AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಮುಷ್ಕರ: ಸಚಿವ ಲಕ್ಷ್ಮಣ ಸವದಿ ನೇತೃತ್ವದ ಸಭೆ ಅರ್ಧಕ್ಕೆ ಸ್ಥಗಿತ

ಸಾರಿಗೆ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಯೂನಿಯನ್​ ನಾಯಕರ ಜೊತೆ ನಡೆದ ಸಭೆ ಅರ್ಧಕ್ಕೆ ಸ್ಥಗಿತಗೊಂಡಿದೆ. ಅಧಿಕಾರಿಗಳ ಜೊತೆ ಚರ್ಚೆ ನಡೆಸಲು ಸವದಿ ಸಭೆಯನ್ನು ಅರ್ಧಕ್ಕೆ ಬಿಟ್ಟು ತೆರಳಿದರು ಎಂದು ತಿಳಿದುಬಂದಿದೆ.

ಸಾರಿಗೆ ಮುಷ್ಕರ: ಸಚಿವ ಲಕ್ಷ್ಮಣ ಸವದಿ ನೇತೃತ್ವದ ಸಭೆ ಅರ್ಧಕ್ಕೆ ಸ್ಥಗಿತ
ಸಾರಿಗೆ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ನಡೆದ ಸಭೆ
KUSHAL V
|

Updated on:Dec 13, 2020 | 1:14 PM

Share

ಬೆಂಗಳೂರು: ಸಾರಿಗೆ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಯೂನಿಯನ್​ ನಾಯಕರ ಜೊತೆ ನಡೆದ ಸಭೆ ಅರ್ಧಕ್ಕೆ ಸ್ಥಗಿತಗೊಂಡಿದೆ. ಅಧಿಕಾರಿಗಳ ಜೊತೆ ಚರ್ಚೆ ನಡೆಸಲು ಸವದಿ ಸಭೆಯನ್ನು ಅರ್ಧಕ್ಕೆ ಬಿಟ್ಟು ತೆರಳಿದರು ಎಂದು ತಿಳಿದುಬಂದಿದೆ.

ಈ ನಡುವೆ, ನಾವು ಯಾರೂ ಸಾರಿಗೆ ಮುಷ್ಕರಕ್ಕೆ ಕರೆ ಕೊಟ್ಟಿಲ್ಲ. ನಮ್ಮ ನೌಕರರು ಕೆಲಸ ಮಾಡಲು ಸಿದ್ಧರಿದ್ದಾರೆ. ಮುಷ್ಕರಕ್ಕೆ ಕರೆ ಕೊಟ್ಟವರೊಂದಿಗೆ ಚರ್ಚೆ ಮಾಡಬೇಕು. ಅವರ ಜೊತೆ ಚರ್ಚಿಸಿದರೆ ಸಮಸ್ಯೆ ಇತ್ಯರ್ಥವಾಗಬಹುದು ಎಂದು ಯೂನಿಯನ್‌ಗಳ ನಾಯಕರಿಂದ ಸವದಿಗೆ ಮಾಹಿತಿ ಸಿಕ್ಕಿದೆ ಎಂದು ಹೇಳಲಾಗಿದೆ.

ಸಿಎಂ ನಿವಾಸಕ್ಕೆ ಸವದಿ ದೌಡು ಸಭೆ ಬಳಿಕ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಿಎಂ ನಿವಾಸಕ್ಕೆ ತೆರಳಿದರು. ಸಭೆಯಲ್ಲಿ ಮಾಹಿತಿ ಕಲೆಹಾಕಿ ಸಿಎಂ ಮನೆಗೆ ತೆರಳಿದ ಸವದಿ ಸಭೆಯ ಮಾಹಿತಿಯನ್ನು ಯಡಿಯೂರಪ್ಪಗೆ ನೀಡಲಿದ್ದಾರೆ ಎಂದು ಹೇಳಲಾಗಿದೆ.

‘ಸಾರಿಗೆ ಸಿಬ್ಬಂದಿ ಬೇಡಿಕೆ ಈಡೇರಿಸುವ ಭರವಸೆ ನೀಡಲಿ’ ಇತ್ತ, ಸಭೆ ನಂತರ ಮಾತನಾಡಿದ ಎಐಟಿಯುಸಿ ಅಧ್ಯಕ್ಷ ಅನಂತ ಸುಬ್ಬರಾವ್ ಸಾರಿಗೆ ಸಿಬ್ಬಂದಿ ಬೇಡಿಕೆ ಈಡೇರಿಸುವ ಭರವಸೆ ನೀಡಲಿ. ಸರ್ಕಾರ ಭರವಸೆ ನೀಡಿದರೆ ಬಸ್ ಓಡಿಸಲು ಹೇಳುತ್ತೇವೆ ಎಂದು ಹೇಳಿದರು.

ಸಂಬಳ ಹೆಚ್ಚಳದ ಬಗ್ಗೆ ನಾವು ಒಪ್ಪುವ ನಿರ್ಧಾರ ಮಾಡಲಿ. ರಾಜ್ಯ ಸರ್ಕಾರ ಈ ಸಂಬಂಧ ನಿರ್ಧಾರ ಮಾಡಬೇಕು ಎಂದು ಅನಂತ ಸುಬ್ಬರಾವ್ ಹೇಳಿದರು.

ಸಾರಿಗೆ ಸಚಿವ ಲಕ್ಷ್ಮಣ ಸವದಿಯ ನಿಲುವೇನು? ಅಗತ್ಯ ಸೇವೆಗಳ ಹಿನ್ನೆಲೆಯಲ್ಲಿ ಮುಷ್ಕರಕ್ಕೂ ಮೊದಲು 21 ದಿನ ಮುಂಚಿತವಾಗಿ ನೋಟಿಸ್ ನೀಡಬೇಕು. ನೋಟಿಸ್​ ನೀಡಿದ ಬಳಿಕ ನಿಗಮಗಳು ಚರ್ಚೆ ಮಾಡಬಹುದು. ದಿಢೀರ್ ಮುಷ್ಕರ ಕರೆದು ಹಠಮಾರಿ ಧೋರಣೆ ತೋರಿಸುವುದು ಸರಿಯಲ್ಲ. ನೋಂದಾಯಿತ ಸಂಘಟನೆ ಗಳು ಯಾರೂ ಮುಷ್ಕರಕ್ಕೆ ಕರೆ ಕೊಟ್ಟಿಲ್ಲ ನೊಂದಾಯಿತರಲ್ಲದ ನೌಕರ ಸಂಘಟನೆಗಳ ಮುಖಂಡರನ್ನು ಹೇಗೆ ಆಹ್ವಾನಿಸಲು ಸಾಧ್ಯ? ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ನಿಲುವು ತಾಳಿದ್ದಾರೆ ಎಂದು ಹೇಳಲಾಗಿದೆ.

ಕೋಡಿಹಳ್ಳಿ ಚಂದ್ರಶೇಖರ್ ಗೆ ಸಾರಿಗೆ ನಿಗಮದ ಆರ್ಥಿಕ ಪರಿಸ್ಥಿತಿಯ ಅರಿವಿಲ್ಲ. ಹೀಗಾಗಿ, ಅವರ ಮುಂದಾಳತ್ವದಲ್ಲಿ ಕರೆ ನೀಡಿರುವ ಮುಷ್ಕರಕ್ಕೆ ಚರ್ಚೆ ಅಗತ್ಯವಿಲ್ಲ ಎಂಬ ನಿಲುವನ್ನು ಲಕ್ಷ್ಮಣ ಸವದಿ ಹೊಂದಿರುವರು ಎಂಬ ಮಾಹಿತಿ ದೊರೆತಿದೆ.

‘ಸವದಿಯವ್ರೇ.. ಬಿಕ್ಕಟ್ಟು ನಿರ್ವಹಿಸುವುದೆಂದರೆ, ಸದನದಲ್ಲಿ ಕೂತು ರೋಮಾಂಚನ ಚಿತ್ರ ವೀಕ್ಷಿಸಿದಂತಲ್ಲ’

Published On - 12:37 pm, Sun, 13 December 20

Follow Us
KUSHAL V
KUSHAL V
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ