AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರ ಮುಷ್ಕರ; ಸರ್ಕಾರ ಸ್ಪಂದಿಸದಿದ್ದರೆ ಮತ್ತೆ ಧರಣಿ ಮಾಡ್ತೇವೆ: ಕೋಡಿಹಳ್ಳಿ ಚಂದ್ರಶೇಖರ್

ಕರ್ನಾಟಕ ಬಜೆಟ್​ನಲ್ಲಿ ಪ್ರಸ್ತಾಪವೇ ಆಗದ 6 ನೇ ವೇತನ ಆಯೋಗ ವಿಚಾರಕ್ಕೆ ಸಂಬಂಧಿಸಿದಂತೆ, ಇದೇ ತಿಂಗಳ 16ನೇ ತಾರೀಕಿನಂದು ಮತ್ತೆ ಮುಷ್ಕರ ಕೈಗೊಳ್ಳುವಂತೆ ಸಾರಿಗೆ ನೌಕರರು ಮುಂದಾಗಿದ್ದಾರೆ.

ಸಾರಿಗೆ ನೌಕರರ ಮುಷ್ಕರ; ಸರ್ಕಾರ ಸ್ಪಂದಿಸದಿದ್ದರೆ ಮತ್ತೆ ಧರಣಿ ಮಾಡ್ತೇವೆ: ಕೋಡಿಹಳ್ಳಿ ಚಂದ್ರಶೇಖರ್
ಸಾರಿಗೆ ನೌಕರರ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್
shruti hegde
|

Updated on: Mar 09, 2021 | 3:25 PM

Share

ಬೆಂಗಳೂರು: ಮಾರ್ಚ್​ 8ರಂದು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮಂಡಿಸಿದ ಬಜೆಟ್​ನಲ್ಲಿ ಪ್ರಸ್ತಾಪವೇ ಆಗದ 6 ನೇ ವೇತನ ಆಯೋಗ ವಿಚಾರಕ್ಕೆ ಸಂಬಂಧಿಸಿದಂತೆ, ಇದೇ ತಿಂಗಳ 16ನೇ ತಾರೀಕಿನಂದು ಮತ್ತೆ ಮುಷ್ಕರ ಕೈಗೊಳ್ಳುವಂತೆ ಸಾರಿಗೆ ನೌಕರರು ಮುಂದಾಗಿದ್ದಾರೆ. ಈ ಕುರಿತಂತೆ ಇಂದು ಸಾರಿಗೆ ನೌಕರರ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ರಾಜ್ಯ ಸರ್ಕಾರಕ್ಕೆ ಏಪ್ರಿಲ್ 7ರವರೆಗೆ ಗಡುವು ನೀಡಲಾಗುತ್ತದೆ. ಆ ನಂತರವೂ ಸರ್ಕಾರ ಸ್ಪಂದಿಸದಿದ್ದರೆ, ಧರಣಿ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ಸಾರಿಗೆ ನೌಕರರ ಬೇಡಿಕೆ ಬಗ್ಗೆ ಮಾ.16ಕ್ಕೆ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ. ಮನವಿ ಸಲ್ಲಿಸಿದ ದಿನದಿಂದ 22 ದಿನ ಅಂದರೆ ಏಪ್ರಿಲ್ 7ರವರೆಗೆ ರಾಜ್ಯ ಸರ್ಕಾರಕ್ಕೆ ಗಡುವು ನೀಡಲಾಗುತ್ತದೆ. ಆದರೂ ಸರ್ಕಾರ ಸ್ಪಂದನೆ ನೀಡದಿದ್ದರೆ ಧರಣಿ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಸಾರಿಗೆ ನೌಕರರ ಭವಿಷ್ಯಕ್ಕೆ ಬಜೆಟ್​ನಲ್ಲಿ ಯಾವುದೇ ಅವಕಾಶ ನೀಡಿಲ್ಲ. 1.30 ಲಕ್ಷ ನೌಕರರು ಇದ್ದಾರೆ. ಡಿಸೆಂಬರ್ 14ರಲ್ಲಿ ನೀಡಿದ್ದ ಭರವಸೆ ಈಡೇರಿಲ್ಲ. 3 ತಿಂಗಳ ಕಾಲಾವಕಾಶ ಮುಗಿಯುತ್ತಿದೆ. ಇದು ನಿರಾಶಾದಾಯಕ. ಮಾರ್ಚ್ 16ಕ್ಕೆ ಕಾರ್ಮಿಕ ಇಲಾಖೆಗೆ ನೋಟಿಸ್ ಕೊಡುತ್ತೇವೆ. ಏಪ್ರಿಲ್ 7ರ ಮುಷ್ಕರಕ್ಕೆ ಮತ್ತೆ ಸಭೆ ಕರೆದು ರೂಪು ರೇಷೆಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದಿದ್ದಾರೆ.

ಡಿಸೆಂಬರ್​ ತಿಂಗಳಿನಲ್ಲಿ ನಾಲ್ಕು ದಿನಗಳ ಕಾಲ ಸಾರಿಗೆ ನೌಕರರ ಮುಷ್ಕರ ನಡೆಸಲಾಗಿತ್ತು. ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ‌ ಮಾಡಬೇಕೆಂಬ ಬೇಡಿಕೆಯ ಜೊತೆಗೆ, ಒಟ್ಟು 10 ಬೇಡಿಕೆಗಳನ್ನು ಈಡೇರಿಸುವಂತೆ ಮುಷ್ಕರಕ್ಕೆ ಮುಂದಾಗಿದ್ದರು. ಈ ವೇಳೆ ರಾಜ್ಯ ಸರ್ಕಾರ ಸರ್ಕಾರಿ ನೌಕರರನ್ನಾಗಿ ಮಾಡುವ ಬೇಡಿಕೆ ಬಿಟ್ಟು, ಉಳಿದ ಒಂಬತ್ತು ಬೇಡಿಕೆಗಳನ್ನ ಈಡೇರಿಸುವ ಭರವಸೆ ನೀಡಿತ್ತು. ಜೊತೆಗೆ 6ನೇ ವೇತನ ಆಯೋಗ ಜಾರಿಯ ಕುರಿತಾಗಿ ಭರವಸೆ ನೀಡಿತ್ತು. ಆದರೆ ನಿನ್ನೆಯ ಬಜೆಟ್​ನಲ್ಲೂ ಬೇಡಿಕೆ ಈಡೇರಿಸಿಲ್ಲ ಎಂಬ ಕಾರಣಕ್ಕೆ ಮತ್ತೆ ಮುಷ್ಕರಕ್ಕೆ ಸಾರಿಗೆ ನೌಕರರು ಮುಂದಾಗಿದ್ದಾರೆ.

ಇದನ್ನೂ ಓದಿ: ಬಜೆಟ್​ನಲ್ಲಿ ಸಾರಿಗೆ ನೌಕರರ ಬೇಡಿಕೆಗಳಿಗೆ ಎಳ್ಳು ನೀರು ಹಿನ್ನೆಲೆ; ಮತ್ತೆ ಮುಷ್ಕರಕ್ಕೆ ಮುಂದಾಗ್ತಾರಾ ಸಾರಿಗೆ ನೌಕರರು?

ಇದನ್ನೂ ಓದಿ: ಇಂದು ಬೆಂಗಳೂರಿಗೆ ತಟ್ಟಲಿದೆ ಪ್ರತಿಭಟನೆ ಬಿಸಿ.. ಸಾರಿಗೆ ನೌಕರರು, ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್‌

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್