AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗರ ಕೈ ತಪ್ಪುತ್ತಿವೆ ಬ್ಯಾಂಕಿಂಗ್ ಉದ್ಯೋಗಗಳು: ಟಿ.ಎಸ್. ನಾಗಾಭರಣ ಕಳವಳ

ಬೆಂಗಳೂರು: ಬ್ಯಾಂಕಿಂಗ್ ಸೇವೆಗಳಿಗೆ ಸಂಬಂಧಿಸಿದ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ರಾಜ್ಯ ಭಾಷೆಗಳಲ್ಲಿ ನಡೆಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರಂತರವಾಗಿ ಒತ್ತಾಯಿಸುತ್ತಾ ಬಂದಿದೆ. ಈ ಸಂಬಂಧ ಹಲವು ಭಾರಿ ಕೇಂದ್ರ ವಿತ್ತ ಸಚಿವರನ್ನು ಖುದ್ದು ಭೇಟಿ ಮಾಡಿ ಮನವಿ, ಮೊರೆಗಳನ್ನು ಸಲ್ಲಿಸಿದ್ದಾರೆ. ಆದರೂ ಸಹ ಹಳೆಯ ಮಾರ್ಗಸೂಚಿಗಳನ್ವಯ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಐಬಿಪಿಎಸ್​ ಕ್ರಮ ಖಂಡನಾರ್ಹವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರವು ವಿತ್ತ ಸಚಿವರಾದ ನಿರ್ಮಲಾ […]

ಕನ್ನಡಿಗರ ಕೈ ತಪ್ಪುತ್ತಿವೆ ಬ್ಯಾಂಕಿಂಗ್ ಉದ್ಯೋಗಗಳು: ಟಿ.ಎಸ್. ನಾಗಾಭರಣ ಕಳವಳ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 30, 2020 | 10:11 AM

Share

ಬೆಂಗಳೂರು: ಬ್ಯಾಂಕಿಂಗ್ ಸೇವೆಗಳಿಗೆ ಸಂಬಂಧಿಸಿದ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ರಾಜ್ಯ ಭಾಷೆಗಳಲ್ಲಿ ನಡೆಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರಂತರವಾಗಿ ಒತ್ತಾಯಿಸುತ್ತಾ ಬಂದಿದೆ. ಈ ಸಂಬಂಧ ಹಲವು ಭಾರಿ ಕೇಂದ್ರ ವಿತ್ತ ಸಚಿವರನ್ನು ಖುದ್ದು ಭೇಟಿ ಮಾಡಿ ಮನವಿ, ಮೊರೆಗಳನ್ನು ಸಲ್ಲಿಸಿದ್ದಾರೆ. ಆದರೂ ಸಹ ಹಳೆಯ ಮಾರ್ಗಸೂಚಿಗಳನ್ವಯ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಐಬಿಪಿಎಸ್​ ಕ್ರಮ ಖಂಡನಾರ್ಹವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಕನ್ನಡವು ಸೇರಿದಂತೆ ಎಲ್ಲ ರಾಜ್ಯಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳನ್ನು ಬರೆಯಲು ಅನುವು ಮಾಡಿಕೊಡುವಂತೆ ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕನ್ನಡದಲ್ಲಿ ಪರೀಕ್ಷೆಗಳನ್ನು ನಡೆಸುವುದಾಗಿ ಕೇಂದ್ರ ಸಚಿವರು ಭರವಸೆಗಳನ್ನು ನೀಡಿದ್ದರು. ಆದರೆ ಕೇಂದ್ರ ಸಚಿವರ ಭರವಸೆಗಳು ಹುಸಿಯಾಗಿದ್ದು, ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗಗಳು ಕನ್ನಡಿಗರ ಕೈ ತಪ್ಪುತ್ತಿರುವುದು ಅತ್ಯಂತ ನೋವಿನ ವಿಷಯವಾಗಿದೆ.

ಸಂವಿಧಾನದ ಪರಿಚ್ಛೇದ-8ರಲ್ಲಿ ಎಲ್ಲ ರಾಜ್ಯಭಾಷೆಗಳಿಗೂ ಮಾನ್ಯತೆ ನೀಡುವಂತೆ ವಿವರಿಸಲಾಗಿದೆ. ಹಾಗಾಗಿ ಬ್ಯಾಂಕಿಂಗ್ ನೇಮಕಾತಿಗೆ ಐಬಿಪಿಎಸ್ ನಡೆಸುವ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸುವಂತೆ ನಿರ್ದೇಶನ ನೀಡಬೇಕೆಂದು ಕೇಂದ್ರ ಸಚಿವರಿಗೆ ಬರೆಯಲಾಗಿರುವ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. ಹೀಗಿದ್ದರೂ ಮುಂದಿನ ಜನವರಿಯಲ್ಲಿ ನಡೆಯಲಿರುವ ಬ್ಯಾಂಕಿಂಗ್ ಪರೀಕ್ಷೆಗಳನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ನಡೆಸಲು ಐಬಿಪಿಎಸ್ ಸಿದ್ಧತೆ ನಡೆಸುತ್ತಿರುವುದರಿಂದ ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರುವ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದೆ.

ಗ್ರಾಮಮಟ್ಟದಲ್ಲೂ ಬ್ಯಾಂಕಿಂಗ್ ಸೌಲಭ್ಯವಿರುವುದರಿಂದ ಗ್ರಾಮೀಣರಿಗೆ ಸ್ಥಳೀಯ ಭಾಷೆಯಲ್ಲಿ ಮಾತ್ರ ಸಂವಹನ ನಡೆಸಲು ಸಾಧ್ಯವಿರುತ್ತದೆ. ಹಾಗಾಗಿ ರಾಜ್ಯಭಾಷೆಗಳ ಪ್ರಾವೀಣ್ಯತೆಗೆ ಸಂಬಂಧಿಸಿದಂತೆ ಹೊಸ ಮಾನದಂಡಗಳನ್ನು ರೂಪಿಸಿ ಕನ್ನಡವೂ ಸೇರಿದಂತೆ ಎಲ್ಲ ರಾಜ್ಯಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳನ್ನು ನಡೆಸುವಂತೆ ಟಿ.ಎಸ್.ನಾಗಾಭರಣ ಆಗ್ರಹಿಸಿದ್ದಾರೆ.

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!