ಟೈಮ್​ ಅಯ್ತು ಅಂತಾ ಬೋಟ್ ಸೇವೆ ನಿಲ್ಲಿಸಿದ್ದಕ್ಕೆ ಪ್ರವಾಸಿಗರು ಆಕ್ರೋಶ

ಕೊಡಗು: ಸೋಮವಾರಪೇಟೆ ತಾಲೂಕಿನ ದುಬಾರೆ ಪ್ರವಾಸಿ ತಾಣದಲ್ಲಿ ಪ್ರವಾಸಿಗರು ಮತ್ತು ಸಿಬ್ಬಂದಿ ನಡುವೆ ಮಾರಾಮಾರಿಯಾಗಿದೆ. ದುಬಾರೆ ಆನೆ ಶಿಬಿರಕ್ಕೆ ಮಂಗಳೂರಿನಿಂದ ಬಸ್​ನಲ್ಲಿ ಪ್ರವಾಸಿಗರು‌ ಬಂದಿದ್ದರು. ಆದ್ರೆ ಸಮಯ ಮೀರಿದ ಹಿನ್ನೆಲೆಯಲ್ಲಿ ಆನೆ ಕ್ಯಾಂಪ್​ಗೆ ಬೋಟ್​ನಲ್ಲಿ ತೆರಳಲು ಸಿಬ್ಬಂದಿ ನಿರಾಕರಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಪ್ರವಾಸಿಗರು ಮತ್ತು ಸಿಬ್ಬಂದಿ ನಡುವೆ ಮಾತಿನಚಕಮಕಿಯಾಗಿದೆ. ಇದರಿಂದ ಕುಪಿತಗೊಂಡ ಪ್ರವಾಸಿಗರಿ ಅರಣ್ಯ ಇಲಾಖೆ ದಿನಗೂಲಿ ನೌಕರರಾದ ರವಿ ತಮ್ಮಯ್ಯ, ರಮೇಶ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕುಶಾಲನಗರದ ಗ್ರಾಮಾಂತರ ಪೊಲೀಸ್ […]

ಟೈಮ್​ ಅಯ್ತು ಅಂತಾ ಬೋಟ್ ಸೇವೆ ನಿಲ್ಲಿಸಿದ್ದಕ್ಕೆ ಪ್ರವಾಸಿಗರು ಆಕ್ರೋಶ
ಸಾಧು ಶ್ರೀನಾಥ್​

Updated on: Dec 10, 2019 | 11:38 AM

ಕೊಡಗು: ಸೋಮವಾರಪೇಟೆ ತಾಲೂಕಿನ ದುಬಾರೆ ಪ್ರವಾಸಿ ತಾಣದಲ್ಲಿ ಪ್ರವಾಸಿಗರು ಮತ್ತು ಸಿಬ್ಬಂದಿ ನಡುವೆ ಮಾರಾಮಾರಿಯಾಗಿದೆ. ದುಬಾರೆ ಆನೆ ಶಿಬಿರಕ್ಕೆ ಮಂಗಳೂರಿನಿಂದ ಬಸ್​ನಲ್ಲಿ ಪ್ರವಾಸಿಗರು‌ ಬಂದಿದ್ದರು. ಆದ್ರೆ ಸಮಯ ಮೀರಿದ ಹಿನ್ನೆಲೆಯಲ್ಲಿ ಆನೆ ಕ್ಯಾಂಪ್​ಗೆ ಬೋಟ್​ನಲ್ಲಿ ತೆರಳಲು ಸಿಬ್ಬಂದಿ ನಿರಾಕರಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿ ಪ್ರವಾಸಿಗರು ಮತ್ತು ಸಿಬ್ಬಂದಿ ನಡುವೆ ಮಾತಿನಚಕಮಕಿಯಾಗಿದೆ. ಇದರಿಂದ ಕುಪಿತಗೊಂಡ ಪ್ರವಾಸಿಗರಿ ಅರಣ್ಯ ಇಲಾಖೆ ದಿನಗೂಲಿ ನೌಕರರಾದ ರವಿ ತಮ್ಮಯ್ಯ, ರಮೇಶ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕುಶಾಲನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 11:25 am, Tue, 10 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us