AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tulu Language: ತುಳು ಭಾಷೆಗೆ ಸೂಕ್ತ ಸ್ಥಾನಮಾನ; ಟ್ವಿಟರ್​ನಲ್ಲಿ ಜೋರಾಯ್ತು ತುಳು ಭಾಷಿಕರ ಹೋರಾಟ

ಈ ಹಿಂದೆಯೂ ತುಳುಭಾಷೆಯ ಸ್ಥಾನಮಾನಕ್ಕಾಗಿ ಟ್ವೀಟ್ ಅಭಿಯಾನ ಮಾಡಲಾಗಿತ್ತು. ಆದರೆ ಸರ್ಕಾರ ತುಳುವರ ಕೂಗಿಗೆ ಕಿವಿಯಾಗಿಲ್ಲ. ಕರಾವಳಿ ಭಾಗದ ರಾಜಕಾರಣಿಗಳು ಕೂಡ ಅಸಕ್ತಿ ತೋರಿರಲಿಲ್ಲ.

Tulu Language: ತುಳು ಭಾಷೆಗೆ ಸೂಕ್ತ ಸ್ಥಾನಮಾನ; ಟ್ವಿಟರ್​ನಲ್ಲಿ ಜೋರಾಯ್ತು ತುಳು ಭಾಷಿಕರ ಹೋರಾಟ
ತುಳುನಾಡು
Follow us
TV9 Web
| Updated By: Digi Tech Desk

Updated on:Jun 13, 2021 | 11:30 PM

ಉಡುಪಿ: ತುಳು ಭಾಷೆಗೆ ಸೂಕ್ತ ಸ್ಥಾನಮಾನ ಸಿಗಬೇಕು ಎನ್ನುವುದು ಬಹುಕಾಲದ ಕೂಗು. ಈ ಕುರಿತು ಆಯಾಕಾಲಘಟ್ಟದಲ್ಲಿ ನಾನಾ ಹೋರಾಟಗಳೂ ನಡೆದಿವೆ. ಇದೀಗ ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆಗೆ ಒತ್ತಾಯಿಸಿ ಕರಾವಳಿಯಲ್ಲಿ ಟ್ವಿಟರ್ ಅಭಿಯಾನ ಜೋರಾಗಿ ನಡೆಯುತ್ತಿದೆ. ತುಳು ಸಂಘಟನೆಗಳು ಮತ್ತು ತುಳು ಭಾಷಿಗರಿಂದ ಟ್ವಿಟರ್ ಅಭಿಯಾನ ಇಂದು ಬೆಳಗ್ಗಿನಿಂದಲೇ ಆರಂಭವಾಗಿದೆ. ಬೆಳಿಗ್ಗೆ ಆರಂಭವಾದ ಅಭಿಯಾನಕ್ಕೆ ಸಾವಿರಾರು ಟ್ವೀಟ್​ಗಳ ಬೆಂಬಲ ಹರಿದುಬರುತ್ತಿದೆ.

ತುಳು ಭಾಷೆಗೆ ಸಾಂವಿಧಾನಿಕ ಸ್ಥಾನಮಾನ ದೊರೆಯಬೇಕು. 8ನೇ ಪರಿಚ್ಛೇದಕ್ಕೆ ತುಳು ಸೇರಬೇಕು ಎಂಬ ಅಭಿಯಾನ ಸದ್ದು ಮಾಡುತ್ತಿದೆ. ಭಾರತದ ಟ್ವಿಟರ್ ಟ್ರೆಂಡಿಂಗ್ ನಲ್ಲಿ #TuluOfficialinKA_KLಗೆ 31ನೇ ಸ್ಥಾನವೂ ದೊರಕಿದೆ. ಬೆಳಿಗ್ಗಿನಿಂದ ಮಧ್ಯಾಹ್ನದವರೆ ಒಂದು ಲಕ್ಷಕ್ಕೂ ಅಧಿಕ ಟ್ವೀಟ್​ಗಳು ಈ ಸಂಬಂಧ ಹರಿದಾಡಿವೆ. ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆ ನೀಡಿ ಎಂದು ನಡೆಯುತ್ತಿರುವ ಭರ್ಜರಿ ಅಭಿಯಾನ ಇದಾಗಿದೆ.

ಈ ಹಿಂದೆಯೂ ತುಳುಭಾಷೆಯ ಸ್ಥಾನಮಾನಕ್ಕಾಗಿ ಟ್ವೀಟ್ ಅಭಿಯಾನ ಮಾಡಲಾಗಿತ್ತು. ಆದರೆ ಸರ್ಕಾರ ತುಳುವರ ಕೂಗಿಗೆ ಕಿವಿಯಾಗಿಲ್ಲ. ಕರಾವಳಿ ಭಾಗದ ರಾಜಕಾರಣಿಗಳು ಕೂಡ ಅಸಕ್ತಿ ತೋರಿರಲಿಲ್ಲ. ಹೀಗಾಗಿ ಇಂದು ಮತ್ತೆ ಜೈ ತುಳುನಾಡು ಸಂಘಟನೆ ನೇತೃತ್ವದಲ್ಲಿ ಶಕ್ತಿ ಪ್ರದರ್ಶನ ನಡೆಯುತ್ತಿದೆ. ಸಂಜೆಯವರೆಗೂ ನಡೆಯಲಿರುವ ಅಭಿಯಾನದಲ್ಲಿ ದೇಶ-ವಿದೇಶಗಳ ತುಳುವರು ಭಾಗಿಯಾಗಿದ್ದಾರೆ.

ಪ್ರಧಾನಿ,ಮುಖ್ಯಮಂತ್ರಿ ಸೇರಿದ ಜನಪ್ರನಿಧಿಗಳಿಗೂ ಟ್ವೀಟ್ ಟ್ಯಾಗ್ ಮಾಡಿ ಒತ್ತಾಯ ಮಾಡಲಾಗುತ್ತಿದೆ. ಕರಾವಳಿಗರು ಹಿಂದೆಂದಿಗಿಂತಲೂ ಹೆಚ್ಚು ಸಕ್ರಿಯವಾಗಿ ಭಾಗವಹಿಸಿ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ. ರಾಜಕೀಯ ರಂಗ, ಸಿನಿಮಾ ರಂಗ, ವಿವಿಧ ಸಂಘಟನೆಗಳು, ಜನಸಾಮಾನ್ಯರು ಸಹಿತ ಹಲವಾರು ಮಂದಿ ಈ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಕನ್ನಡ ಸಿನಿರಂಗದಿಂದ ಬಣ್ಣದ ಬದುಕು ಆರಂಭಿಸಿ ಪರಭಾಷೆಯಲ್ಲಿ ಮಿಂಚಿದ ನಟಿಯರಿವರು

Published On - 5:16 pm, Sun, 13 June 21

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್