AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಆಗಿದ್ದಾಗ ಪರ್ಸಂಟೇಜ್ ವ್ಯವಹಾರ ಮಾಡಲಿಲ್ಲ ಎಂದ ಕುಮಾರಸ್ವಾಮಿಗೆ ಭೂತದ ಬಾಯಲ್ಲಿ ಭಗವದ್ಗೀತೆ ಎಂದರು ಸಚಿವ ಶ್ರೀರಾಮುಲು

HD Kumaraswamy: ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ರಾಜ್ಯವನ್ನ ಲೂಟಿ ಮಾಡೋ ಕೆಲಸ ಮಾಡಿದ್ದಾರೆ. ಅವರು ಮಾಡಿದ ಭ್ರಷ್ಟಾಚಾರಗಳನ್ನ ಬಿಜೆಪಿ ಸರ್ಕಾರ ಪ್ಯಾಚ್ ಆಫ್ ಮಾಡ್ತಿದೆ - ಶ್ರೀರಾಮುಲು ವಾಗ್ದಾಳಿ ನಡೆಸಿದರು

ಸಿಎಂ ಆಗಿದ್ದಾಗ ಪರ್ಸಂಟೇಜ್ ವ್ಯವಹಾರ ಮಾಡಲಿಲ್ಲ ಎಂದ ಕುಮಾರಸ್ವಾಮಿಗೆ ಭೂತದ ಬಾಯಲ್ಲಿ ಭಗವದ್ಗೀತೆ ಎಂದರು ಸಚಿವ ಶ್ರೀರಾಮುಲು
ನಾನು ಸಿಎಂ ಆದಾಗ ಪರ್ಸಂಟೇಜ್ ವ್ಯವಹಾರ ಮಾಡಲಿಲ್ಲ ಎಂದ ಕುಮಾರಸ್ವಾಮಿಗೆ ಭೂತದ ಬಾಯಲ್ಲಿ ಭಗವದ್ಗೀತೆ ಮಾತಾಡಿದಂತೆ ಎಂದರು ಸಚಿವ ಶ್ರೀರಾಮುಲು
TV9 Web
| Edited By: |

Updated on:Aug 25, 2022 | 8:34 PM

Share

ಚಿಕ್ಕಬಳ್ಳಾಪುರ: ರಾಜ್ಯ ಗುತ್ತಿಗೆದಾರರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡುವುದಾಗಿ ಸಚಿವ ಮುನಿರತ್ನ ಹೇಳಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ, ಮೊಕದ್ದಮೆ ಹಾಕುವುದಕ್ಕೆ ಯಾರಿಗಿದೆ ಮಾನ? ಎಂದು ಮಾರ್ಮಿಕವಾಗಿ ಪ್ರಶ್ನಿಸಿದ್ದರು. ಜೊತೆಗೆ ಪ್ರಧಾನಿಯಿಂದ ಹಿಡಿದು ಯಾರಿಗೂ ಮಾತನಾಡುವ ನೈತಿಕತೆ ಇಲ್ಲ. ಕಮಿಷನ್ ಬಗ್ಗೆ ಮಾತಾಡುವ ನೈತಿಕತೆ ಕಾಂಗ್ರೆಸ್‌- ಬಿಜೆಪಿಯ ಯಾರಿಗೂ ನೈತಿಕತೆ ಇಲ್ಲ ಎಂದಿದ್ದರು. ನಾನು ಎರಡು ಬಾರಿ ಸಿಎಂ ಆದಾಗಲೂ ಈ ಪರ್ಸಂಟೇಜ್ ವ್ಯವಹಾರ ಏನೂ ಇರಲಿಲ್ಲ ಎಂದಿದ್ದರು. ಜೆಡಿಎಸ್ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಅವರ ಈ ಹೇಳಿಕೆಗೆ ​ಸಾರಿಗೆ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ತೀವ್ರ ವಾಗ್ದಾಳಿ ನಡೆಸಿರುವ ಶ್ರೀರಾಮುಲು ಅವರು ಭೂತದ ಬಾಯಲ್ಲಿ ಭಗವದ್ಗೀತೆ ಮಾತಾಡಿದಂತೆ ಎಚ್ ಡಿ ಕೆ ಮಾತನಾಡುತ್ತಾರೆ. ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಏನು ಸತ್ಯ ಹರಿಶ್ಚಂದ್ರರಾ..? ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ಭ್ರಷ್ಟಾಚಾರಗಳನ್ನ ಬಿಜೆಪಿ ಸರ್ಕಾರ ಪ್ಯಾಚ್ ಅಪ್ ಮಾಡ್ತಿದೆ!

ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ರಾಜ್ಯವನ್ನ ಲೂಟಿ ಮಾಡೋ ಕೆಲಸ ಮಾಡಿದ್ದಾರೆ. ಅವರು ಮಾಡಿದ ಭ್ರಷ್ಟಾಚಾರಗಳನ್ನ ಬಿಜೆಪಿ ಸರ್ಕಾರ ಪ್ಯಾಚ್ ಆಫ್ ಮಾಡ್ತಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಲ್ಲಸಂದ್ರ ಗ್ರಾಮದಲ್ಲಿ ಶ್ರೀರಾಮುಲು ವಾಗ್ದಾಳಿ ನಡೆಸಿದರು.

ಗುತ್ತಿಗೆದಾರರದ್ದು ಸ್ವಂತ ಹೇಳೀಕೆನಾ? ಇಲ್ಲ, ಪ್ರಚೋದನಕಾರಿ ಹೇಳಿಕೆನಾ ಸ್ಪಷ್ಟಪಡಿಸಿ. ಯಾವುದಾದರೂ ದಾಖಲೆಗಳು ಇದ್ರೆ ಗುತ್ತಿಗೆದಾರರು ಬಹಿರಂಗಪಡಿಸಲಿ. ಸುಖಾಸುಮ್ಮನೆ ಮಂತ್ರಿಗಳು ಹಾಗೂ ಸರ್ಕಾರದ ಮೇಲೆ ಆರೋಪ ಸರಿಯಲ್ಲ. ಎಲ್ಲೋ ಒಂದು ಕಡೆ ಸರ್ಕಾರ, ಸಿಎಂ ಗೆ ಕೆಟ್ಟ ಹೆಸರು ತರುವ ಪ್ರಯತ್ನ ಇದಾಗಿದೆ. ಬೇರೆಯವರು ಹೇಳಿಕೊಟ್ಟಿದ್ದನ್ನ ಹೇಳುವ ಕೆಲಸ ಆಗುತ್ತಿದೆ ಎಂದು ಶ್ರೀರಾಮುಲು ವ್ಯಾಖ್ಯಾನಿಸಿದರು.

Published On - 7:24 pm, Thu, 25 August 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?