AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಸಂಚಾರ ನಿಯಮ ಉಲ್ಲಂಘನೆಗಳನ್ನು ವರ್ಗೀಕರಿಸಿದ ಟ್ರಾಫಿಕ್ ಪೊಲೀಸರು

ಕರ್ನಾಟಕ ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘನೆಗಳನ್ನ ಟ್ರಾಫಿಕ್ ಪೊಲೀಸರು ಎರಡು ವರ್ಗಗಳಾಗಿ ವರ್ಗೀಕರಿಸಿದ್ದಾರೆ. ಈ ಬಗ್ಗೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ಅವರು ಆದೇಶಿಸಿದ್ದಾರೆ. ವರ್ಗ 1 ರಲ್ಲಿ ಗುರುತಿಸಿರುವ ಉಲ್ಲಂಘನೆಗಳು ಗುರುತರವಾಗಿರುತ್ತದೆ.

ಕರ್ನಾಟಕದಲ್ಲಿ ಸಂಚಾರ ನಿಯಮ ಉಲ್ಲಂಘನೆಗಳನ್ನು ವರ್ಗೀಕರಿಸಿದ ಟ್ರಾಫಿಕ್ ಪೊಲೀಸರು
ಕರ್ನಾಟಕದಲ್ಲಿ ಸಂಚಾರ ನಿಯಮ ಉಲ್ಲಂಘನೆಗಳನ್ನು ವರ್ಗೀಕರಿಸಿದ ಟ್ರಾಫಿಕ್ ಪೊಲೀಸರು (ಸಾಂದರ್ಭಿಕ ಚಿತ್ರ)
Shivaprasad B
| Edited By: |

Updated on: Dec 16, 2023 | 7:35 AM

Share

ಬೆಂಗಳೂರು, ಡಿ.16: ಕರ್ನಾಟಕ ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘನೆಗಳನ್ನ (Traffic Violations) ಟ್ರಾಫಿಕ್ ಪೊಲೀಸರು ಎರಡು ವರ್ಗಗಳಾಗಿ ವರ್ಗೀಕರಿಸಿದ್ದಾರೆ. ಈ ಬಗ್ಗೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ಅವರು ಆದೇಶಿಸಿದ್ದಾರೆ. ವರ್ಗ 1 ರಲ್ಲಿ ಗುರುತಿಸಿರುವ ಉಲ್ಲಂಘನೆಗಳು ಗುರುತರವಾಗಿದ್ದು, ಇವುಗಳಿಗೆ ಈ ನಿಯಮ ಉಲ್ಲಂಘನೆಗೆ ಪ್ರಥಮ ಅದ್ಯತೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವರ್ಗ-1 ರಲ್ಲಿ ನಿಯಮ ಉಲ್ಲಂಘನೆಗಳು

  • ಮದ್ಯಪಾನ ಮಾಡಿ ಚಾಲನೆ
  • ಅತೀ ವೇಗ ಚಾಲನೆ
  • ಅಜಾಗರೂಕ ಚಾಲನೆ
  • ವಾಹನ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವುದು
  • ಜಂಪಿಂಗ್ ಟ್ರಾಫಿಕ್ ಸಿಗ್ನಲ್
  • ಫ್ರೀ ವಿಲ್ಹಿಂಗ್
  • ರೇಸಿಂಗ್ ಮತ್ತು ವೇಗದ ಪ್ರಯೋಗ
  • ಶಿಸ್ತು ಪಥ ಚಾಲನೆ ಮಾಡದೇ ಇರುವುದು
  • ಜಿಗ್‌ ಜಾಗ್ (ಅಡ್ಡಾದಿಡ್ಡಿ) ವಾಹನ ಚಾಲನೆ
  • ಹೆದ್ದಾರಿಗಳಲ್ಲಿ ಅಡ್ಡಾದಿಡ್ಡಿ ಮತ್ತು ಅಪಾಯಕಾರಿ ರೀತಿಯಲ್ಲಿ ವಾಹನಗಳನ್ನು ನಿಲ್ಲಿಸುವುದು
  • ವಾಹನಗಳನ್ನು ತಪ್ಪು ಮತ್ತು ಅಪಾಯಕಾರಿ ರೀತಿಯಲ್ಲಿ ನಿಲ್ಲಿಸುವುದು
  • ಇಂಟರ್ ಸೆಕ್ಷನ್‌ನಲ್ಲಿ ವಾಹನ ನಿಲುಗಡೆ
  • ಬಿ.ಎಂ.ಟಿ.ಸಿ ನಿಲ್ದಾಣದಲ್ಲಿ ಇತರೆ ವಾಹನಗಳ ನಿಲುಗಡೆ ಮಾಡುವುದು
  • ಶಿರಸ್ತ್ರಾಣ (ಹೆಲೈಟ್) ಧರಿಸದೆ ದ್ವಿಚಕ್ರ ವಾಹನ ಚಾಲನೆ
  • ದ್ವಿಚಕ್ರ ವಾಹನದಲ್ಲಿ ಸವಾರರು/ಹಿಂದಿನ ಸವಾರರ ಶಿರಸ್ತ್ರಾಣ (ಹೆಲೈಟ್) ಧರಿಸದಿರುವುದು
  • ಸುರಕ್ಷತೆಯ ಸೀಟ್ ಬೆಲ್ಟ್ ಧರಿಸದಿರುವುದು
  • ಎಡಭಾಗದಿಂದ ಓವರ್ ಟೇಕ್ ಮಾಡುವುದು
  • ಪ್ರಯಾಣಿಕರನ್ನು ಅಪಾಯಕರ ರೀತಿಯಲ್ಲಿ ಕರೆದೊಯ್ಯುವುದು
  • ವಾಹನಗಳ ಮೇಲ್ಬಾವಣಿ (Roof top) ನಲ್ಲಿ ಪ್ರಯಾಣಿಕರನ್ನು ಕರೆದೊಯ್ಯುವುದು
  • ಪ್ರಯಾಣಿಕರನ್ನು ಗೂಡ್ಸ್ ವಾಹನಗಳಲ್ಲಿ ಕರೆದೊಯ್ಯುವುದು
  • ಮಿತಿಗಿಂತ ಹೆಚ್ಚಿನ ಶಾಲಾ ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಕರೆದೊಯ್ಯುವುದು
  • ಮಿತಿಗಿಂತ ಹೆಚ್ಚಿನ ಶಾಲಾ ಮಕ್ಕಳನ್ನು ಶಾಲಾ ಬಸ್/ವ್ಯಾನ್‌ಗಳಲ್ಲಿ ಕರೆದೊಯ್ಯುವುದು
  • ಸಾರಿಗೆ ವಾಹನಗಳಲ್ಲಿ ಹೆಚ್ಚಿನ ಪ್ರಯಾಣಿಕರನ್ನು ಕರೆದೊಯ್ಯುವುದು
  • ಟ್ರಿಪಲ್ ರೈಡಿಂಗ್
  • ಪಾದಚಾರಿ ಮಾರ್ಗದಲ್ಲಿ ವಾಹನ ನಿಲುಗಡೆ ಮಾಡುವುದು
  • ಪ್ರವೇಶ ನಿಷಿದ್ಧ

ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಸಂಚಾರಿ ಪೊಲೀಸರೊಂದಿಗೆ ಕೈ ಜೋಡಿಸಿದ ಐಐಎಸ್​ಸಿ

ವರ್ಗ-2 ರಲ್ಲಿ ಉಲ್ಲಂಘನೆಗಳು

  • ಹೈಬೀಮ್ ಲೈಟ್‌ ಗಳನ್ನು ವಾಹನಗಳಲ್ಲಿ ಬಳಸುವುದು
  • ತೀಕ್ಷ್ಣ ಬಿರುವ ಹೆಡ್‌ಲೈಟ್‌ಗಳನ್ನು ಬಳಸುವುದು
  • ವಾಹನ ಚಾಲನೆ ಮಾಡುವಾಗ ಕರ್ಕಶ ಹಾರ್ನ್ ಅನ್ನು ಬಳಸುವುದು
  • ನಿಷಿದ್ಧ ಪ್ರದೇಶಗಳಲ್ಲಿ ಹಾರ್ನ್ ಬಳಸುವುದು
  • ದೋಷಪೂರಿತ ಸೈಲನ್ಸರ್ ಅನ್ನು ಬಳಸುವುದು
  • ವಾಹನಗಳಲ್ಲಿ ಉದ್ದವಾದ ವಸ್ತು (Lengthy Material) ಗಳನ್ನು ಒಯ್ಯುವುದು
  • ಪಾದಚಾರಿ ಮಾರ್ಗದಲ್ಲಿ ವಾಹನ ಚಾಲನೆ ಮಾಡುವುದು
  • ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡುವುದು
  • ರಹದಾರಿ (ಪರ್ಮಿಟ್) ಇಲ್ಲದೇ ವಾಹನ ಚಾಲನೆ ಮಾಡುವುದು
  • ಆಟೋರಿಕ್ಷ ಚಾಲಕರು ನಿಗಧಿಪಡಿಸಿದ ಬಾಡಿಗೆ ದರಕ್ಕಿಂತ ಹೆಚ್ಚಿನ ದರವನ್ನು ಒತ್ತಾಯಿಸುವುದು
  • ಆಟೋರಿಕ್ಷ ಚಾಲಕರು ಬಾಡಿಗೆಗೆ ಕರೆದೊಯ್ಯಲು ನಿರಾಕರಿಸುವುದು
  • ಡಿಸ್‌ಪ್ಲೇ ಕಾರ್ಡ್ ಇಲ್ಲದೇ ವಾಹನ ಚಲಾಯಿಸುವುದು
  • ವಾಹನಗಳ ಗ್ಲಾಸ್‌ಗಳಿಗೆ ಬ್ಲಾಕ್ ಫಿಲ್ಡ್ ಬಳಕೆ ಮಾಡುವುದು
  • ಡಿಫೆಕ್ಟಿವ್ ರಿಜಿಸ್ಟರ್ ಪ್ಲೇಟ್
  • ವಾಹನ ಚಾಲಕರು ಸಮವಸ್ತ್ರ ಧರಿಸದಿರುವುದು
  • ಇನ್ಸೂರೆನ್ಸ್ ಪ್ರಮಾಣ ಪತ್ರವನ್ನು ಹೊಂದದಿರುವುದು
  • ಪರ್ಮಿಟ್ ಅನ್ನು ಉಲ್ಲಂಘಿಸುವುದು
  • ಹೆಚ್.ಟಿ.ವಿ (ಭಾರಿ) ವಾಹನಗಳ ಪ್ರವೇಶವನ್ನು ಉಲ್ಲಂಘಿಸುವುದು
  • ಅಗತ್ಯ ದಾಖಲೆಗಳನ್ನು ಹಾಜರುಪಡಿಸದಿರುವುದು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?