AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕಿ ಹಣ ಕೊಡೋವರೆಗೂ ಬರಲ್ಲ -ಸೋಂಕಿತರ ಶಿಫ್ಟ್​ ಮಾಡಲು ಆ್ಯಂಬುಲೆನ್ಸ್​ ಚಾಲಕರು ನಕಾರ

ರಾಜ್ಯದಲ್ಲಿ ಎರಡನೇ ಬಾರಿಗೆ ಕೊರೊನಾ ಮಹಾಮಾರಿಯ ಕರಿಛಾಯೆ ಆವರಿಸುವ ಭೀತಿಯ ಹಿನ್ನೆಲೆಯಲ್ಲಿ ಈ ಹಿಂದೆ ಬಂದ್​ ಮಾಡಲಾಗಿದ್ದ ಕೊವಿಡ್​ ಕೇರ್​ ಸೆಂಟರ್​ಗಳನ್ನು ಪುನರಾರಂಭಗೊಳಿಸಲು ಚಿಂತನೆ ನಡೆಸಲಾಗಿದೆ. ಆದರೆ, ಸೋಂಕಿತರನ್ನ ಈ ಸೆಂಟರ್​ಗಳಿಗೆ ಸ್ಥಳಾಂತರ ಮಾಡಲು ಸಮಸ್ಯೆ ಎದುರಾಗುವ ಸಾಧ್ಯತೆಯಿದೆ. ಏಕೆಂದರೆ, ಈ ಬಾರಿ ಸೋಂಕಿತರನ್ನು ಕೊವಿಡ್​ ಸೆಂಟರ್​ಗಳಿಗೆ ಶಿಫ್ಟ್​ ಮಾಡಲು ಆ್ಯಂಬುಲೆನ್ಸ್​ ಹಾಗೂ ಟಿಟಿ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ.

ಬಾಕಿ ಹಣ ಕೊಡೋವರೆಗೂ ಬರಲ್ಲ -ಸೋಂಕಿತರ  ಶಿಫ್ಟ್​ ಮಾಡಲು ಆ್ಯಂಬುಲೆನ್ಸ್​ ಚಾಲಕರು ನಕಾರ
ಖಾಸಗಿ ಟಿಟಿ ಆಂಬುಲೆನ್ಸ್​ಗಳು (ಸಂಗ್ರಹ ಚಿತ್ರ)
KUSHAL V
| Edited By: ಸಾಧು ಶ್ರೀನಾಥ್​|

Updated on: Mar 19, 2021 | 5:02 PM

Share

ಬೆಂಗಳೂರು: ರಾಜ್ಯದಲ್ಲಿ ಎರಡನೇ ಬಾರಿಗೆ ಕೊರೊನಾ ಮಹಾಮಾರಿಯ ಕರಿಛಾಯೆ ಆವರಿಸುವ ಭೀತಿ ಹಿನ್ನೆಲೆಯಲ್ಲಿ ಈ ಹಿಂದೆ ಬಂದ್​ ಮಾಡಲಾಗಿದ್ದ ಕೊವಿಡ್​ ಕೇರ್​ ಸೆಂಟರ್​ಗಳನ್ನು ಪುನರಾರಂಭಗೊಳಿಸಲು ಚಿಂತನೆ ನಡೆಸಲಾಗಿದೆ. ಆದರೆ, ಸೋಂಕಿತರನ್ನ ಈ ಸೆಂಟರ್​ಗಳಿಗೆ ಸ್ಥಳಾಂತರ ಮಾಡಲು ಸಮಸ್ಯೆ ಎದುರಾಗುವ ಸಾಧ್ಯತೆಯಿದೆ. ಏಕೆಂದರೆ, ಈ ಬಾರಿ ಸೋಂಕಿತರನ್ನು ಕೊವಿಡ್​ ಸೆಂಟರ್​ಗಳಿಗೆ ಶಿಫ್ಟ್​ ಮಾಡಲು ಆ್ಯಂಬುಲೆನ್ಸ್​ ಹಾಗೂ ಟಿಟಿ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ.

ಅಂದ ಹಾಗೆ, ಕಳೆದ ಬಾರಿ ಸೋಂಕಿತರನ್ನ ಕೊವಿಡ್-19 ಕೇರ್​ ಸೆಂಟರ್​ಗಳಿಗೆ ಶಿಫ್ಟ್​ ಮಾಡಲು ಖಾಸಗಿ ಟಿಟಿ ಮತ್ತು ಆ್ಯಂಬುಲೆನ್ಸ್​ಗಳ ಸಹಾಯ ಪಡೆಯಲಾಗಿತ್ತು. ಸರ್ಕಾರಿ ಌಂಬುಲೆನ್ಸ್​ಗಳ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಖಾಸಗಿ ಟಿಟಿ ಮತ್ತು ಆ್ಯಂಬುಲೆನ್ಸ್ ಹಾಗೂ ಚಾಲಕರ ಸಹಾಯವನ್ನ ಪಡೆದಿತ್ತು. ಅಂತೆಯೇ, ಹಿಂದಿನಂತೆ ಈ ಬಾರಿಯೂ ಸಿದ್ಧತೆ ಮಾಡಿಕೊಳ್ಳಲು ಬಿಬಿಎಂಪಿ ಸೂಚನೆ ನೀಡಿದೆ.

PRIVATE TT AMBULANCE LEAD 2

ಖಾಸಗಿ ಟಿಟಿ ವಾಹನ

ಆದರೆ ಆ್ಯಂಬುಲೆನ್ಸ್​ ಹಾಗೂ ಟಿಟಿ ಚಾಲಕರ ಹಿಂದೇಟು ಹಾಕುತ್ತಿದ್ದಾರೆ. ಇದಕ್ಕೆ ಕಾರಣ ಪಾಲಿಕೆ ಕಳೆದ ವರ್ಷದ ಬಾಕಿ ಹಣವನ್ನು ಇನ್ನೂ ಕೊಟ್ಟಿಲ್ಲವಂತೆ. ಹಾಗಾಗಿ, ಬಾಕಿ ಹಣ ನೀಡೋವರೆಗೂ ನಾವು ಬರಲ್ಲ ಎಂದು ಚಾಲಕರು ಪಟ್ಟು ಹಿಡಿದಿದ್ದಾರೆ. ಆದ್ದರಿಂದ, ಈ ಬಾರಿ ಸೋಂಕಿತರ ಸ್ಥಳಾಂತರಕ್ಕೆ ಸಮಸ್ಯೆ ಎದುರಾಗಬಹುದು. ಪಾಲಿಕೆ ಈ ನಿಟ್ಟಿನಲ್ಲಿ ಕೂಡಲೇ ಕ್ರಮ ಜರುಗಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಇತ್ತ, ಕೊರೊನಾ ಸೋಂಕು ತಡೆಗೆ ಹೊಸ ಮಾರ್ಗಸೂಚಿ ವಿಚಾರವಾಗಿ ಬಿಬಿಎಂಪಿಯಿಂದ ಪತ್ರ ಬಂದಿದೆ. ಈ ಕುರಿತು ಮುಖ್ಯಮಂತ್ರಿ ಜೊತೆಗೆ ಚರ್ಚೆ ಮಾಡುತ್ತೇನೆ. ಬೆಂಗಳೂರಿನಲ್ಲಿ ಏನು ಕ್ರಮಗಳನ್ನ ತೆಗೆದುಕೊಳ್ಳಬೇಕು. ಇತರೆ ಭಾಗಗಳಲ್ಲಿ ಏನು ಕ್ರಮ ತಗೋಬೇಕೆಂದು ಚರ್ಚೆ ಮಾಡುತ್ತೇವೆ. ಯಾವ ಕ್ರಮ ಕೈಗೊಳ್ಳಬೇಕೆಂದು ಚರ್ಚಿಸಿ ಪ್ರಕಟಿಸ್ತೇನೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಈ ಮಧ್ಯೆ ಹೇಳಿದ್ದಾರೆ.

ಇದನ್ನೂ ಓದಿ: ಮಾಸ್ಕ್​ ಧರಿಸದ ದಂಪತಿಗೆ ದಂಡ, ನನ್ನ ಹೆಂಡತಿಯನ್ನು ತಡೆದಿದ್ದು ಯಾಕೆಂದ ಗಂಡ! ವಿಡಿಯೋ ವೈರಲ್

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು