AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NWKRTC Tour Package: ಜಲಪಾತ ಸ್ಥಳಗಳಿಗೆ ವಾಯುವ್ಯ ಸಾರಿಗೆ ಟೂರ್ ಪ್ಯಾಕೇಜ್, ಜನರಿಂದ ಉತ್ತಮ ಪ್ರತಿಕ್ರಿಯೆ

ಮಳೆಗಾಲದಲ್ಲಿ ಜಲತಾಪಗಳನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಕಡಿಮೆ ಶುಲ್ಕದಲ್ಲಿ ಆಗುತ್ತದೆ ಎಂದು ಹೆಚ್ಚಿನವರು ರೈಲುಗಳನ್ನು ಅವಲಂಬಿಸುತ್ತಾರೆ. ಕೆಲವೊಮ್ಮೆ ಟಿಕೆಟ್ ರದ್ದಾಗುತ್ತದೆ. ಇಂತಹ ಸಮಸ್ಯೆ ಅರಿತ NWKRTC, ಜಲಪಾತ ಪ್ರದೇಶಗಳಿಗೆ ಟೂರ್ ಪ್ಯಾಕೇಜ್ ಆರಂಭಿಸಿದೆ.

NWKRTC Tour Package: ಜಲಪಾತ ಸ್ಥಳಗಳಿಗೆ ವಾಯುವ್ಯ ಸಾರಿಗೆ ಟೂರ್ ಪ್ಯಾಕೇಜ್, ಜನರಿಂದ ಉತ್ತಮ ಪ್ರತಿಕ್ರಿಯೆ
ಜೋಗ ಜಲಪಾತ, ಗೋಕಾಕ್ ಜಲಪಾತ, ಅಂಬೋಲಿ ಜಲಪಾತಕ್ಕೆ ವಾಯುವ್ಯ ಸಾರಿಯಿಂದ ಟೂರ್ ಪ್ಯಾಕೇಜ್
Rakesh Nayak Manchi
|

Updated on:Jul 24, 2023 | 5:08 PM

Share

ಹುಬ್ಬಳ್ಳಿ, ಜುಲೈ 24: ಮಳೆಗಾಲದಲ್ಲಿ ಜಲಪಾತಗಳನ್ನು ವೀಕ್ಷಣೆ ಮಾಡಲು ಜನರಿಗಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC) ಟೂರ್ ಪ್ಯಾಕೇಜ್ ಆರಂಭಿಸಿದೆ. ಹುಬ್ಬಳ್ಳಿ-ಜೋಗ ಜಲಪಾತ-ಹುಬ್ಬಳ್ಳಿ, ಬೆಳಗಾವಿ-ಗೋಕಾಕ್ ಫಾಲ್ಸ್-ಬೆಳಗಾವಿ ಮತ್ತು ಬೆಳಗಾವಿ-ಅಂಬೋಲಿ-ಬೆಳಗಾವಿ ಪ್ಯಾಕೇಜ್ ಪ್ರವಾಸಗಳನ್ನು ಪ್ರಾರಂಭಿಸಿದೆ.

ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕ ರಾಜೇಶ್ ಹುದ್ದಾರ್ ಮಾತನಾಡಿ, ಜುಲೈ 9 ರಿಂದ ಜೋಗ ಜಲಪಾತಕ್ಕೆ ಒಂದು ವೋಲ್ವೋ ಬಸ್ ಮತ್ತು ಒಂದು ರಾಜಹಂಸ ಬಸ್ ನಿಯೋಜಿಸಲಾಗಿದೆ. ಪ್ರವಾಸದ ವೇಳೆ ಪ್ರಯಾಣಿಕರು ಶಿರಸಿಯ ಮಾರಿಕಾಂಬಾ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆಯಬಹುದಾಗಿದೆ ಎಂದರು.

ಇದನ್ನೂ ಓದಿ: Udupi News: ರೀಲ್ಸ್​ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಸಾವು, ನೀರಿಗೆ ಬೀಳುತ್ತಿರುವ ದೃಶ್ಯ ಗೆಳೆಯನ ಮೊಬೈಲ್​ನಲ್ಲಿ ಸೆರೆ

ಬೇಡಿಕೆಗೆ ಸ್ಪಂದಿಸಿ ಜುಲೈ 16 ರಂದು ಎರಡು ವೋಲ್ವೋ ಮತ್ತು ಎರಡು ರಾಜಹಂಸ ಬಸ್ಸುಗಳನ್ನು ಮತ್ತು ಜುಲೈ 23 ರಂದು ಒಂದು ವೋಲ್ವೋ ಮತ್ತು ಎರಡು ರಾಜಹಂಸ ಬಸ್ಸುಗಳನ್ನು ಓಡಿಸಿದ್ದೇವೆ. ಎಲ್ಲಾ ಬಸ್ಸುಗಳು ಭರ್ತಿಯಾಗಿವೆ. ಭಾನುವಾರಗಳ ಹೊರತಾಗಿ, ನಾವು ಸಾರ್ವಜನಿಕ ರಜಾದಿನಗಳಲ್ಲಿಯೂ ಅಂತಹ ಪ್ಯಾಕೇಜ್​ಗಳನ್ನು ನಿರ್ವಹಿಸುತ್ತೇವೆ” ಎಂದು ರಾಜೇಶ್ ಹುದ್ದಾರ್ ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಬೆಳಗಾವಿ ವಿಭಾಗವು ಜುಲೈ 22 ರಿಂದ ಗೋಕಾಕ್ ಜಲಪಾತ ಮತ್ತು ಅಂಬೋಲಿ ಜಲಪಾತಕ್ಕೆ ವಿಶೇಷ ಪ್ಯಾಕೇಜ್ ಗಳನ್ನು ನಿರ್ವಹಿಸುತ್ತಿದೆ ಎಂದು ಅವರು ಹೇಳಿದರು. “ಗೋಕಾಕ್ ಜಲಪಾತದ ವೇಳಾಪಟ್ಟಿಯು ಹಿಡಕಲ್ ಅಣೆಕಟ್ಟು ಮತ್ತು ಗೋಡ್ಚಿನ್ ಮಾಲ್ಕಿಗೆ ಭೇಟಿ ನೀಡುವುದನ್ನು ಒಳಗೊಂಡಿದ್ದರೆ, ಅಂಬೋಲಿ ಜಲಪಾತ ಪ್ಯಾಕೇಜ್ ನಂಗರ್ಟಾ ಜಲಪಾತಕ್ಕೆ ಭೇಟಿಯನ್ನು ಒಳಗೊಂಡಿದೆ. ಈ ಪ್ಯಾಕೇಜ್ಗಳಿಗೆ ಸ್ಪರ್ಧಾತ್ಮಕ ಬೆಲೆಯನ್ನು ನಾವು ಖಚಿತಪಡಿಸಿದ್ದೇವೆ. ಈ ಪ್ರವಾಸ ಪ್ಯಾಕೇಜ್, ಜಲಪಾತಗಳು ಹರಿಯುವವರೆಗೆ ಮಾತ್ರ ಇರಲಿದೆ. ಹೀಗಾಗಿ ಹೆಚ್ಚಿನ ಜನರು ಪ್ಯಾಕೇಜ್​ನ ಅವಕಾಶವನ್ನು ಸುದುಪಯೋಗ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:07 pm, Mon, 24 July 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ