AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕಿ ಹಣ ಕೊಡೋವರೆಗೂ ಬರಲ್ಲ -ಸೋಂಕಿತರ ಶಿಫ್ಟ್​ ಮಾಡಲು ಆ್ಯಂಬುಲೆನ್ಸ್​ ಚಾಲಕರು ನಕಾರ

ರಾಜ್ಯದಲ್ಲಿ ಎರಡನೇ ಬಾರಿಗೆ ಕೊರೊನಾ ಮಹಾಮಾರಿಯ ಕರಿಛಾಯೆ ಆವರಿಸುವ ಭೀತಿಯ ಹಿನ್ನೆಲೆಯಲ್ಲಿ ಈ ಹಿಂದೆ ಬಂದ್​ ಮಾಡಲಾಗಿದ್ದ ಕೊವಿಡ್​ ಕೇರ್​ ಸೆಂಟರ್​ಗಳನ್ನು ಪುನರಾರಂಭಗೊಳಿಸಲು ಚಿಂತನೆ ನಡೆಸಲಾಗಿದೆ. ಆದರೆ, ಸೋಂಕಿತರನ್ನ ಈ ಸೆಂಟರ್​ಗಳಿಗೆ ಸ್ಥಳಾಂತರ ಮಾಡಲು ಸಮಸ್ಯೆ ಎದುರಾಗುವ ಸಾಧ್ಯತೆಯಿದೆ. ಏಕೆಂದರೆ, ಈ ಬಾರಿ ಸೋಂಕಿತರನ್ನು ಕೊವಿಡ್​ ಸೆಂಟರ್​ಗಳಿಗೆ ಶಿಫ್ಟ್​ ಮಾಡಲು ಆ್ಯಂಬುಲೆನ್ಸ್​ ಹಾಗೂ ಟಿಟಿ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ.

ಬಾಕಿ ಹಣ ಕೊಡೋವರೆಗೂ ಬರಲ್ಲ -ಸೋಂಕಿತರ  ಶಿಫ್ಟ್​ ಮಾಡಲು ಆ್ಯಂಬುಲೆನ್ಸ್​ ಚಾಲಕರು ನಕಾರ
ಖಾಸಗಿ ಟಿಟಿ ಆಂಬುಲೆನ್ಸ್​ಗಳು (ಸಂಗ್ರಹ ಚಿತ್ರ)
KUSHAL V
| Edited By: |

Updated on: Mar 19, 2021 | 5:02 PM

Share

ಬೆಂಗಳೂರು: ರಾಜ್ಯದಲ್ಲಿ ಎರಡನೇ ಬಾರಿಗೆ ಕೊರೊನಾ ಮಹಾಮಾರಿಯ ಕರಿಛಾಯೆ ಆವರಿಸುವ ಭೀತಿ ಹಿನ್ನೆಲೆಯಲ್ಲಿ ಈ ಹಿಂದೆ ಬಂದ್​ ಮಾಡಲಾಗಿದ್ದ ಕೊವಿಡ್​ ಕೇರ್​ ಸೆಂಟರ್​ಗಳನ್ನು ಪುನರಾರಂಭಗೊಳಿಸಲು ಚಿಂತನೆ ನಡೆಸಲಾಗಿದೆ. ಆದರೆ, ಸೋಂಕಿತರನ್ನ ಈ ಸೆಂಟರ್​ಗಳಿಗೆ ಸ್ಥಳಾಂತರ ಮಾಡಲು ಸಮಸ್ಯೆ ಎದುರಾಗುವ ಸಾಧ್ಯತೆಯಿದೆ. ಏಕೆಂದರೆ, ಈ ಬಾರಿ ಸೋಂಕಿತರನ್ನು ಕೊವಿಡ್​ ಸೆಂಟರ್​ಗಳಿಗೆ ಶಿಫ್ಟ್​ ಮಾಡಲು ಆ್ಯಂಬುಲೆನ್ಸ್​ ಹಾಗೂ ಟಿಟಿ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ.

ಅಂದ ಹಾಗೆ, ಕಳೆದ ಬಾರಿ ಸೋಂಕಿತರನ್ನ ಕೊವಿಡ್-19 ಕೇರ್​ ಸೆಂಟರ್​ಗಳಿಗೆ ಶಿಫ್ಟ್​ ಮಾಡಲು ಖಾಸಗಿ ಟಿಟಿ ಮತ್ತು ಆ್ಯಂಬುಲೆನ್ಸ್​ಗಳ ಸಹಾಯ ಪಡೆಯಲಾಗಿತ್ತು. ಸರ್ಕಾರಿ ಌಂಬುಲೆನ್ಸ್​ಗಳ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಖಾಸಗಿ ಟಿಟಿ ಮತ್ತು ಆ್ಯಂಬುಲೆನ್ಸ್ ಹಾಗೂ ಚಾಲಕರ ಸಹಾಯವನ್ನ ಪಡೆದಿತ್ತು. ಅಂತೆಯೇ, ಹಿಂದಿನಂತೆ ಈ ಬಾರಿಯೂ ಸಿದ್ಧತೆ ಮಾಡಿಕೊಳ್ಳಲು ಬಿಬಿಎಂಪಿ ಸೂಚನೆ ನೀಡಿದೆ.

PRIVATE TT AMBULANCE LEAD 2

ಖಾಸಗಿ ಟಿಟಿ ವಾಹನ

ಆದರೆ ಆ್ಯಂಬುಲೆನ್ಸ್​ ಹಾಗೂ ಟಿಟಿ ಚಾಲಕರ ಹಿಂದೇಟು ಹಾಕುತ್ತಿದ್ದಾರೆ. ಇದಕ್ಕೆ ಕಾರಣ ಪಾಲಿಕೆ ಕಳೆದ ವರ್ಷದ ಬಾಕಿ ಹಣವನ್ನು ಇನ್ನೂ ಕೊಟ್ಟಿಲ್ಲವಂತೆ. ಹಾಗಾಗಿ, ಬಾಕಿ ಹಣ ನೀಡೋವರೆಗೂ ನಾವು ಬರಲ್ಲ ಎಂದು ಚಾಲಕರು ಪಟ್ಟು ಹಿಡಿದಿದ್ದಾರೆ. ಆದ್ದರಿಂದ, ಈ ಬಾರಿ ಸೋಂಕಿತರ ಸ್ಥಳಾಂತರಕ್ಕೆ ಸಮಸ್ಯೆ ಎದುರಾಗಬಹುದು. ಪಾಲಿಕೆ ಈ ನಿಟ್ಟಿನಲ್ಲಿ ಕೂಡಲೇ ಕ್ರಮ ಜರುಗಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಇತ್ತ, ಕೊರೊನಾ ಸೋಂಕು ತಡೆಗೆ ಹೊಸ ಮಾರ್ಗಸೂಚಿ ವಿಚಾರವಾಗಿ ಬಿಬಿಎಂಪಿಯಿಂದ ಪತ್ರ ಬಂದಿದೆ. ಈ ಕುರಿತು ಮುಖ್ಯಮಂತ್ರಿ ಜೊತೆಗೆ ಚರ್ಚೆ ಮಾಡುತ್ತೇನೆ. ಬೆಂಗಳೂರಿನಲ್ಲಿ ಏನು ಕ್ರಮಗಳನ್ನ ತೆಗೆದುಕೊಳ್ಳಬೇಕು. ಇತರೆ ಭಾಗಗಳಲ್ಲಿ ಏನು ಕ್ರಮ ತಗೋಬೇಕೆಂದು ಚರ್ಚೆ ಮಾಡುತ್ತೇವೆ. ಯಾವ ಕ್ರಮ ಕೈಗೊಳ್ಳಬೇಕೆಂದು ಚರ್ಚಿಸಿ ಪ್ರಕಟಿಸ್ತೇನೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಈ ಮಧ್ಯೆ ಹೇಳಿದ್ದಾರೆ.

ಇದನ್ನೂ ಓದಿ: ಮಾಸ್ಕ್​ ಧರಿಸದ ದಂಪತಿಗೆ ದಂಡ, ನನ್ನ ಹೆಂಡತಿಯನ್ನು ತಡೆದಿದ್ದು ಯಾಕೆಂದ ಗಂಡ! ವಿಡಿಯೋ ವೈರಲ್

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ