AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ಮೇವು ಸಾಗಿಸುತ್ತಿದ್ದ ಟ್ರ್ಯಾಕ್ಟರ್​ಗೆ ವಿದ್ಯುತ್ ತಂತಿ ತಗುಲಿ ಬೆಂಕಿ

ಹೂಲಗೇರಿಯಿಂದ ಸುನಗ ಗ್ರಾಮಕ್ಕೆ ಸಾಗಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ. ಆ ಮೂಲಕ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಈ ಸಂಬಂಧ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಗಲಕೋಟೆಯಲ್ಲಿ ಮೇವು ಸಾಗಿಸುತ್ತಿದ್ದ ಟ್ರ್ಯಾಕ್ಟರ್​ಗೆ ವಿದ್ಯುತ್ ತಂತಿ ತಗುಲಿ ಬೆಂಕಿ
ಮೇವು ಬೆಂಕಿಗೆ ಆಹುತಿ ಆಗಿರುವ ದೃಶ್ಯ
preethi shettigar
| Edited By: |

Updated on: Mar 17, 2021 | 6:54 PM

Share

ಬಾಗಲಕೋಟೆ: ವಿದ್ಯುತ್​ ತಂತಿ ತಗುಲಿ ಟ್ರ್ಯಾಕ್ಟರ್​ಗೆ ಬೆಂಕಿ ಹತ್ತಿಕೊಂಡು ಮೇವು ಸುಟ್ಟು ಭಸ್ಮವಾದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದಲ್ಲಿ ನಡೆದಿದೆ. ಟ್ರಾಕ್ಟರ್​ನಲ್ಲಿ ಇದ್ದ 25 ಸಾವಿರ ರೂಪಾಯಿ ಮೌಲ್ಯದ ಮೇವು ಬೆಂಕಿಗೆ ಆಹುತಿಯಾಗಿದ್ದು, ಹೂಲಗೇರಿಯಿಂದ ಸುನಗ ಗ್ರಾಮಕ್ಕೆ ಸಾಗಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ. ಆ ಮೂಲಕ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಈ ಸಂಬಂಧ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನದಲ್ಲಿ ಚಲಿಸುತ್ತಿದ್ದ ಲಾರಿ ಟೈಯರ್​ಗೆ ಬೆಂಕಿ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ಚಲಿಸುತ್ತಿದ್ದ ಸಿಮೇಂಟ್ ಲಾರಿ ಟೈರ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಲಾರಿ ಹಿಂಬದಿಯ ಆರು ಟೈರ್​ಗಳಲ್ಲಿ ಧಿಡೀರ್ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣ ಮಾತ್ರದಲ್ಲಿ ಲಾರಿಗೂ ಕೂಡ ಬೆಂಕಿ ವ್ಯಾಪಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.

ಬೆಂಗಳೂರಿನಿಂದ ಮಂಗಳೂರಿನ ಕಲ್ಲಡ್ಕ ಕಡೆಗೆ ಸಿಮೆಂಟ್ ಸಾಗಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಕುಪ್ಪಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಬೆಂಕಿ ಬಿದ್ದಿದ್ದನ್ನು ಗಮನಿಸಿ ಹೆದ್ದಾರಿ ಪಕ್ಕದಲ್ಲಿ ಲಾರಿ ನಿಲ್ಲಿಸಿದ ಚಾಲಕ ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಚಲಿಸುತ್ತಿದ್ದ ಲಾರಿಯ ಟೈರ್​ನ ಲೈನರ್ ಗಳಲ್ಲಿ ಉಷ್ಣಾಂಶ ಹೆಚ್ಚಾದ ಕಾರಣ ಬೆಂಕಿ ಹೊತ್ತಿಕೊಂಡಿರುವ ಶಂಕೆ ಉಂಟಾಗಿದೆ.

lorry fire

ಸಿಮೆಂಟ್​ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ದೃಶ್ಯ

ಇದನ್ನೂ ಓದಿ:

ಆಹುತಿ: ಆಕಸ್ಮಿಕ ಬೆಂಕಿಗೆ ಬಾಳೆ ತೋಟ ಭಸ್ಮ; 90 ಟನ್ ಇಳುವರಿ ನಷ್ಟ ಅನುಭವಿಸಿದ ಕೋಲಾರ ರೈತ

ಬೈಕ್​ ಸಾಗಿಸುತ್ತಿದ್ದ ಕಂಟೇನರ್‌ ಲಾರಿ ಧಗಧಗ: ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಹಾನಿ

Follow Us
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!