AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳಿ ದುರಸ್ತಿ ಕಾರ್ಯ ಪೂರ್ಣ: ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭ ಯಾವಾಗಿನಿಂದ?

ಬೆಂಗಳೂರು-ಮಂಗಳೂರು ಮಾರ್ಗದ ಎಡಕುಮೇರಿ ಮತ್ತು ಕಡಗರವಳ್ಳಿ ಬಳಿ ಭೂಕುಸಿತ ಸ್ಥಳದಲ್ಲಿ ರೈಲ್ವೆ ಹಳಿ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಇಂದಿನಿಂದ ಗೂಡ್ಸ್‌ ರೈಲುಗಳ ಸಂಚಾರಕ್ಕಷ್ಟೇ ಅವಕಾಶ ನೀಡಲಾಗಿದೆ. ಕೇವಲ ಸಣ್ಣಪುಟ್ಟ ದುರಸ್ತಿ ಕೆಲಸಗಳು ಮಾತ್ರ ಬಾಕಿಯಿದ್ದು, ಶೀಘ್ರದಲ್ಲೇ ರೈಲುಗಳ ಪುನರ್ ಸಂಚಾರ ಸಾಧ್ಯತೆ ನಿರೀಕ್ಷೆ ಇದೆ.

ಹಳಿ ದುರಸ್ತಿ ಕಾರ್ಯ ಪೂರ್ಣ: ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭ ಯಾವಾಗಿನಿಂದ?
ಹಳಿ ದುರಸ್ತಿ ಕಾರ್ಯ ಪೂರ್ಣ: ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭ ಯಾವಾಗಿನಿಂದ?
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 05, 2024 | 8:51 PM

Share

ಹಾಸನ, ಆಗಸ್ಟ್​ 05: ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್‌, ಎಡಕುಮೇರಿ ನಡುವೆ ಸಂಭವಿಸಿದ ಭೂಕುಸಿತದಿಂದಾಗಿ ಬೆಂಗಳೂರು-ಮಂಗಳೂರು (Bangaluru-Mangaluru) ಮಧ್ಯೆ ರೈಲುಗಳ ಸಂಚಾರ ರದ್ದಾಗಿತ್ತು. ಇದೀಗ ರೈಲು ಹಳಿ (Track) ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಇಂದಿನಿಂದ ಗೂಡ್ಸ್‌ ರೈಲುಗಳ ಸಂಚಾರಕ್ಕಷ್ಟೇ ಅವಕಾಶ ನೀಡಲಾಗಿದೆ. ಶೀಘ್ರದಲ್ಲೇ ರೈಲುಗಳ ಪುನರ್ ಸಂಚಾರ ಸಾಧ್ಯತೆ ನಿರೀಕ್ಷೆ ಇದೆ.

ಜುಲೈ 26ರಿಂದ ಬೆಂಗಳೂರು-ಮಂಗಳೂರು ಮಾರ್ಗ ಬಂದ್ ಆಗಿತ್ತು. ಕಿ.ಮೀ ನಂ.63ರಲ್ಲಿ ರೈಲ್ವೆ ಹಳಿ ಮೇಲೆ‌ ಗುಡ್ಡ ಕುಸಿದಿತ್ತು. 11 ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಇಲಾಖೆ ಕಾರ್ಮಿಕರು ಇಂದು ಹಳಿ ಮರುಸ್ಥಾಪಿಸಿದ್ದಾರೆ. ಕೇವಲ ಸಣ್ಣಪುಟ್ಟ ದುರಸ್ತಿ ಕೆಲಸಗಳು ಮಾತ್ರ ಬಾಕಿ ಇವೆ.

ಇದನ್ನೂ ಓದಿ: ಮಂಗಳೂರು ಬೆಂಗಳೂರು ರೈಲು ಸಂಚಾರ ಯಾವಾಗ ಪುನರಾರಂಭ? ಹಳಿ ದುರಸ್ತಿ ಕಾರ್ಯದ ಅಪ್​ಡೇಟ್ ಇಲ್ಲಿದೆ

ಸುಮಾರು 420ಕ್ಕೂ ಹೆಚ್ಚು ಕಾರ್ಮಿಕರು ಹಗಲು-ರಾತ್ರಿ ಶ್ರಮಿಸಿದ್ದಾರೆ. ಅಪಾಯವಿಲ್ಲದೆ ಮರುಸ್ಥಾಪನೆ ಮಾಡಿದ ರೈಲ್ವೆ ಹಳಿ ಮೇಲೆ ಗೂಡ್ಸ್ ರೈಲು ಪ್ರಾಯೋಗಿಕವಾಗಿ ಸಂಚರ ಮಾಡಲಾಗಿದೆ.

ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ತಡೆಗೋಡೆ ನಿರ್ಮಾಣ ಕಾರ್ಯ ಶನಿವಾರ ಮುಕ್ತಾಯಗೊಂಡಿದೆ. ರೈಲು ಮಾರ್ಗ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಗೋಡೆಯ ನಿರ್ಮಾಣದಲ್ಲಿ ಕಬ್ಬಿಣವನ್ನು ಬಳಸಲಾಗುತ್ತದೆ. ಪ್ರಸ್ತುತ ಹೆಚ್ಚುವರಿ ಹಂತದ ಬಂಡೆಗಳನ್ನು ಜೋಡಿಸುವ ಕಾರ್ಯ ಪ್ರಗತಿಯಲ್ಲಿದೆ.

ಇದನ್ನೂ ಓದಿ: ಮಂಗಳೂರು: ಕೆತ್ತಿಕಲ್ ಗುಡ್ಡದ ಮೇಲಿವೆ 200ಕ್ಕೂ ಹೆಚ್ಚು ಮನೆ, ವಯನಾಡು ರೀತಿಯ ದುರಂತದ ಭೀತಿ

ದುರಸ್ತಿ ಸ್ಥಳದಲ್ಲಿ ಪ್ರಸ್ತುತ ಗಂಟೆಗೆ 15 ಕಿ. ಮೀ. ವೇಗದ ಮಿತಿಯನ್ನು ಜಾರಿಗೊಳಿಸಲಾಗಿದೆಯಾದರೂ ಇದನ್ನು ರೈಲ್ವೆ ಇಲಾಖೆಯು ಅಧಿಕೃತವಾಗಿ ದೃಢೀಕರಿಸಿಲ್ಲ. ಶೀಘ್ರದಲ್ಲೇ ಪ್ರಯಾಣಿಕರ ರೈಲುಗಳ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ರೈಲ್ವೆ ಇಲಾಖೆಗಳು ಮೂಲಗಳು ತಿಳಿಸಿವೆ.

14 ರೈಲುಗಳ ಸಂಚಾರ ರದ್ದು

ನಿರಂತರ ಸುರಿದ ಮಳೆಯಿಂದಾಗಿ ಯಡಕುಮೇರಿ ಕಡಗರವಳ್ಳಿ ಮಧ್ಯೆ ಭೂಕುಸಿತ ಸಂಭವಿಸಿ ರೈಲು ಹಳಿಗಳ ಮೇಲೆ ಮಣ್ಣು ಬಿದ್ದ ಪರಿಣಾಮ ಜುಲೈ 26ರಿಂದ ಸುಮಾರು 14 ರೈಲುಗಳ ಸಂಚಾರ ಸ್ಥಗಿತಗೊಂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು