AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಚೆಕ್ಕಿಂಗ್ ವೇಳೆ ಅಪಘಾತ; ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಕಾಲಿನ‌‌ ಮೂಳೆ ಕಟ್

ಬೈಕ್ ಸವಾರರು ತ್ರಿಬಲ್ ರೈಡ್ ಬರುತ್ತಿದ್ದ ವೇಳೆ, ವಾಹನದ ಫೋಟೊ ಕ್ಲಿಕ್ ಮಾಡಲು ಮುಂದಾಗಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬಳಿ ಬೈಕ್​ ಬಂದಿದ್ದು, ಇದರಿಂದಾಗಿ ಸ್ವಲ್ಪ ಹಿಂದಕ್ಕೆ ಸರಿದಿದ್ದಾರೆ. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಟೂ ವೀಲರ್ ರಭಸವಾಗಿ ಬಿಸ್ನಾಳ್ ಅವರಿಗೆ ಗುದ್ದಿದೆ.

ವಾಹನ ಚೆಕ್ಕಿಂಗ್  ವೇಳೆ ಅಪಘಾತ; ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಕಾಲಿನ‌‌ ಮೂಳೆ ಕಟ್
ಟ್ರಾಫಿಕ್ ಠಾಣೆಯ ಕಾನ್ಸ್‌ಟೇಬಲ್ ಯಲ್ಲಾಲಿಂಗ್ ಬಿಸ್ನಾಳ್
TV9 Web
| Updated By: preethi shettigar|

Updated on: Jul 20, 2021 | 12:10 PM

Share

ಬೆಂಗಳೂರು: ವಾಹನ ಚೆಕ್ಕಿಂಗ್​ ವೇಳೆ ಅಪಘಾತ ಸಂಭವಿಸಿದ್ದು, ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಕಾಲಿನ‌‌ ಮೂಳೆ ಕಟ್​ ಆಗಿದೆ. ಚಾಮರಾಜಪೇಟೆ ಮುಖ್ಯರಸ್ತೆ ಬಳಿ ಚೆಕ್ಕಿಂಗ್​ ಮಾಡುವಾಗ ಈ ಘಟನೆ ನಡೆದಿದ್ದು, ಬಸವನಗುಡಿ ಟ್ರಾಫಿಕ್ ಠಾಣೆಯ ಕಾನ್ಸ್‌ಟೇಬಲ್ ಯಲ್ಲಾಲಿಂಗ್ ಬಿಸ್ನಾಳ್ ಅವರ ಕಾಲಿನ ಮೂಳೆ ಕಟ್​ ಆಗಿದೆ. ಬೈಕ್ ಸವಾರರು ತ್ರಿಬಲ್ ರೈಡ್ ಬರುತ್ತಿದ್ದ ವೇಳೆ, ವಾಹನದ ಫೋಟೊ ಕ್ಲಿಕ್ ಮಾಡಲು ಮುಂದಾಗಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬಳಿ ಬೈಕ್​ ಬಂದಿದ್ದು, ಇದರಿಂದಾಗಿ ಸ್ವಲ್ಪ ಹಿಂದಕ್ಕೆ ಸರಿದಿದ್ದಾರೆ.

ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಟೂ ವೀಲರ್ ರಭಸವಾಗಿ ಬಿಸ್ನಾಳ್ ಅವರಿಗೆ ಗುದ್ದಿದೆ. ಈ ಪರಿಣಾಮ ಬಿಸ್ನಾಳ್ ಅವರ ಬಲಗಾಲಿನ ಮೂಳೆ ಕಟ್ ಆಗಿದೆ. ಸದ್ಯ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬಿಸ್ನಾಳ್ ಅವರನ್ನು ಹಾಸ್ಮಟ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಟ್ಯಾಂಕರ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಟ್ಯಾಂಕರ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟ ಘಟನೆ ಕಲಬುರಗಿ ತಾಲೂಕಿನ ಕೋಟನೂರು ಬಳಿ ನಡೆದಿದೆ. ಕಲಬುರಗಿ ನಗರದ ನಿವಾಸಿಗಳಾದ ರಾಹುಲ್(25), ಖಾಸಿಂ(26), ಉಲ್ಲಾಸ್(26) ಸೇರಿ ನಾಲ್ವರ ಮೃತಪಟ್ಟಿದ್ದಾರೆ. ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ರಾತ್ರಿ ಒಂದು ಗಂಟೆ ಸಮಯದಲ್ಲಿ ಟ್ಯಾಂಕರ್ ಮತ್ತು ಕಾರಿನ ನಡುವೆ ದುರಂತ ಸಂಭವಿಸಿದೆ. ಕಾರು ಜೇವರ್ಗಿ ಕಡೆಯಿಂದ ಕಲಬುರಗಿಗೆ ಬರುತ್ತಿತ್ತು. ಹಾಗೂ ಟ್ಯಾಂಕರ್ ಕಲಬುರಗಿಯಿಂದ ಜೇವರ್ಗಿ ಕಡೆ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಇನ್ನು ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರ ಗುರುತು ಪತ್ತೆಯಾಗಿದೆ. ಇನ್ನೋರ್ವ ಮೃತನ ಗುರುತು ಪತ್ತೆ ಮಾಡಲಾಗುತ್ತಿದೆ. ಕಲಬುರಗಿ ನಗರ ಸಂಚಾರಿ 2 ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: Bus Accident: ಪಾಕಿಸ್ತಾನದಲ್ಲಿ ಭೀಕರ ಬಸ್ ಅಪಘಾತ; 30 ಜನರು ಸಾವು, 40 ಜನರಿಗೆ ಗಂಭೀರ ಗಾಯ

Afterlife Journey: ’ಅರೆ ಪ್ರಜ್ಞೆಯಲ್ಲಿದ್ದಾಗ ಸಾವಿನ ನಂತರದ ಬದುಕನ್ನು ಕಂಡೆ’ ಕಾರು ಅಪಘಾತದಿಂದ ಗಂಭೀರ ಸ್ಥಿತಿಯಲ್ಲಿದ್ದ​ ಅಧಿಕಾರಿ ಬಿಚ್ಚಿಟ್ಟ ರೋಚಕ ಅನುಭವ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!