ರಾತ್ರಿ 10 ಗಂಟೆಯ ಒಳಗೆ ಬಸ್ ನಿಲ್ದಾಣ ತಲುಪಿ: ಮುಂಗಡ ಟಿಕೆಟ್ ಕಾಯ್ದಿರಿಸಿದವರಿಗೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಮನವಿ

ಇತರ ರಾಜ್ಯಗಳಿಗೆ ಹೊರಡುವ ಬಸ್​ಗಳು ರಾತ್ರಿ 10 ಗಂಟೆಗೂ ಮುನ್ನ ಹೊರಡಲಿವೆ. ನಗರ ಪ್ರದೇಶಗಳಲ್ಲಿ ಮಾತ್ರ ರಾತ್ರಿ ವೇಳೆ ಕರ್ಪ್ಯೂ ಜಾರಿಯಾಗಲಿದೆ ಎಂದು ಸವದಿ ಹೇಳಿದ್ದಾರೆ.

ರಾತ್ರಿ 10 ಗಂಟೆಯ ಒಳಗೆ ಬಸ್ ನಿಲ್ದಾಣ ತಲುಪಿ: ಮುಂಗಡ ಟಿಕೆಟ್ ಕಾಯ್ದಿರಿಸಿದವರಿಗೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಮನವಿ
ಲಕ್ಷ್ಮಣ್ ಸವದಿ

Updated on: Dec 23, 2020 | 3:22 PM

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದಲೇ ಬಸ್​ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳು ಗೋಚರಿಸಿವೆ. ಮುಂಗಡ ಟಿಕೆಟ್ ಕಾಯ್ದಿರಿಸಿರುವ ಎಲ್ಲ ಪ್ರಯಾಣಿಕರು ರಾತ್ರಿ 10 ಗಂಟೆಯ ಒಳಗೆ ನಿಲ್ದಾಣಗಳನ್ನು ತಲುಪಬೇಕು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಪ್ರಯಾಣಿಕರಿಗೆ ಮನವಿ ಮಾಡಿದ್ದಾರೆ.

ಹೆದ್ದಾರಿಗಳಲ್ಲಿ ಎಂದಿನಂತೆ ಬಸ್​ಗಳ ಸಂಚಾರವಿರುತ್ತದೆ. ಆದರೆ ಇತರ ರಾಜ್ಯಗಳಿಗೆ ಹೊರಡುವ ಬಸ್​ಗಳು ರಾತ್ರಿ 10 ಗಂಟೆಗೂ ಮುನ್ನ ಹೊರಡಲಿವೆ. ನಗರ ಪ್ರದೇಶಗಳಲ್ಲಿ ಮಾತ್ರ ರಾತ್ರಿ ವೇಳೆ ಕರ್ಪ್ಯೂ ಜಾರಿಯಾಗಲಿದ್ದು, ಇಂದು ಮಾತ್ರ ಕೆಲ ಪ್ರಯಾಣಿಕರಿಗೆ ತೊಂದರೆಯಾಗಬಹುದು ಹೀಗಾಗಿ ಸಹಕರಿಸಿ ಎಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿಕೆ ನೀಡಿದ್ದಾರೆ.

ತಾಂತ್ರಿಕ ಸಲಹಾ ಸಮಿತಿ ಸಭೆ ಮುಕ್ತಾಯ: Night Curfew ಜಾರಿ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು?

Published On - 3:12 pm, Wed, 23 December 20