AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳಿ ದುರಸ್ತಿ ಕಾರ್ಯ ಪೂರ್ಣ: ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭ ಯಾವಾಗಿನಿಂದ?

ಬೆಂಗಳೂರು-ಮಂಗಳೂರು ಮಾರ್ಗದ ಎಡಕುಮೇರಿ ಮತ್ತು ಕಡಗರವಳ್ಳಿ ಬಳಿ ಭೂಕುಸಿತ ಸ್ಥಳದಲ್ಲಿ ರೈಲ್ವೆ ಹಳಿ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಇಂದಿನಿಂದ ಗೂಡ್ಸ್‌ ರೈಲುಗಳ ಸಂಚಾರಕ್ಕಷ್ಟೇ ಅವಕಾಶ ನೀಡಲಾಗಿದೆ. ಕೇವಲ ಸಣ್ಣಪುಟ್ಟ ದುರಸ್ತಿ ಕೆಲಸಗಳು ಮಾತ್ರ ಬಾಕಿಯಿದ್ದು, ಶೀಘ್ರದಲ್ಲೇ ರೈಲುಗಳ ಪುನರ್ ಸಂಚಾರ ಸಾಧ್ಯತೆ ನಿರೀಕ್ಷೆ ಇದೆ.

ಹಳಿ ದುರಸ್ತಿ ಕಾರ್ಯ ಪೂರ್ಣ: ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭ ಯಾವಾಗಿನಿಂದ?
ಹಳಿ ದುರಸ್ತಿ ಕಾರ್ಯ ಪೂರ್ಣ: ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭ ಯಾವಾಗಿನಿಂದ?
TV9 Web
| Edited By: |

Updated on: Aug 05, 2024 | 8:51 PM

Share

ಹಾಸನ, ಆಗಸ್ಟ್​ 05: ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್‌, ಎಡಕುಮೇರಿ ನಡುವೆ ಸಂಭವಿಸಿದ ಭೂಕುಸಿತದಿಂದಾಗಿ ಬೆಂಗಳೂರು-ಮಂಗಳೂರು (Bangaluru-Mangaluru) ಮಧ್ಯೆ ರೈಲುಗಳ ಸಂಚಾರ ರದ್ದಾಗಿತ್ತು. ಇದೀಗ ರೈಲು ಹಳಿ (Track) ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಇಂದಿನಿಂದ ಗೂಡ್ಸ್‌ ರೈಲುಗಳ ಸಂಚಾರಕ್ಕಷ್ಟೇ ಅವಕಾಶ ನೀಡಲಾಗಿದೆ. ಶೀಘ್ರದಲ್ಲೇ ರೈಲುಗಳ ಪುನರ್ ಸಂಚಾರ ಸಾಧ್ಯತೆ ನಿರೀಕ್ಷೆ ಇದೆ.

ಜುಲೈ 26ರಿಂದ ಬೆಂಗಳೂರು-ಮಂಗಳೂರು ಮಾರ್ಗ ಬಂದ್ ಆಗಿತ್ತು. ಕಿ.ಮೀ ನಂ.63ರಲ್ಲಿ ರೈಲ್ವೆ ಹಳಿ ಮೇಲೆ‌ ಗುಡ್ಡ ಕುಸಿದಿತ್ತು. 11 ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಇಲಾಖೆ ಕಾರ್ಮಿಕರು ಇಂದು ಹಳಿ ಮರುಸ್ಥಾಪಿಸಿದ್ದಾರೆ. ಕೇವಲ ಸಣ್ಣಪುಟ್ಟ ದುರಸ್ತಿ ಕೆಲಸಗಳು ಮಾತ್ರ ಬಾಕಿ ಇವೆ.

ಇದನ್ನೂ ಓದಿ: ಮಂಗಳೂರು ಬೆಂಗಳೂರು ರೈಲು ಸಂಚಾರ ಯಾವಾಗ ಪುನರಾರಂಭ? ಹಳಿ ದುರಸ್ತಿ ಕಾರ್ಯದ ಅಪ್​ಡೇಟ್ ಇಲ್ಲಿದೆ

ಸುಮಾರು 420ಕ್ಕೂ ಹೆಚ್ಚು ಕಾರ್ಮಿಕರು ಹಗಲು-ರಾತ್ರಿ ಶ್ರಮಿಸಿದ್ದಾರೆ. ಅಪಾಯವಿಲ್ಲದೆ ಮರುಸ್ಥಾಪನೆ ಮಾಡಿದ ರೈಲ್ವೆ ಹಳಿ ಮೇಲೆ ಗೂಡ್ಸ್ ರೈಲು ಪ್ರಾಯೋಗಿಕವಾಗಿ ಸಂಚರ ಮಾಡಲಾಗಿದೆ.

ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ತಡೆಗೋಡೆ ನಿರ್ಮಾಣ ಕಾರ್ಯ ಶನಿವಾರ ಮುಕ್ತಾಯಗೊಂಡಿದೆ. ರೈಲು ಮಾರ್ಗ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಗೋಡೆಯ ನಿರ್ಮಾಣದಲ್ಲಿ ಕಬ್ಬಿಣವನ್ನು ಬಳಸಲಾಗುತ್ತದೆ. ಪ್ರಸ್ತುತ ಹೆಚ್ಚುವರಿ ಹಂತದ ಬಂಡೆಗಳನ್ನು ಜೋಡಿಸುವ ಕಾರ್ಯ ಪ್ರಗತಿಯಲ್ಲಿದೆ.

ಇದನ್ನೂ ಓದಿ: ಮಂಗಳೂರು: ಕೆತ್ತಿಕಲ್ ಗುಡ್ಡದ ಮೇಲಿವೆ 200ಕ್ಕೂ ಹೆಚ್ಚು ಮನೆ, ವಯನಾಡು ರೀತಿಯ ದುರಂತದ ಭೀತಿ

ದುರಸ್ತಿ ಸ್ಥಳದಲ್ಲಿ ಪ್ರಸ್ತುತ ಗಂಟೆಗೆ 15 ಕಿ. ಮೀ. ವೇಗದ ಮಿತಿಯನ್ನು ಜಾರಿಗೊಳಿಸಲಾಗಿದೆಯಾದರೂ ಇದನ್ನು ರೈಲ್ವೆ ಇಲಾಖೆಯು ಅಧಿಕೃತವಾಗಿ ದೃಢೀಕರಿಸಿಲ್ಲ. ಶೀಘ್ರದಲ್ಲೇ ಪ್ರಯಾಣಿಕರ ರೈಲುಗಳ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ರೈಲ್ವೆ ಇಲಾಖೆಗಳು ಮೂಲಗಳು ತಿಳಿಸಿವೆ.

14 ರೈಲುಗಳ ಸಂಚಾರ ರದ್ದು

ನಿರಂತರ ಸುರಿದ ಮಳೆಯಿಂದಾಗಿ ಯಡಕುಮೇರಿ ಕಡಗರವಳ್ಳಿ ಮಧ್ಯೆ ಭೂಕುಸಿತ ಸಂಭವಿಸಿ ರೈಲು ಹಳಿಗಳ ಮೇಲೆ ಮಣ್ಣು ಬಿದ್ದ ಪರಿಣಾಮ ಜುಲೈ 26ರಿಂದ ಸುಮಾರು 14 ರೈಲುಗಳ ಸಂಚಾರ ಸ್ಥಗಿತಗೊಂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್