಾರ ಮತ್ತು ಆರೋಗ್ಯ ಇಲಾಖೆ ಜಂಟಿಯಾಗಿ ಫೆಬ್ರವರಿಯಲ್ಲಿ ಟೊಮೇಟೊ ಸಾಸ್ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿತ್ತು. ತಪಾಸಣೆ ನಡೆಸಿದ ಪ್ರಯೋಗಾಲಯದ ವರದಿಯಲ್ಲಿ, ಟೊಮೇಟೊ ಸಾಸ್ ಕಲಬೆರಕೆಯಿಂದ ಕೂಡಿದ್ದು, ಆರೋಗ್ಯಕ್ಕೆ ಮಾರಕವಾಗಿದೆ ಅಂಶ ಬಹಿರಂಗವಾಗಿದೆ. ಈ ಮೂಲಕ ಪುಟಾಣಿಗಳಿಂದ ದೊಡ್ಡವರವರೆಗೆ ಬಾಯಿ ಚಪ್ಪರಿಸಿ ಸವಿಯುವ ಟೊಮೇಟೊ ಸಾಸ್ ಆರೋಗ್ಯಕ್ಕೆ ಡೇಂಜರ್ ಆಗಿದೆ.

ಟೊಮೇಟೊ ಸಾಸ್​ನಲ್ಲಿ ಅಪಾಯಕಾರಿ ರಾಸಾಯನಿಕ ಬಳಿಸಿರುವುದನ್ನು ಕಂಡು ಸ್ವತಃ ಆಹಾರ ಇಲಾಖೆ ತಜ್ಞರೇ ಕಳವಳಗೊಂಡಿದ್ದಾರೆ. ಟೊಮೇಟೊ ಸಾಸ್​ನಲ್ಲಿ ಸೋಡಿಯಂ ಬೆಂಜೊಯೆಟ್ ಬಳಸಲಾಗುತ್ತಿದೆ. ಸೋಡಿಯಂ ಬೆಂಜೊಯೆಟ್​ನಲ್ಲಿ ಉಪ್ಪಿನ ಅಂಶ ಹೆಚ್ಚಾಗಿರುತ್ತದೆ. ಅಲ್ಲದೇ, ಟೊಮೇಟೊ ಸಾಸ್ ಬ್ರೈಟ್ ಹಾಗೂ ಕೆಂಪಾಗಿ ಕಾಣಿಸಲು ಕೃತಕ ಬಣ್ಣ ಬಳಸಲಾಗುತ್ತಿದೆ ಎಂಬ ಅಂಶ ವರದಿಯಿಂದ ತಿಳಿದುಬಂದಿದೆ.

ಇದನ್ನೂ ಓದಿ
Image
ಯುಗಾದಿ ಹಬ್ಬಕ್ಕೆ ರೆಡಿಮೆಡ್ ಹೋಳಿಗೆ ತಿನ್ನುವ ಮುನ್ನ ಎಚ್ಚರ...ಎಚ್ಚರ..!
Image
ಟ್ಯಾಟೂನಿಂದ ಬರುತ್ತೆ ಹೆಚ್​ಐವಿ, ಕ್ಯಾನ್ಸರ್​: ಆರೋಗ್ಯ ಇಲಾಖೆ ಅಲರ್ಟ್
Image
ಇಡ್ಲಿ ಬಳಿಕ ಬಟಾಣಿಯಲ್ಲೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ: ಆರೋಗ್ಯ ಇಲಾಖೆ
Image
ಬೆಂಗಳೂರಿಗರಿಗೆ ಶಾಕಿಂಗ್ ಸುದ್ದಿ: ಇಡ್ಲಿ ತಿಂದರೂ ಬರಬಹುದು ಕ್ಯಾನ್ಸರ್‌!

ರಾಸಾಯನಿಕ ಬಳಕೆಯಿಂದ ಜನರ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀಳುತ್ತದೆ. ಹೀಗಾಗಿ ಟೊಮೇಟೊ ಸಾಸ್ ಆರೋಗ್ಯಕ್ಕೆ ಮಾರಕವಾಗಿದೆ. ಕಲಬೆರಕೆ ಸಾಸ್​ನಿಂದ ಮಕ್ಕಳು, ದೊಡ್ಡವರಲ್ಲಿ ಬಿಪಿ ಸಮಸ್ಯೆ ಕಾಡಬಹುದು. ಅಲ್ಲದೇ ನಿಶಕ್ತಿ ಉಂಟಾಗುತ್ತದೆ. ಮಕ್ಕಳಲ್ಲಿ ತಾಳ್ಮೆ ಶಾಂತಿ, ಮನಸ್ಥಿತಿ ಕಡಿಮೆಯಾಗುತ್ತದೆ. ಹೀಗಾಗಿ ಟೊಮೇಟೊ ಸಾಸ್ ಸಾಕಷ್ಟು ಅಪಾಯ ಎಂದು ಕೆ.ಸಿ. ಜನರಲ್​ ಆಸ್ಪತ್ರೆಯ ಆಹಾರ ತಜ್ಞೆ ಕೀರ್ತಿ ಹಿರಿಸಾವೆ ಹೇಳಿದರು.

ಇದನ್ನೂ ಓದಿ: ಕಳಪೆ ಔಷಧ ತಯಾರಕ ಕಂಪನಿಗಳಿಗೆ ಶಾಕ್: ಕಡಿಮೆ ಗುಣಮಟ್ಟದ ಔಷಧಗಳಿಗೆ ಕೋಕ್, ಬರಲಿದೆ ಹೊಸ ನಿಯಮ

3608 ಆಹಾರ ಪದಾರ್ಥಗಳ ಮಾದರಿ ಸಂಗ್ರಹ

ಜವವರಿಯಿಂದ ಒಟ್ಟು 3608 ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 26 ಮಾದರಿಗಳು ಅಸುರಕ್ಷಿತವಾಗಿವೆ ಎಂಬುದು ತಿಳಿದುಬಂದಿದೆ. 28 ಕಳಪೆಯಾಗಿವೆ. ಇದೇ ಜನವರಿಯಲ್ಲಿ 681 ರಷ್ಟು ಇಡ್ಲಿ ಸ್ಯಾಂಪಲ್ಸ್ ಪಡೆಯಲಾಗಿದೆ. ಇಡ್ಲಿ ಮಾಡುವಾಗ ಪ್ಲಾಸ್ಟಿಕ್ ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಘಟನೆ ಸಂಬಂಧ 52 ಆಹಾರ ಉತ್ಪಾದಕರಿಗೆ ನೋಟಿಸ್ ನೀಡಲಾಗಿದೆ. ಪ್ಲಾಸ್ಟಿಕ್ ಬಳಕೆ ಮಾಡದಂತೆ ಈಗಾಗಲೇ ನಾವು ಎಚ್ಚರಿಕೆ ನೀಡಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ
ಅಜಿತ್​​​ ಪವರ್​​​ ಸಾವು ಪ್ರಕರಣದ ಹೊಸ ಅಪ್ಡೇಟ್
ಅಜಿತ್​​​ ಪವರ್​​​ ಸಾವು ಪ್ರಕರಣದ ಹೊಸ ಅಪ್ಡೇಟ್
ಕೈ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ
ಕೈ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ
‘ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ
‘ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ