AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟನ್​ನಿಂದ ಬೀದರ್​ಗೆ ಆಗಮಿಸಿದ ವ್ಯಕ್ತಿಯ ಸಂಪರ್ಕಿತರ ಆರೋಗ್ಯದ ಮೇಲೆ ತೀವ್ರ ನಿಗಾ..

ವ್ಯಕ್ತಿಯ ಪ್ರಥಮ 8 ಜನ ಸಂಪರ್ಕಿತರು ಮತ್ತು ದ್ವಿತೀಯ 10 ಜನ ಸಂಪರ್ಕಿತರಲ್ಲಿ ಯಾವುದೇ ರೋಗ ಲಕ್ಷಣಗಳು ಇಲ್ಲದಿರುವುದರಿಂದ ಎಲ್ಲರಿಗೂ ಮನೆಯಲ್ಲಿ ಕ್ವಾರಂಟೈನ್​ಗೆ ವ್ಯವಸ್ಥೆ ಮಾಡಲಾಗಿದೆ. ಯಾತ್ರಾರ್ಥಿಯ ಸಂಪರ್ಕಕ್ಕೆ ಬಂದ ಎಲ್ಲರೂ ಕಡ್ಡಾಯವಾಗಿ ಕ್ವಾರಂಟೈನ್​ನಲ್ಲಿದ್ದು, ನಿಯಮಗಳ ಪಾಲನೆ ಮಾಡಬೇಕೆಂದು ನಿರ್ದೇಶನ ನೀಡಲಾಗಿದೆ.

ಬ್ರಿಟನ್​ನಿಂದ ಬೀದರ್​ಗೆ ಆಗಮಿಸಿದ ವ್ಯಕ್ತಿಯ ಸಂಪರ್ಕಿತರ ಆರೋಗ್ಯದ ಮೇಲೆ ತೀವ್ರ ನಿಗಾ..
ಜಿಲ್ಲಾಧಿಕಾರಿ ರಾಮಚಂದ್ರನ್ ಆರ್
sandhya thejappa
| Edited By: |

Updated on: Dec 25, 2020 | 12:00 PM

Share

ಬೀದರ್: ಬ್ರಿಟನ್​ನಿಂದ ನಗರಕ್ಕೆ ಆಗಮಿಸಿದ ವ್ಯಕ್ತಿಯ ಸಂಪರ್ಕಕ್ಕೆ ಬಂದ ಅವರ ಒಂದು ವರ್ಷದ ಪುತ್ರಿ ಸೇರಿದಂತೆ ಎಲ್ಲರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ತಿಳಿಸಿದ್ದಾರೆ.

ಈ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ 8 ಮತ್ತು ದ್ವಿತೀಯ ಸಂಪರ್ಕದ 10 ಮಂದಿಯಲ್ಲಿ ರೋಗದ ಯಾವುದೇ ಲಕ್ಷಣಗಳು ಇಲ್ಲದಿರುವುದರಿಂದ ಎಲ್ಲರಿಗೂ ಮನೆಯಲ್ಲಿ ಕ್ವಾರಂಟೈನ್​ಗೆ ವ್ಯವಸ್ಥೆ ಮಾಡಲಾಗಿದೆ. ಯಾತ್ರಾರ್ಥಿಯ ಸಂಪರ್ಕಕ್ಕೆ ಬಂದ ಎಲ್ಲರೂ ಕ್ವಾರಂಟೈನ್​ನಲ್ಲಿದ್ದು, ನಿಯಮಗಳ ಪಾಲನೆ ಮಾಡಬೇಕೆಂದು ನಿರ್ದೇಶನ ನೀಡಲಾಗಿದೆ. ಎಲ್ಲರನ್ನೂ ಪದೇಪದೇ ಭೇಟಿ ಮಾಡಿ ಆರೋಗ್ಯದ ಬಗ್ಗೆ ಮೇಲ್ವಿಚಾರಣೆ ಮಾಡಲು ಆರೋಗ್ಯ ಅಧಿಕಾರಿಗಳನ್ನು ನಿಯೋಜಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಕ್ರಮ ವಹಿಸಿದ್ದಾರೆ ಎಂದು ತಿಳಿಸಿದರು.

ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಂದ ಮಾಹಿತಿ ಬ್ರಿಟನ್​ನಿಂದ ಭಾರತಕ್ಕೆ ಡಿಸೆಂಬರ್ 11ರಂದು ಮರಳಿದ ವ್ಯಕ್ತಿ ಕಲಬುರಗಿಯಲ್ಲಿ ಉಳಿದುಕೊಂಡಿದ್ದರು. ಬಳಿಕ ಕಲಬುರಗಿಯಿಂದ ಡಿಸೆಂಬರ್ 21ರಂದು ಸೋಮವಾರ ಬೀದರ್​ನ ಶಿವನಗರಕ್ಕೆ ಬಂದಿದ್ದಾರೆ ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಬೀದರ್​ನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಡಿಸೆಂಬರ್ 22 ರಂದು ಮಾಹಿತಿ ನೀಡಿದ್ದರು.

ನೆಗೆಟಿವ್ ವರದಿ ಈ ಮಾಹಿತಿ ತಿಳಿಯುತ್ತಿದ್ದಂತೆ ಯಾತ್ರಾರ್ಥಿಯ ಪ್ರಾಥಮಿಕ ಹಾಗೂ ದ್ವೀತೀಯ ಸಂಪರ್ಕಿತರನ್ನು ಮೊಬೈಲ್ ಮೂಲಕ ಸಂಪರ್ಕಿಸಿ,  ಡಿಸೆಂಬರ್ 23 ರ ಬೆಳಗ್ಗೆ 10 ಗಂಟೆ ಹೊತ್ತಿಗೆ ಎಲ್ಲರ ಗಂಟಲು ದ್ರವವನ್ನು ಸಂಗ್ರಹಿಸಿ ಬೀದರ್​ನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪ್ರಥಮ 8 ಜನ ಸಂಪರ್ಕಿತರ ಗಂಟಲು ದ್ರವದ ಪರೀಕ್ಷೆ ನಡೆಸಲಾಗಿದ್ದು, ಎಲ್ಲ ವರದಿಗಳು ನೆಗಟಿವ್ ಇದೆ ಎಂದು ಟಿವಿ9 ಗೆ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

Corona Vaccine: ಚೀನಾದ ಲಸಿಕೆ ನಿರಾಕರಿಸಿದ ಬ್ರೆಜಿಲ್ ನಾಗರಿಕರು

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ