ಹುಬ್ಬಳ್ಳಿ-ಸೊಲ್ಲಾಪುರ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ನಿತಿನ್ ಗಡ್ಕರಿ ಒಪ್ಪಿಗೆ

ಬೆಂಗಳೂರು: ಹುಬ್ಬಳ್ಳಿ-ಸೊಲ್ಲಾಪುರ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ತಾತ್ಪಿಕ ಒಪ್ಪಿಗೆ ನೀಡಿದ್ದಾರೆ. ನಗರದಲ್ಲಿ ಇಂದು ಕೇಂದ್ರ ಭೂ ಸಾರಿಗೆ ಸಚಿವರು ನಡೆಸಿದ ಸಭೆಯಲ್ಲಿ ಒಪ್ಪಿಗೆ ನೀಡಿದ್ದಾರೆ. ಹುಬ್ಬಳಿ-ಸೊಲ್ಲಾಪುರ ಮಾರ್ಗದಲ್ಲಿ ವಾಹನಗಳ ಸಂಚಾರ ಅಧಿಕ ಪ್ರಮಾಣದಲ್ಲಿವೆ. ಈ ಹೆದ್ದಾರಿಯನ್ನು ಚತುಷ್ಪಥ ಹೆದ್ದಾರಿಗೆ ಮೇಲ್ದರ್ಜೆಗೇರಿಸುವಂತೆ ನಿತಿನ್ ಗಡ್ಕರಿಗೆ ಡಿಸಿಎಂ ಗೋವಿಂದ ಕಾರಜೋಳ ಮನವರಿಕೆ ಮಾಡಿಕೊಟ್ಟರು. ಡಿಸಿಎಂ ಮನವಿಗೆ ಕೂಡಲೇ ಕೇಂದ್ರ ಸಚಿವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಈ ಹೆದ್ದಾರಿ ಕಾಮಗಾರಿ ನಿರ್ಮಾಣಕ್ಕೆ ಭೂ ಸ್ವಾಧೀನ […]

ಹುಬ್ಬಳ್ಳಿ-ಸೊಲ್ಲಾಪುರ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ನಿತಿನ್ ಗಡ್ಕರಿ ಒಪ್ಪಿಗೆ
ಸಾಧು ಶ್ರೀನಾಥ್​

Updated on: Dec 10, 2019 | 1:36 PM

ಬೆಂಗಳೂರು: ಹುಬ್ಬಳ್ಳಿ-ಸೊಲ್ಲಾಪುರ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ತಾತ್ಪಿಕ ಒಪ್ಪಿಗೆ ನೀಡಿದ್ದಾರೆ. ನಗರದಲ್ಲಿ ಇಂದು ಕೇಂದ್ರ ಭೂ ಸಾರಿಗೆ ಸಚಿವರು ನಡೆಸಿದ ಸಭೆಯಲ್ಲಿ ಒಪ್ಪಿಗೆ ನೀಡಿದ್ದಾರೆ.

ಹುಬ್ಬಳಿ-ಸೊಲ್ಲಾಪುರ ಮಾರ್ಗದಲ್ಲಿ ವಾಹನಗಳ ಸಂಚಾರ ಅಧಿಕ ಪ್ರಮಾಣದಲ್ಲಿವೆ. ಈ ಹೆದ್ದಾರಿಯನ್ನು ಚತುಷ್ಪಥ ಹೆದ್ದಾರಿಗೆ ಮೇಲ್ದರ್ಜೆಗೇರಿಸುವಂತೆ ನಿತಿನ್ ಗಡ್ಕರಿಗೆ ಡಿಸಿಎಂ ಗೋವಿಂದ ಕಾರಜೋಳ ಮನವರಿಕೆ ಮಾಡಿಕೊಟ್ಟರು. ಡಿಸಿಎಂ ಮನವಿಗೆ ಕೂಡಲೇ ಕೇಂದ್ರ ಸಚಿವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಈ ಹೆದ್ದಾರಿ ಕಾಮಗಾರಿ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆಗೆ ಕ್ರಮ ಕೈಗೊಳ್ಳುವಂತೆಯೂ ನಿತಿನ್ ಗಡ್ಕರಿ ಸೂಚನೆ ನೀಡಿದ್ದಾರೆ.

Published On - 1:23 pm, Tue, 10 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us