AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮಿರಜ್ ರೈಲು ಸಂಚಾರ ಭಾಗಶಃ ರದ್ದು

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆ ವಲಯವು ಹಲವು ರೈಲು ಸೇವೆಗಳ ಭಾಗಶಃ ರದ್ದತಿಯನ್ನು ವಿಸ್ತರಿಸಿದೆ. ಕ್ಯಾಸಲ್ ರಾಕ್-ಲೋಂಡಾ ರೈಲ್ವೆ ವಿದ್ಯುದೀಕರಣ ಕಾಮಗಾರಿಗಳಿಂದಾಗಿ ಮಿರಜ್-ಕ್ಯಾಸಲ್ ರಾಕ್ ಮತ್ತು ಬೆಳಗಾವಿ-ಮಿರಜ್ ರೈಲುಗಳು ಭಾಗಶಃ ರದ್ದಾಗಿವೆ. ತಿರುಪತಿ-ಹುಬ್ಬಳ್ಳಿ ರೈಲು ಸೇವೆಗಳನ್ನೂ ಕೂಡ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮಿರಜ್ ರೈಲು ಸಂಚಾರ ಭಾಗಶಃ ರದ್ದು
ಬೆಳಗಾವಿ ರೈಲು ನಿಲ್ದದ
ವಿವೇಕ ಬಿರಾದಾರ
|

Updated on:Feb 26, 2025 | 8:22 AM

Share

ಹುಬ್ಬಳ್ಳಿ, ಫೆಬ್ರವರಿ 26: ವಿವಿಧ ಕಾರ್ಯಾಚರಣೆಯ ಕಾರಣಗಳಿಂದಾಗಿ, ಈಗಾಗಲೇ ತಾತ್ಕಾಲಿಕವಾಗಿ ರದ್ದುಗೊಂಡಿರುವ ಕೆಲವು ರೈಲು (Train) ಸೇವೆಗಳ ರದ್ದತಿಯನ್ನು ಮತ್ತು ಭಾಗಶಃ ರದ್ದತಿಯನ್ನು ವಿಸ್ತರಲಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ (South Western Railway zone) ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

ಮಿರಜ್-ಕ್ಯಾಸಲ್ ರಾಕ್ ರೈಲುಗಳ ಭಾಗಶಃ ರದ್ದತಿ ವಿಸ್ತರಣೆ

ಹುಬ್ಬಳ್ಳಿ ರೈಲ್ವೆ ವಿಭಾಗದ ಕ್ಯಾಸಲ್ ರಾಕ್-ಲೋಂಡಾ ಭಾಗದಲ್ಲಿ ನಡೆಯ ತಿರುವ ರೈಲ್ವೆ ವಿದ್ಯುದೀಕರಣ ಮತ್ತು ಎಂಜಿನಿಯರಿಂಗ್ ಕಾಮಗಾರಿಗಳಿಂದಾಗಿ, ಈ ಕೆಳಗಿನ ರೈಲು ಸೇವೆಗಳ ಭಾಗಶಃ ರದ್ದತಿಯನ್ನು ವಿಸ್ತರಿಸಲಾಗಿದೆ.

  1. ರೈಲು ಸಂಖ್ಯೆ 17333: ಮಿರಜ್-ಕ್ಯಾಸಲ್ ರಾಕ್ ಡೈಲಿ ಕಾಯ್ದಿರಿಸದ ಎಕ್ಸ್‌ಪ್ರೆಸ್ ರೈಲು ಮಾರ್ಚ್ 31 ರವರೆಗೆ ಲೋಂಡಾ-ಕ್ಯಾಸಲ್ ರಾಕ್ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿರುತ್ತದೆ. ಈ ರೈಲು ಲೋಂಡಾ ನಿಲ್ದಾಣದಲ್ಲಿ ಕೊನೆಗೊಳ್ಳಲಿದೆ.
  2. ರೈಲು ಸಂಖ್ಯೆ 17334: ಕ್ಯಾಸಲ್ ರಾಕ್-ಮಿರಜ್ ಡೈಲಿ ಕಾಯ್ದಿರಿಸದ ಎಕ್ಸ್‌ಪ್ರೆಸ್ ರೈಲು ಮಾರ್ಚ್ 31 ರವರೆಗೆ ಕ್ಯಾಸಲ್ ರಾಕ್-ಲೋಂಡಾ ನಡುವೆ ಭಾಗಶಃ ರದ್ದಾಗಿರುತ್ತದೆ. ಈ ರೈಲು ಕ್ಯಾಸಲ್ ರಾಕ್ ಬದಲಿಗೆ ಲೋಂಡಾ ನಿಲ್ದಾಣದಿಂದ ಹೊರಡಲಿದೆ.

ಮೊದಲು, ಈ ರೈಲುಗಳನ್ನು ಫೆಬ್ರವರಿ 28 ರವರೆಗೆ ಭಾಗಶಃ ರದ್ದತಿಗಾಗಿ ಸೂಚಿಸಲಾಗಿತ್ತು, ಅದನ್ನು ಈಗ ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ.

11 ದಿನಗಳ ಕಾಲ ಬೆಳಗಾವಿ-ಮಿರಜ್ ಕಾಯ್ದಿರಿಸದ ವಿಶೇಷ ರೈಲು ಭಾಗಶಃ ರದ್ದು

ಕುಡಚಿ-ಉಗಾರ ಖುರ್ದ್ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕೆಳಗಿನ ರೈಲುಗಳನ್ನು 11 ದಿನಗಳ ಕಾಲ ಕುಡಚಿ-ಮಿರಜ್ ನಿಲ್ದಾಣಗಳ ನಡುವೆ ಭಾಗಶಃ ರದ್ದು ಗೊಳಿಸಲಾಗಿದೆ.

  1. ರೈಲು ಸಂಖ್ಯೆ 07303: ಬೆಳಗಾವಿ-ಮಿರಜ್ ಡೈಲಿ ಕಾಯ್ದಿರಿಸದ ವಿಶೇಷ ರೈಲು, ಫೆಬ್ರವರಿ 27 ರಿಂದ ಮಾರ್ಚ್ 9 ರವರೆಗೆ, ಕುಡಚಿ-ಮಿರಜ್ ನಡುವೆ ಭಾಗಶಃ ರದ್ದಾಗಿರುತ್ತದೆ. ಮತ್ತು ಈ ರೈಲು ಕುಡಚಿಯಲ್ಲಿ ಕೊನೆಗೊಳ್ಳಲಿದೆ.
  2. ರೈಲು ಸಂಖ್ಯೆ 07304: ಮಿರಜ್-ಬೆಳಗಾವಿ ಡೈಲಿ ಕಾಯ್ದಿರಿಸದ ವಿಶೇಷ ರೈಲು, ಫೆಬ್ರವರಿ 27 ರಿಂದ ಮಾರ್ಚ್ 9 ರವರೆಗೆ ಮಿರಜ್-ಕುಡಚಿ ನಡುವೆ ಭಾಗಶಃ ರದ್ದಾಗಿರುತ್ತದೆ. ಮತ್ತು ಈ ರೈಲು ಮಿರಜ್ ಬದಲಿಗೆ ಕುಡಚಿಯಿಂದ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಮದ್ದೂರು-ಮೈಸೂರು ನಡುವೆ ರೈಲು ಸಂಚಾರ ಭಾಗಶಃ ರದ್ದು

ತಾತ್ಕಾಲಿಕ ರದ್ದು

  1. ರೈಲು ಸಂಖ್ಯೆ 57405:ತಿರುಪತಿ ಕದಿರಿದೇವರಪಲ್ಲಿ ಡೈಲಿ ಪ್ಯಾಸೆಂಜರ್ ರೈಲು ಮಾರ್ಚ್ 7 ರವರೆಗೆ ಮತ್ತೆ ತಾತ್ಕಾಲಿಕವಾಗಿ ರದ್ದುಗೊಳ್ಳಲಿದೆ. ಈ ರೈಲನ್ನು ಮೊದಲು ಫೆಬ್ರವರಿ 28, 2025 ರವರೆಗೆ ರದ್ದುಪಡಿಸಲಾಗಿದೆ ಎಂದು ಸೂಚಿಸಲಾಗಿತ್ತು.
  2. ರೈಲು ಸಂಖ್ಯೆ 57406: ಕದಿರಿದೆವರವಲ್ಲಿ-ತಿರುಪತಿ ಡೈಲಿ ಪ್ಯಾಸೆಂಜರ್ ರೈಲು ಮಾರ್ಚ್ 8 ರವರೆಗೆ ರದ್ದುಗೊಳ್ಳಲಿದೆ. ಈ ರೈಲು ಮೊದಲು ಮಾರ್ಚ್ 1 ರವರೆಗೆ ರದ್ದುಪಡಿಸಲಾಗಿದೆ ಎಂದು ಸೂಚಿಸಲಾಗಿತ್ತು.
  3. ರೈಲು ಸಂಖ್ಯೆ 57401: ತಿರುಪತಿ-ಎಸ್ಎಸ್ಎಸ್ ಹುಬ್ಬಳ್ಳಿ, ಡೈಲಿ ಪ್ಯಾಸೆಂಜರ್ ರೈಲು ಮಾರ್ಚ್ 7 ರವರೆಗೆ ರದ್ದಾಗಿರುತ್ತದೆ. ಈ ರೈಲು ಮೊದಲು ಫೆಬ್ರವರಿ 28 ರವರೆಗೆ ರದ್ದುಪಡಿಸಲಾಗಿದೆ ಎಂದು ಸೂಚಿಸಲಾಗಿತ್ತು.
  4. ರೈಲು ಸಂಖ್ಯೆ 57402: ಎಸ್ಎಸ್ಎಸ್ ಹುಬ್ಬಳ್ಳಿ-ತಿರುಪತಿ ಡೈಲಿ ಪ್ಯಾಸೆಂಜರ್ ರೈಲು ಮಾರ್ಚ್ 8 ರವರೆಗೆ ರದ್ದಾಗಿರುತ್ತದೆ. ಈ ರೈಲು ಮೊದಲು ಮಾರ್ಚ್ 1 ರವರೆಗೆ ರದ್ದುಪಡಿಸಲಾಗಿದೆ ಎಂದು ಸೂಚಿಸಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 am, Wed, 26 February 25

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್