AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ- ಉಡುಪಿ ಜನರಿಗೆ ಸಿಹಿ ಸುದ್ದಿ: ಇನ್ನು ಮುಂದೆ ರೇಶನ್​ ಮೂಲಕ ಕೆಂಪು ಕುಚ್ಚಲಕ್ಕಿ ಪೂರೈಕೆ – ಉಸ್ತುವಾರಿ ಸಚಿವ ಪೂಜಾರಿ

Red parboiled rice supply: ಕರಾವಳಿ ಜಿಲ್ಲೆಯ ಕೆಂಪು ಕುಚಲಕ್ಕಿ ಬೇಡಿಕೆಯನ್ನು ಈ ಮೂಲಕ ಈಡೇರಿಸಲಾಗುವುದು. MO4, ಜ್ಯೋತಿ, ಅಭಿಲಾಶ, ಜಯ ತಳಿಯ ಅಕ್ಕಿ ಪಡೆಯಲು ಕೇಂದ್ರ ಸರ್ಕಾರದಿಂದ ಅನುಮತಿ ಬೇಕಿದೆ. ಮುಂದಿನ ದಿನಗಳಲ್ಲಿ ಪೂರೈಕೆ ಮಾಡುವ ಕೆಲಸ ಮಾಡುತ್ತೇವೆ ಎಂದು ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು.

ದಕ್ಷಿಣ ಕನ್ನಡ- ಉಡುಪಿ ಜನರಿಗೆ ಸಿಹಿ ಸುದ್ದಿ: ಇನ್ನು ಮುಂದೆ ರೇಶನ್​ ಮೂಲಕ ಕೆಂಪು ಕುಚ್ಚಲಕ್ಕಿ ಪೂರೈಕೆ - ಉಸ್ತುವಾರಿ ಸಚಿವ ಪೂಜಾರಿ
ದಕ್ಷಿಣ ಕನ್ನಡ- ಉಡುಪಿ ಜಿಲ್ಲೆ ಜನರಿಗೆ ಸಿಹಿ ಸುದ್ದಿ: ಇನ್ನು ಮುಂದೆ ರೇಶನ್​ ಮೂಲಕ ಕೆಂಪು ಕುಚ್ಚಲಕ್ಕಿ ಪೂರೈಕೆ - ಉಸ್ತುವಾರಿ ಸಚಿವ ಪೂಜಾರಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 27, 2021 | 4:31 PM

Share

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವ್ಯವಸ್ಥೆ ಕಾರ್ಡ್​​ನಲ್ಲಿ ಸಾಮಾನ್ಯ ಅಕ್ಕಿಯ ಬದಲು ಸಾಂಪ್ರದಾಯಿಕ ಕುಚ್ಚಲಕ್ಕಿ ಸರಬರಾಜಿಗೆ ಬೇಡಿಕೆ ಇರುವ ಬಗ್ಗೆ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಪೂಜಾರಿ ಅವರು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಸಂಬಂಧ ಇಂದು ಆಹಾರ ಸಚಿವ ಉಮೇಶ್ ವಿ. ಕತ್ತಿ ಜತೆ ಸಭೆ ನಡೆಸಿದ್ದೇವೆ. ನವೆಂಬರ್ ತಿಂಗಳಿಂದ ಕೆಂಪು ಕುಚ್ಚಲಕ್ಕಿ ಪೂರೈಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಬಹಳ ದಿನಗಳಿಂದಲೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನರು ಕುಚ್ಚುಲಕ್ಕಿಗಾಗಿ ಬೇಡಿಕೆ ಇಟ್ಟಿದ್ದಾರೆ. ಪಡಿತರದಲ್ಲಿ ನೀಡುವ ಸಾಮಾನ್ಯ ಅಕ್ಕಿಯಲ್ಲಿ ಇಲ್ಲಿಯ ಜನ ಊಟ ಮಾಡಲು ಸಾಧ್ಯವಿಲ್ಲ. ಜಿಲ್ಲೆಯಲ್ಲಿ ತಯಾರಾಗುವ ಕೆಂಪು ಕುಚ್ಚುಲಕ್ಕಿ ಬೇಕು ಅಂತ ಬೇಡಿಕೆ ಇಟ್ಟಿದ್ದರು. ಅನೇಕರು ರೇಷನ್ ಪಡೆಯದೇ, ಸಾಮಾನ್ಯ ಅಕ್ಕಿ ಮಾರಾಟದ ದೂರುಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಇಂದು ಆಹಾರ ಸಚಿವರ ಜೊತೆಗೆ ಸಭೆ ಮಾಡಲಾಗಿದೆ. ನವೆಂಬರ್ ತಿಂಗಳಿಂದ ಕೆಂಪು ಕುಚುಲಕ್ಕಿ ಪೂರೈಸೋ ನಿರ್ಣಯ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಕರಾವಳಿ ಜಿಲ್ಲೆಯ ಕೆಂಪು ಕುಚಲಕ್ಕಿ ಬೇಡಿಕೆಯನ್ನು ಈ ಮೂಲಕ ಈಡೇರಿಸಲಾಗುವುದು. MO4, ಜ್ಯೋತಿ, ಅಭಿಲಾಶ, ಜಯ ತಳಿಯ ಅಕ್ಕಿ ಪಡೆಯಲು ಕೇಂದ್ರ ಸರ್ಕಾರದಿಂದ ಅನುಮತಿ ಬೇಕಿದೆ. ಮುಂದಿನ ದಿನಗಳಲ್ಲಿ ಪೂರೈಕೆ ಮಾಡುವ ಕೆಲಸ ಮಾಡುತ್ತೇವೆ ಎಂದು ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು.

(Traditional Kuchalakki or Red parboiled rice to be supplied through ration cards says kota srinivasa pujari)

ಅಕ್ಕಿ ತೊಳೆದ ನೀರಿನಿಂದ ನುಣುಪಾದ ಸದೃಢ ತಲೆಕೂದಲು; ಮನೆಮದ್ದಿನಲ್ಲೇ ಇದೆ ಸಮಸ್ಯೆಗೆ ಪರಿಹಾರ

Published On - 4:30 pm, Thu, 27 May 21

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು