AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆ ವಲಯದ ಈ ರೈಲುಗಳು ಭಾಗಶಃ ರದ್ದು

ಕುಡಗಿ ಯಾರ್ಡ್‌ನಲ್ಲಿ ರಸ್ತೆ 5 ಮತ್ತು 6 ರ ಕಾರ್ಯಾರಂಭದ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ, ಬಾಗಲಕೋಟೆ ಮತ್ತು ಗದಗ ಮಧ್ಯೆ ಸಂಚರಿಸುವ ರೈಲುಗಳು ಭಾಗಶಃ ರದ್ದಾಗಲಿವೆ. ಯಾವ ದಿನಾಂಕದಂದು ಭಾಗಶಃ ರದ್ದಾಗಲಿದೆ? ಇಲ್ಲಿದೆ ಮಾಹಿತಿ

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆ ವಲಯದ ಈ ರೈಲುಗಳು ಭಾಗಶಃ ರದ್ದು
ರೈಲು
ವಿವೇಕ ಬಿರಾದಾರ
|

Updated on:Sep 15, 2024 | 8:51 AM

Share

ಹುಬ್ಬಳ್ಳಿ, ಸೆಪ್ಟೆಂಬರ್​​ 15: ಕುಡಗಿ ಯಾರ್ಡ್‌ನಲ್ಲಿ (Kudgi Yard) ರಸ್ತೆ 5 ಮತ್ತು 6 ರ ಕಾರ್ಯಾರಂಭದ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲ ರೈಲುಗಳ (Train) ಸಂಚಾರ ಭಾಗಶಃ ರದ್ದಾಗಲಿವೆ ಎಂದು ನೈಋತ್ಯ ರೈಲ್ವೆ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಭಾಗಶಃ ರದ್ದು

  1. ರೈಲು ಸಂಖ್ಯೆ 06919: ಎಸ್​ಎಸ್​ಎಸ್​ ಹುಬ್ಬಳ್ಳಿ-ವಿಜಯಪುರ ಪ್ಯಾಸೆಂಜರ್ ವಿಶೇಷ ರೈಲು ಸೆಪ್ಟೆಂಬರ್ 22 ರಿಂದ 25 ರವರೆಗೆ ಬಾಗಲಕೋಟೆ- ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗಿದೆ. ರೈಲು ಬಾಗಲಕೋಟೆ ನಿಲ್ದಾಣದಲ್ಲಿ ಶಾರ್ಟ್ ಟರ್ಮಿನೇಟ್ ಆಗಲಿದೆ.
  2. ರೈಲು ಸಂಖ್ಯೆ 06920: ವಿಜಯಪುರ-ಎಸ್‌ಎಸ್‌ಎಸ್ ಹುಬ್ಬಳ್ಳಿ ಪ್ಯಾಸೆಂಜರ್ ರೈಲು ಸೆಪ್ಟೆಂಬರ್ 22 ರಿಂದ 25 ರವರೆಗೆ ವಿಜಯಪುರದ ಬದಲಿಗೆ ಬಾಗಲಕೋಟೆ ನಿಲ್ದಾಣದಿಂದ ಹೊರಡಲಿದೆ. ವಿಜಯಪುರ ಮತ್ತು ಬಾಗಲಕೋಟೆ ನಿಲ್ದಾಣಗಳ ನಡುವೆ ರೈಲು ಭಾಗಶಃ ರದ್ದಾಗಲಿದೆ.
  3. ರೈಲು ಸಂಖ್ಯೆ 07378: ಮಂಗಳೂರು ಸೆಂಟ್ರಲ್-ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಸೆಪ್ಟೆಂಬರ್ 21 ರಿಂದ 24ರವರೆಗೆ ಬಾಗಲಕೋಟೆ-ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ರೈಲು ಬಾಗಲಕೋಟೆ ನಿಲ್ದಾಣದಲ್ಲಿ ಶಾರ್ಟ್ ಟರ್ಮಿನೇಟ್ ಆಗಲಿದೆ.
  4. ರೈಲು ಸಂಖ್ಯೆ 07377: ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲು ಸೆಪ್ಟೆಂಬರ್ 22 ರಿಂದ 25ರವರೆಗೆ ವಿಜಯಪುರದ ಬದಲಿಗೆ ಬಾಗಲಕೋಟೆ ನಿಲ್ದಾಣದಿಂದ ಹೊರಡಲಿದೆ. ವಿಜಯಪುರ ಮತ್ತು ಬಾಗಲಕೋಟೆ ನಿಲ್ದಾಣಗಳ ನಡುವೆ ರೈಲು ಭಾಗಶಃ ರದ್ದಾಗಲಿದೆ.
  5. ರೈಲು ಸಂಖ್ಯೆ 17307: ಮೈಸೂರು-ಬಾಗಲಕೋಟ ಬಸವ ಎಕ್ಸ್‌ಪ್ರೆಸ್ ರೈಲು ಸೆಪ್ಟೆಂಬರ್ 21 ರಿಂದ 24ರವರೆಗೆ ವಿಜಯಪುರ-ಬಾಗಲಕೋಟೆ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ವಿಜಯಪುರ ನಿಲ್ದಾಣದಲ್ಲಿ ಕೊನೆಗೊಳ್ಳಲಿದೆ.
  6. ರೈಲು ಸಂಖ್ಯೆ 17308: ಬಾಗಲಕೋಟ-ಮೈಸೂರು ಬಸವ ಎಕ್ಸ್‌ಪ್ರೆಸ್ ರೈಲು ಸೆಪ್ಟೆಂಬರ್ 22 ರಿಂದ 25ರವರೆಗೆ ಬಾಗಲಕೋಟೆಯ ಬದಲಿಗೆ ವಿಜಯಪುರ ನಿಲ್ದಾಣದಿಂದ ಹೊರಡಲಿದೆ. ಬಾಗಲಕೋಟೆ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ರೈಲು ಭಾಗಶಃ ರದ್ದಾಗಲಿದೆ.
  7. ರೈಲು ಸಂಖ್ಯೆ 06545: ಯಶವಂತಪುರ-ವಿಜಯಪುರ ಎಕ್ಸ್‌ಪ್ರೆಸ್ ರೈಲು ಸೆಪ್ಟೆಂಬರ್ 21 ರಿಂದ 24ರವರೆಗೆ ಗದಗ-ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ರೈಲು ಗದಗ ನಿಲ್ದಾಣದಲ್ಲಿ ಕೊನೆಗೊಳ್ಳುತ್ತದೆ.
  8. ರೈಲು ಸಂಖ್ಯೆ 06546: ವಿಜಯಪುರ-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸೆಪ್ಟೆಂಬರ್ 22 ರಿಂದ 25ರವರೆಗೆ ವಿಜಯಪುರದ ಬದಲಿಗೆ ಗದಗ ನಿಲ್ದಾಣದಿಂದ ಹೊರಡಲಿದೆ. ವಿಜಯಪುರ-ಗದಗ ನಿಲ್ದಾಣಗಳ ನಡುವೆ ರೈಲು ಭಾಗಶಃ ರದ್ದಾಗಲಿದೆ.

ಇದನ್ನೂ ಓದಿ: ಓಣಂ ವಿಶೇಷ: ಹುಬ್ಬಳ್ಳಿ-ಬೆಂಗಳೂರು-ಕೇರಳ ಮಧ್ಯೆ ವಿಶೇಷ ರೈಲು

ರೈಲುಗಳ ನಿಯಂತ್ರಣ:

  1. ಸೆಪ್ಟೆಂಬರ್ 25, 2024 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 11305 ಸೋಲಾಪುರ-ಹೊಸಪೇಟೆ ಎಕ್ಸ್‌ಪ್ರೆಸ್ ಪ್ರಯಾಣವನ್ನು 45 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ರೈಲು ಸಂಖ್ಯೆ 17347/17348 ಎಸ್‌ಎಸ್‌ಎಸ್ ಹುಬ್ಬಳ್ಳಿ- ಚಿತ್ರದುರ್ಗ-ಎಸ್‌ಎಸ್‌ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್ ಚಿಕ್ಕಜಾಜೂರು-ಚಿತ್ರದುರ್ಗ-ಚಿಕ್ಕಜಾಜೂರು ನಡುವೆ ಕಳಪೆ ಆಕ್ಯುಪೆನ್ಸಿಯ ಕಾರಣದಿಂದ ಭಾಗಶಃ ರದ್ದತಿಯ ಮುಂದುವರೆಯತ್ತದೆ.

ವಿವರಗಳು ಈ ಕೆಳಗಿನಂತಿವೆ:

  1. ರೈಲು ಸಂಖ್ಯೆ 17347: ಎಸ್​ಎಸ್​ಎಸ್​ ಹುಬ್ಬಳ್ಳಿ-ಚಿತ್ರದುರ್ಗ ಎಕ್ಸ್‌ಪ್ರೆಸ್ ಚಿಕ್ಕಜಾಜೂರ್-ಚಿತ್ರದುರ್ಗ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ರೈಲು ಚಿತ್ರದುರ್ಗ ನಿಲ್ದಾಣದ ಬದಲಾಗಿ ಚಿಕ್ಕಜಾಜೂರಿನಲ್ಲಿ ಕೊನೆಗೊಳ್ಳುತ್ತದೆ. ಈ ಭಾಗಶಃ ರದ್ದತಿಯನ್ನು ಈ ಹಿಂದೆ ಸೆಪ್ಟೆಂಬರ್ 30ರವರೆಗೆ ಸೂಚಿಸಲಾಗಿತ್ತು, ಇದೀಗ ಅಕ್ಟೋಬರ್ 1 ರಿಂದ ಮಾರ್ಚ್ 31, 2025ರವರೆಗೆ ವಿಸ್ತರಿಸಲಾಗಿದೆ.
  2. ರೈಲು ಸಂಖ್ಯೆ 17348: ಚಿತ್ರದುರ್ಗ-ಎಸ್‌ಎಸ್‌ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್ ಕೂಡ ಚಿತ್ರದುರ್ಗ ಮತ್ತು ಚಿಕ್ಕಜಾಜೂರ್ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಚಿತ್ರದುರ್ಗ ನಿಲ್ದಾಣದ ಬದಲಾಗಿ ಚಿಕ್ಕಜಾಜೂರಿನಿಂದ ಹೊರಡಲಿದೆ. ಭಾಗಶಃ ರದ್ದತಿಯನ್ನು ಈ ಹಿಂದೆ ಸೆಪ್ಟೆಂಬರ್ 30ರವರೆಗೆ ಸೂಚಿಸಲಾಗಿದ್ದು, ಅಕ್ಟೋಬರ್ 1ರಿಂದ ಮಾರ್ಚ್ 31, 2025 ರವರೆಗೆ ವಿಸ್ತರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:51 am, Sun, 15 September 24

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ