AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸೇವಾ ಚಟುವಟಿಕೆಗಳಿಗೆ ಸಾರಿಗೆ ಸೌಲಭ್ಯ: ಡಿಸಿಎಂ ಲಕ್ಷ್ಮಣ ಸವದಿ

ರಾಜ್ಯದಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆಗಳಿಗೆ ಮತ್ತು ಕೊವಿಡ್ ನಿಯಂತ್ರಣ ಕೆಲಸ ಕಾರ್ಯಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗಾಗಿ ನಾಲ್ಕೂ ಸಾರಿಗೆ ನಿಗಮಗಳಿಂದ ಅಗತ್ಯಕ್ಕನುಗುಣವಾಗಿ ಬಸ್ಸುಗಳ ಸೇವೆಯನ್ನು ಒದಗಿಸಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಈಗಾಗಲೇ ಆರೋಗ್ಯ ಮತ್ತು ತುರ್ತು ಸೇವೆಗಳಿಗಾಗಿ ಪ್ರತಿನಿತ್ಯ 156 ಬಿಎಂಟಿಸಿ ಬಸ್ಸುಗಳನ್ನು ಒದಗಿಸಲಾಗಿದೆ.

ಆರೋಗ್ಯ ಸೇವಾ ಚಟುವಟಿಕೆಗಳಿಗೆ ಸಾರಿಗೆ ಸೌಲಭ್ಯ: ಡಿಸಿಎಂ ಲಕ್ಷ್ಮಣ ಸವದಿ
ಡಿಸಿಎಂ ಲಕ್ಷ್ಮಣ ಸವದಿ
sandhya thejappa
sandhya thejappa|

Updated on: May 01, 2021 | 12:01 PM

Share

ರಾಯಚೂರು: ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸರ್ಕಾರ ಲಾಕ್​ಡೌನ್​ ವಿಧಿಸಿದ್ದರು ಸಹ ಕೊವಿಡ್​ಗೆ ಸಂಬಂಧಪಟ್ಟ ಸೇವಾ ಚಟುವಟಿಕೆಗಳಿಗೆ ಮತ್ತು ಕೊವಿಡ್ ವಾರಿಯರ್ಸ್​ಗಳ ಸೇವೆಗೆ ಅಗತ್ಯವಾದಲ್ಲಿ ಬಸ್ಸುಗಳನ್ನು ಒದಗಿಸಲು ನಾಲ್ಕೂ ನಿಗಮಗಳಲ್ಲಿ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿಯವರು ತಿಳಿಸಿದ್ದಾರೆ.ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಪ್ರಸ್ತುತ ಇಡೀ ರಾಜ್ಯವೇ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಅತ್ಯಂತ ತುರ್ತು ಸನ್ನಿವೇಶವನ್ನು ಎದುರಿಸುತ್ತಿದೆ. ಆದ್ದರಿಂದ ಸಾರಿಗೆ ನಿಗಮಗಳಿಂದಲೂ ಸಹ ಈ ಸೂಕ್ಷ್ಮ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರದ ಪ್ರಯತ್ನಗಳಿಗೆ ಕೈಜೋಡಿಸಿ ಕೆಲಸ ಮಾಡುವಂತೆ ಸೂಚಿಸಲಾಗಿದೆ ಎಂದು ವಿವರಿಸಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆಗಳಿಗೆ ಮತ್ತು ಕೊವಿಡ್ ನಿಯಂತ್ರಣ ಕೆಲಸ ಕಾರ್ಯಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗಾಗಿ ನಾಲ್ಕೂ ಸಾರಿಗೆ ನಿಗಮಗಳಿಂದ ಅಗತ್ಯಕ್ಕನುಗುಣವಾಗಿ ಬಸ್ಸುಗಳ ಸೇವೆಯನ್ನು ಒದಗಿಸಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಈಗಾಗಲೇ ಆರೋಗ್ಯ ಮತ್ತು ತುರ್ತು ಸೇವೆಗಳಿಗಾಗಿ ಪ್ರತಿನಿತ್ಯ 156 ಬಿಎಂಟಿಸಿ ಬಸ್ಸುಗಳನ್ನು ಒದಗಿಸಲಾಗಿದೆ. ಇದರಿಂದಾಗಿ ವಿವಿಧ ಆಸ್ಪತ್ರೆಗಳ ನಡುವೆ ಸಂಪರ್ಕಕ್ಕೆ ಅನುಕೂಲವಾಗಿದೆ. ಅಲ್ಲದೇ ವೈದ್ಯರಿಗೆ, ದಾದಿಯರಿಗೆ, ಪೊಲೀಸರಿಗೆ, ಅಗ್ನಿಶಾಮಕ ದಳದವರಿಗೆ, ನೀರು-ವಿದ್ಯುತ್ ಪೂರೈಕೆಯಲ್ಲಿ ಕೆಲಸ ಮಾಡುತ್ತಿರುವವರಿಗೆ ಸಂಚಾರ ಸೌಲಭ್ಯಕ್ಕೆ ಸಹಾಯಕವಾಗಿದೆ. ಕೆಎಸ್ಆರ್​ಟಿಸಿಯಿಂದ ಇದೇ ರೀತಿ ಸುಮಾರು 50 ಬಸ್ಸುಗಳು ಸಂಚರಿಸುತ್ತಿವೆ.

ಸವದಿಯ ಮನವಿ ಸಾರಿಗೆ ನಿಗಮಗಳಿಂದಲೂ ಆಯಾ ಜಿಲ್ಲಾಡಳಿತವು ಮನವಿ ಮಾಡಿಕೊಂಡ ಪ್ರಕಾರ ತುರ್ತು ಸೇವೆಗಾಗಿ ಬಸ್ಸುಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಡಳಿತದಿಂದ ಒಂದು ವೇಳೆ ಮುಂದಿನ ದಿನಗಳಲ್ಲಿ ಮತ್ತಷ್ಟು ಬಸ್ಸುಗಳಿಗೆ ಬೇಡಿಕೆ ಬಂದರೆ ಸ್ಥಳೀಯ ಅಗತ್ಯಕ್ಕೆ ತಕ್ಕಂತೆ ಹೆಚ್ಚಿನ ಬಸ್ಸುಗಳನ್ನು ಒದಗಿಸುವುದಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಾಕ್​ಡೌನ್​ ಅವಧಿಯಲ್ಲಿ ಸಾರ್ವಜನಿಕರ ಸಾರಿಗೆ ಸಂಚಾರವನ್ನು ನಿಷೇಧಿಸಿರುವುದರಿಂದ ಈ ವಿಶೇಷ ಬಸ್ಸುಗಳ ಸೌಕರ್ಯವೂ ಕೇವಲ ಆರೋಗ್ಯ ಮತ್ತು ತುರ್ತು ಸಂದರ್ಭಗಳನ್ನು ನಿಭಾಯಿಸಲು ಸೇವೆ ಸಲ್ಲಿಸುತ್ತಿರುವವರಿಗೆ ಮಾತ್ರ ಸೀಮಿತವಾಗಿದೆ. ಇತರ ಪ್ರಯಾಣಿಕರಿಗೆ ಈ ಬಸ್ ಸೌಲಭ್ಯಗಳು ಇರುವುದಿಲ್ಲ. ಸಾರ್ವಜನಿಕರು ಈ ಸೂಕ್ಷ್ಮ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಸೂಕ್ತ ಸಹಕಾರ ನೀಡಬೇಕೆಂದು ಸವದಿಯವರು ಮನವಿ ಮಾಡಿಕೊಂಡಿದ್ದಾರೆ.

ಕಳೆದ ವರ್ಷ ಕೊರೊನಾ ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಸಾರಿಗೆ ನಿಗಮಗಳ ಬಸ್ಸುಗಳನ್ನೇ ಮೊಬೈಲ್ ಕ್ಲಿನಿಕ್​ಗಳನ್ನಾಗಿ ಮತ್ತು ಕೊವಿಡ್ ಟೆಸ್ಟಿಂಗ್ ವಾಹನಗಳನ್ನಾಗಿ ಮಾರ್ಪಡಿಸಲಾಗಿತ್ತು. ಸುಮಾರು 20 ಮೊಬೈಲ್ ಬಸ್ಸುಗಳೂ ಸಹ ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಆಯಾ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಗಳ ಸಹಯೋಗದೊಂದಿಗೆ ಸೇವೆ ಸಲ್ಲಿಸುತ್ತಿವೆ ಎಂದು ಸವದಿಯವರು ಸ್ಪಷ್ಟಪಡಿಸಿ, ಕೊವಿಡ್ ವಾರಿಯರ್ಸ್​ಗಳಂತೆಯೇ ಸಾರಿಗೆ ನಿಗಮಗಳ ಸಿಬ್ಬಂದಿಗಳು ಸಹ ಇಂದಿನ ಸಂಕಷ್ಟದ ಕಾಲದಲ್ಲಿ ಸೇವೆ ಸಲ್ಲಿಸುತ್ತಿರುವುದಕ್ಕೆ ಸವದಿ ತಮ್ಮ ಕೃತಜ್ಞತೆಗಳನ್ನು ತಿಳಿಸಿದ್ದಾರೆ.

ಇದನ್ನೂ ಓದಿ

ಲಂಡನ್ ಉಚ್ಛ ನ್ಯಾಯಾಲಯಕ್ಕೆ ನೀರವ್ ಮೋದಿ; ಭಾರತ ಹಸ್ತಾಂತರಕ್ಕೆ ತಡೆ ಕೋರಿ ಅರ್ಜಿ

ವಿಶ್ವ ದಾಖಲೆ: ಭಾರತದಲ್ಲಿ ದಿನಕ್ಕೆ 4 ಲಕ್ಷದ ಗಡಿ ದಾಟಿದ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ, ಪ್ರತಿ ನಿಮಿಷಕ್ಕೆ ಸರಾಸರಿ 2 ಸಾವು

(Transport for health service activities will be provided says Savadi said at raichur)

Follow Us
sandhya thejappa
sandhya thejappa
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು