AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿರೀಶ್ ಮಟ್ಟಣರ್​ಗೆ ಮತ್ತೆ ಸಂಕಷ್ಟ ತರುತ್ತಾ ಶಾಸಕರ ಭವನದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣ? ಮರುತನಿಖೆಗೆ ಆಗ್ರಹಿಸಿ ದಾಖಲೆಗಳ ಸಮೇತ ದೂರು ದಾಖಲು

ಧರ್ಮಸ್ಥಳ ಪ್ರಕರಣದಲ್ಲಿ ಹೋರಾಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಹೋರಾಟಗಾರ ಗಿರೀಶ್ ಮಟ್ಟಣ್ಣವರ್​ಗೆ ಈಗ ಹಳೆಯ ಪ್ರಕರಣ ಮತ್ತೆ ಸಂಕಷ್ಟ ತಂದೊಡ್ಡುವ ಎಲ್ಲ ಸಾಧ್ಯತೆ ಹೆಚ್ಚಾಗಿದೆ. ಶಾಸಕರ ಭವನದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣದಲ್ಲಿ ಮಟ್ಟಣ್ಣವರ್ ವಿರುದ್ಧ ಮರು ತನಿಖೆಯಾಗಬೇಕು ಎಂದು ಆಗ್ರಹಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ದೂರು ನೀಡಿದ್ದಾರೆ.

ಗಿರೀಶ್ ಮಟ್ಟಣರ್​ಗೆ ಮತ್ತೆ ಸಂಕಷ್ಟ ತರುತ್ತಾ ಶಾಸಕರ ಭವನದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣ? ಮರುತನಿಖೆಗೆ ಆಗ್ರಹಿಸಿ ದಾಖಲೆಗಳ ಸಮೇತ ದೂರು ದಾಖಲು
ಗಿರೀಶ್ ಮಟ್ಟಣ್ಣವರ್
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Oct 10, 2025 | 12:37 PM

Share

ಬೆಂಗಳೂರು, ಅಕ್ಟೋಬರ್ 10: ಹೋರಾಟಗಾರ ಗಿರೀಶ್ ಮಟ್ಟಣ್ಣವರ್ (Girish Mattannavar) ಈ ಹಿಂದೆ ವಿಧಾನಸೌಧದ ಬಳಿ ಬಾಂಬ್ ಇಟ್ಟಿದ್ದ ಆರೋಪ ನ್ಯಾಯಾಲಯದಲ್ಲಿ ಖುಲಾಸೆಯಾಗಿತ್ತು. ಆದರೆ, ಇದೀಗ ಆ ಪ್ರಕರಣವನ್ನು ಮತ್ತೆ ತನಿಖೆಗೆ ಒಳಪಡಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಬೆಂಗಳೂರು (Bengaluru) ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗೆ ದೂರು ಸಲ್ಲಿಸಿದ್ದಾರೆ. ವಿಧಾನಸೌಧದ ಬಳಿ ಬಾಂಬ್ ಇಟ್ಟಿದ್ದ ಕೇಸ್ (ಕ್ರೈಂ ನಂ. 243/2005) ಅನ್ನು ಪುನರ್‌ತೆರೆದು ತನಿಖೆ ನಡೆಸಬೇಕು. ಜತೆಗೆ, ಎನ್‌ಐಎ ತನಿಖೆಗೆ ಒಳಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ತಾವೇ ಬಾಂಬ್ ತಯಾರಿಸಿ ಇಟ್ಟಿರುವುದಾಗಿ ಒಪ್ಪಿಕೊಂಡಿರುವ ರೀತಿಯಲ್ಲಿ ಗಿರೀಶ್ ಮಟ್ಟಣ್ಣವರ್ ಹಲವಾರು ವಿಡಿಯೋಗಳಲ್ಲಿ ಹೇಳಿಕೆಗಳನ್ನು ನೀಡಿದ್ದಾರೆ. ತಾವೇ ಬಾಂಬ್ ತಯಾರಿಸಿ ಇಟ್ಟಿರುವುದಾಗಿ ಒಪ್ಪಿಕೊಂಡಿರುವ ರೀತಿಯ ಹೇಳಿಕೆ ನೀಡಿದ್ದಾರೆ. ಅವರು ಆ ರೀತಿಯ ಹೇಳಿಕೆ ನೀಡಿರುವುದು ಸ್ಪಷ್ಟವಾಗಿದೆ. ಹೀಗಾಗಿ, ಕೇಸ್ ಈಗಾಗಲೇ ಕೋರ್ಟ್‌ನಲ್ಲಿ ಖುಲಾಸೆಯಾಗಿದ್ದರೂ, ಹೊಸ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಪುನಃ ತನಿಖೆ ನಡೆಸುವ ಅಗತ್ಯವಿದೆ ಎಂದು ಪ್ರಶಾಂತ್ ಸಂಬರಗಿ ದೂರಿನಲ್ಲಿ ಹೇಳಿದ್ದಾರೆ.

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಕೇಸ್ ತನಿಖೆ ವೇಳೆ, ದಾಳಿಕೋರರ ಟಾರ್ಗೆಟ್ ಧರ್ಮಸ್ಥಳ ಆಗಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ. ಸದ್ಯ ಗಿರೀಶ್ ಮಟ್ಟಣ್ಣವರ್ ಕೂಡ ಧರ್ಮಸ್ಥಳ ವಿರುದ್ಧದ ಷಡ್ಯಂತ್ರದಲ್ಲಿ ಸಕ್ರಿಯವಾಗಿದ್ದಾರೆ. ಹೀಗಾಗಿ ಈ ಎರಡು ಪ್ರಕರಣಗಳ ನಡುವೆ ಲಿಂಕ್ ಇದೆಯೇ ಎಂಬುದನ್ನು ತನಿಖೆ ನಡೆಸಬೇಕಿದೆ ಎಂದು ಪ್ರಶಾಂತ್ ಸಂಬರಗಿ ಉಲ್ಲೇಖಿಸಿದ್ದಾರೆ.

ಗಿರೀಶ್ ಮಟ್ಟಣ್ಣವರ್ ಅವರನ್ನು ಎನ್‌ಐಎ ತನಿಖೆಗೆ ಒಳಪಡಿಸಬೇಕು. ಶಾಸಕರ ಭವನದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣವನ್ನೂ ಮರು ತನಿಖೆ ಮಾಡಬೇಕು. ಜಿಲೆಟಿನ್ ಹಾಗೂ ಇತರ ಸ್ಪೋಟಕ ವಸ್ತುಗಳಿಂದ ಬಾಂಬ್ ತಯಾರು ಮಾಡುವುದು ಸುಲಭ ಎಂದು ಅವರೇ ಹೇಳಿಕೊಂಡಿದ್ದಾರೆ ಎಂದು ಸಂಬರಗಿ ದೂರಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ: ಅಂತಿಮ ಹಂತ ತಲುಪಿದ ಬುರುಡೆ ಚಿನ್ನಯ್ಯ ಕೇಸ್, ಎಸ್​ಐಟಿ ಚಾರ್ಜ್​​ಶೀಟ್​ ಬಹುತೇಕ ಸಿದ್ಧ

ಪ್ರಶಾಂತ್ ಸಂಬರಗಿ ಅವರು ಹದಿನೈದು ವಿಡಿಯೋಗಳ ಜೊತೆಗೆ ಈ ಸಂಬಂಧ ದಾಖಲೆಗಳನ್ನು ಪೊಲೀಸ್ ಆಯುಕ್ತರಿಗೆ ಹಾಗೂ ಗೃಹ ಇಲಾಖೆ ಕಾರ್ಯದರ್ಶಿಗೆ ಸಲ್ಲಿಸಿದ್ದು, ಪ್ರಕರಣದ ಮರು ತನಿಖೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಮಕರ ಸಂಕ್ರಾಂತಿ ಆಚರಣೆಯ ಸರಿಯಾದ ದಿನಾಂಕ, ಮಹತ್ವ ಏನು?
ಮಕರ ಸಂಕ್ರಾಂತಿ ಆಚರಣೆಯ ಸರಿಯಾದ ದಿನಾಂಕ, ಮಹತ್ವ ಏನು?