AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ಆಮ್ಲಜನಕ ಹೊತ್ತ ಎರಡು ಮತ್ತು ಮೂರನೇ ರೈಲು ಕರ್ನಾಟಕದತ್ತ; ನಾಳೆ ಬೆಂಗಳೂರಿಗೆ

ಕರ್ನಾಟಕದತ್ತ ಆಮ್ಲಜನಕ ಹೊತ್ತು ತರುತ್ತಿರುವ ಈ ಎರಡೂ ರೈಲುಗಳು 6 ಕ್ರೈಯೊಜೆನಿಕ್ ಕಂಟೇನರ್‌ಗಳನ್ನು ಹೊಂದಿದೆ. ಹಾಗೂ ಅವುಗಳಲ್ಲಿ 120 ಟನ್‌ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಇವೆ.

ವೈದ್ಯಕೀಯ ಆಮ್ಲಜನಕ ಹೊತ್ತ ಎರಡು ಮತ್ತು ಮೂರನೇ ರೈಲು ಕರ್ನಾಟಕದತ್ತ; ನಾಳೆ ಬೆಂಗಳೂರಿಗೆ
ಆಕ್ಸಿಜನ್ ಕಂಟೇನರ್‌ಗಳು (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 23, 2021 | 12:33 PM

Share

ಬೆಂಗಳೂರು: ವೈದ್ಯಕೀಯ ಆಮ್ಲಜನಕ ಹೊತ್ತ ಎರಡನೇ ರೈಲು ಕರ್ನಾಟಕಕ್ಕೆ ಬರುತ್ತಿದೆ. ಒಡಿಶಾದ ಕಾಳಿಂಗನಗರ್‌ನಿಂದ ಬೆಂಗಳೂರಿನ ಐಸಿಡಿ ವೈಟ್‌ಫೀಲ್ಡ್‌ಗೆ ಬರುತ್ತಿದೆ. ನಾಳೆ (ಮೇ 15) ಬೆಳಗ್ಗೆ 5 ಗಂಟೆ ವೇಳೆಗೆ ರೈಲು ಬೆಂಗಳೂರು ತಲುಪಲಿದೆ. ಒಡಿಶಾದ ಜಾಜಪುರ್ ಜಿಲ್ಲೆಯ ಕಾಳಿಂಗನಗರ್‌ನಿಂದ ರೈಲು ಇಂದು (ಮೇ 14) ರಾತ್ರಿ 3.10ರ ವೇಳೆಗೆ ಹೊರಟಿತ್ತು.

ಈ ರೈಲಿನ ಬಳಿಕ, ಕರ್ನಾಟಕಕ್ಕೆ ಆಕ್ಸಿಜನ್ ಹೊತ್ತ ಮತ್ತೊಂದು ರೈಲು (ಮೂರನೇ ರೈಲು) ನಾಳೆ (ಮೇ 15) ಸಂಜೆ ಆಗಮಿಸಲಿದೆ. ಜಾರ್ಖಂಡ್‌ನ ಟಾಟಾನಗರ್‌ನಿಂದ ಹೊರಟಿರುವ ರೈಲು ಐಸಿಡಿ ವೈಟ್‌ಫೀಲ್ಡ್‌ಗೆ ನಾಳೆ (ಮೇ 15) ಸಂಜೆ 5 ಗಂಟೆಯ ವೇಳಗೆ ತಲುಪಲಿದೆ. ರೈಲು ಟಾಟಾನಗರ್‌ನಿಂದ ಇಂದು (ಮೇ 14) ರಾತ್ರಿ 12.40 ವೇಳೆಗೆ ಹೊರಟಿತ್ತು.

ಕರ್ನಾಟಕದತ್ತ ಆಮ್ಲಜನಕ ಹೊತ್ತು ತರುತ್ತಿರುವ ಈ ಎರಡೂ ರೈಲುಗಳು 6 ಕ್ರೈಯೊಜೆನಿಕ್ ಕಂಟೇನರ್‌ಗಳನ್ನು ಹೊಂದಿದೆ. ಹಾಗೂ ಅವುಗಳಲ್ಲಿ 120 ಟನ್‌ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಇವೆ. ಈ ಬಗ್ಗೆ ಅಧಿಕೃತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಕರ್ನಾಟಕ ರಾಜ್ಯದಲ್ಲಿ ಆಕ್ಸಿಜನ್ ಅಭಾವ ಹೆಚ್ಚಾಗಿತ್ತು. ಅದನ್ನು ನೀಗಿಸಲು ಅನೇಕ ದೇಶಗಳು ಸಹಾಯಕ್ಕಾಗಿ ಮುಂದೆ ಬಂದಿದ್ದವು. ಸದ್ಯ ಮೇ 11ರಂದು ಮೊದಲ ಬಾರಿಗೆ ರೈಲಿನ ಮೂಲಕ ಆಕ್ಸಿಜನ್ ಬಂದಿತ್ತು. ಜಮ್​ಶೆಡ್​ಪುರದಿಂದ ಬೆಂಗಳೂರಿಗೆ ಎಕ್ಸ್‌ಪ್ರೆಸ್ ರೈಲಿನಲ್ಲಿ 6 ಆಕ್ಸಿಜನ್ ಕಂಟೇನರ್‌ಗಳು ತಲುಪಿದ್ದವು. ತಲಾ 20 ಟನ್ ಇರುವ ಆಕ್ಸಿಜನ್ ಕಂಟೇನರ್‌ಗಳು ವೈಟ್‌ಫೀಲ್ಡ್‌ನಲ್ಲಿರುವ ಕಾರ್ಪೊರೇಷನ್ ಆಫ್ ಇಂಡಿಯಾ ಡಿಪೋಗೆ ಆಗಮಿಸಿದ್ದವು.

ಜಮ್​ಶೆಡ್​ಪುರದಿಂದ 10ನೇ ತಾರೀಖಿನ ಮುಂಜಾನೆ 3ಕ್ಕೆ ಹೊರಟಿದ್ದ ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲು 30 ಗಂಟೆಯಲ್ಲಿ ಬೆಂಗಳೂರು ತಲುಪಿತ್ತು. ಐಎಸ್ಒ ಕಂಟೇನರ್ ಮೂಲಕ ಆಕ್ಸಿಜನ್ ಆಗಮಿಸಿದ್ದು ಒಟ್ಟು 17.50 ಸಾವಿರ ಲೀಟರ್ ಆಕ್ಸಿಜನ್ ತರಿಸಿಕೊಳ್ಳಲಾಗಿತ್ತು. ಆಕ್ಸಿಜನ್ ಹೊತ್ತ ರೈಲಿಗೆ ಗ್ರೀನ್ ಕಾರಿಡಾರ್ ವ್ಯವಸ್ಥೆ ಮಾಡಲಾಗಿತ್ತು.

ಇದನ್ನೂ ಓದಿ: ಗಾಳಿಯಲ್ಲಿರುವ ಆಕ್ಸಿಜನ್ ಪಡೆದು ರೋಗಿಗೆ ಸರಬರಾಜು ಮಾಡಬಲ್ಲ ಜನರೇಟರ್ ಸದ್ಯವೇ ಲಭ್ಯವಾಗಲಿದೆ: ಸಚಿವ ಡಾ.ಸುಧಾಕರ್

ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್​ ಪೆಂಡಾಲ್​; ಆಮ್ಲಜನಕ ಕೊರತೆ ನೀಗಿಸಲು ತಮಿಳುನಾಡು ವೈದ್ಯನ ವಿನೂತನ ಕ್ರಮ

Published On - 9:09 pm, Fri, 14 May 21

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್