AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಸುಖ-ದುಃಖವೇ ನಮ್ಮ ಸುಖ-ದುಃಖ: ಮುಷ್ಕರ ಬಿಟ್ಟು ಸೇವೆಗೆ ಮರಳಿ -ಸಾರಿಗೆ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್

ನಿಮ್ಮ ಸುಖ ದುಖ ನಮ್ಮ ಸುಖ ದುಖವಿದ್ದಂತೆಯೇ, ಎಲ್ಲಾ ಉದ್ಯೋಗಿಗಳು ದಯವಿಟ್ಟು ಮುಷ್ಕರ ಬಿಟ್ಟು ಮರಳಿ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.

ನಿಮ್ಮ ಸುಖ-ದುಃಖವೇ ನಮ್ಮ ಸುಖ-ದುಃಖ: ಮುಷ್ಕರ ಬಿಟ್ಟು ಸೇವೆಗೆ ಮರಳಿ -ಸಾರಿಗೆ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್
ಅಂಜುಂ ಪರ್ವೇಜ್
guruganesh bhat
|

Updated on: Apr 08, 2021 | 6:01 PM

Share

ಬೆಂಗಳೂರು: ಸಾರಿಗೆ ಸಿಬ್ಬಂದಿಗಳ ಮುಷ್ಕರಕ್ಕೆ ಪ್ರಚೋದನೆ ಕೊಟ್ಟರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್ ಸುದ್ದಿಗೋಷ್ಠಿ ನಡೆಸಿ ಎಚ್ಚರಿಕೆ ನೀಡಿದರು. ಬಸ್​ ಅಥವಾ ಸಾರಿಗೆ ಇಲಾಖೆಯ ಯಾವುದೇ ಆಸ್ತಿಪಾಸ್ತಿಗಳ ಮೇಲೆ ಕಲ್ಲು ತೂರಾಟ ಮಾಡಿದವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ. ನಿಮ್ಮ ಸುಖ-ದು:ಖ ನಮ್ಮ ಸುಖ-ದು:ಖವಿದ್ದಂತೆಯೇ, ಎಲ್ಲಾ ಉದ್ಯೋಗಿಗಳು ದಯವಿಟ್ಟು ಮುಷ್ಕರ ಬಿಟ್ಟು ಮರಳಿ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.

KSRTC ಸಂಸ್ಥೆಯನ್ನು ಬಹಳ ಶ್ರಮದಿಂದ ಕಟ್ಟಲಾಗಿದೆ. ಚಾಲಕ, ನಿರ್ವಾಹಕರ ಶ್ರಮವೂ ಬಹಳಷ್ಟು ಇದೆ. ಸಾರಿಗೆ ಸಿಬ್ಬಂದಿಗಳು ಇದೇ ಮೊದಲ ಬಾರಿಗೆ ಪ್ರತಿಭಟನೆ ಮಾಡುತ್ತಿಲ್ಲ. ನಾವು ಚರ್ಚಿಸಿ ಸಾಧಕ-ಬಾಧಕಗಳು ನೋಡಬೇಕು. ಆದರೆ ಈ ರೀತಿ ಮುಷ್ಕರ ಎಂದೂ ಆಗಿರಲಿಲ್ಲ. ಫೆಬ್ರವರಿ, ಮಾರ್ಚ್‌ನಲ್ಲಿ ಹಲವು ಸಮಿತಿಗಳ ಜತೆ ಚರ್ಚೆ ನಡೆಸಿದ್ದೇವೆ. 2000ದಲ್ಲಿ ಶೇ 10ರಷ್ಟು ಸಂಬಳ ಹೆಚ್ಚಿಸಲಾಗಿತ್ತು. 2004ರಲ್ಲಿ ಶೇ 5ರಷ್ಟು, 2008ರಲ್ಲಿ ಶೇ 6ರಷ್ಟು ಹೆಚ್ಚಳ ಮಾಡಲಾಗಿದೆ. 2012ರಲ್ಲಿ ಶೇಕಡಾ 6ರಷ್ಟು ಸಂಬಳ ಹೆಚ್ಚಿಸಲಾಗಿತ್ತು. 2016ರಲ್ಲಿ ಶೇ 12ರಷ್ಟು ಸಂಬಳ ಹೆಚ್ಚಿಸಲಾಗಿತ್ತು ಎಂದು ಬೆಂಗಳೂರಿನಲ್ಲಿ ಅಂಜುಂ ಪರ್ವೇಜ್ ಹೇಳಿದರು.

ವಸತಿ ಗೃಹದಲ್ಲಿರುವ ಸಿಬ್ಬಂದಿಗೆ ನೋಟಿಸ್

ಇದೇ ವೇಳೆ ವಸತಿ ಗೃಹಗಳಲ್ಲಿರುವ ಸಾರಿಗೆ ನೌಕರರಿಗೆ ಸರ್ಕಾರ ನೋಟಿಸ್ ಜಾರಿ ಮಾಡಿದೆ. ಈ ಕುರಿತು ಬಿಎಂಟಿಸಿ, ಕೆಎಸ್​ಆರ್​ಟಿಸಿ ಸಿಬ್ಬಂದಿಗೆ ತಿಳಿವಳಿಕೆ ಪತ್ರ ನೀಡಲಾಗಿದೆ. ವಸತಿ ಗೃಹದಲ್ಲಿದ್ದು ಕರ್ತವ್ಯಕ್ಕೆ ಹಾಜರಾಗದಿದ್ದರೆ ಕ್ರಮ ಕೈಗೊಳ್ಳಲಾಗುವುದು. ಕೆಲಸಕ್ಕೆ ಹಾಜರಾಗದಿದ್ದರೆ ವಸತಿ ಗೃಹ ತೆರವುಗೊಳಿಸಿ ಎಂದು ಶಾಂತಿನಗರ, ಕನ್ನಳ್ಳಿ‌ಯ ಡಿಪೋ-35 ಸೇರಿದಂತೆ ನಗರದ ಬಹುತೇಕ ಡಿಪೋ ನೌಕರರಿಗೆ ಮನೆ ಬಾಗಿಲಿಗೆ ಅಧಿಕಾರಿಗಳು ನೋಟಿಸ್ ಅಂಟಿಸಿದ್ದಾರೆ.

ಖಾಸಗಿಯವರಿಗೂ ದರ ನಿಗದಿ

ಖಾಸಗಿಯವರಿಗೂ KSRTC, BMTC ಹಾಲಿ ದರ ನಿಗದಿಪಡಿಸಲಾಗಿದೆ. ಖಾಸಗಿ ಬಸ್​ಗಳ ಮಾಲೀಕರು ಇದಕ್ಕೆ ಒಪ್ಪಿಕೊಂಡಿದ್ದಾರೆ. 2,300 ಬಸ್​ಗಳನ್ನು ಖಾಸಗಿಯವರಿಂದ ಪಡೆಯಲಾಗಿದೆ. ಮಿನಿ ಬಸ್, ಮ್ಯಾಕ್ಸಿ ಕ್ಯಾಬ್ಸ್, ಶಾಲಾ ವಾಹನಗಳು, ಆ್ಯಕ್ಸೆಲ್ ಬಸ್​ಗಳನ್ನು ಖಾಸಗಿಯವರಿಂದ ಪಡೆದಿದ್ದೇವೆ ಎಂದು ಸಾರಿಗೆ ಇಲಾಖೆ ಜಂಟಿ ಆಯುಕ್ತ ಹಾಲಸ್ವಾಮಿ ತಿಳಿಸಿದರು.

ಇದನ್ನೂ ಓದಿ: ವಿರೋಧ ಪಕ್ಷದಲ್ಲಿದ್ದಾಗ ಯಡಿಯೂರಪ್ಪ ಏನು ಹೇಳಿದ್ದರು ನೆನಪು ಮಾಡ್ಕೊಳಿ: ಸಂಸದ ಪ್ರತಾಪ್​ಗೆ ಸಾರಿಗೆ ನೌಕರರಿಂದ ಟಕ್ಕರ್

ಮುಷ್ಕರ ಕೈ ಬಿಡಿ ಇಲ್ಲವಾದ್ರೆ ಮನೆ ಖಾಲಿ ಮಾಡಿ: ಸಾರಿಗೆ ಸಿಬ್ಬಂದಿಗೆ ಹಿರಿಯ ಅಧಿಕಾರಿಗಳಿಂದ ನೋಟಿಸ್

ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ