AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tulu Language: ತುಳು ಭಾಷೆಗೆ ಸೂಕ್ತ ಸ್ಥಾನಮಾನ; ಟ್ವಿಟರ್​ನಲ್ಲಿ ಜೋರಾಯ್ತು ತುಳು ಭಾಷಿಕರ ಹೋರಾಟ

ಈ ಹಿಂದೆಯೂ ತುಳುಭಾಷೆಯ ಸ್ಥಾನಮಾನಕ್ಕಾಗಿ ಟ್ವೀಟ್ ಅಭಿಯಾನ ಮಾಡಲಾಗಿತ್ತು. ಆದರೆ ಸರ್ಕಾರ ತುಳುವರ ಕೂಗಿಗೆ ಕಿವಿಯಾಗಿಲ್ಲ. ಕರಾವಳಿ ಭಾಗದ ರಾಜಕಾರಣಿಗಳು ಕೂಡ ಅಸಕ್ತಿ ತೋರಿರಲಿಲ್ಲ.

Tulu Language: ತುಳು ಭಾಷೆಗೆ ಸೂಕ್ತ ಸ್ಥಾನಮಾನ; ಟ್ವಿಟರ್​ನಲ್ಲಿ ಜೋರಾಯ್ತು ತುಳು ಭಾಷಿಕರ ಹೋರಾಟ
ತುಳುನಾಡು
TV9 Web
| Edited By: |

Updated on:Jun 13, 2021 | 11:30 PM

Share

ಉಡುಪಿ: ತುಳು ಭಾಷೆಗೆ ಸೂಕ್ತ ಸ್ಥಾನಮಾನ ಸಿಗಬೇಕು ಎನ್ನುವುದು ಬಹುಕಾಲದ ಕೂಗು. ಈ ಕುರಿತು ಆಯಾಕಾಲಘಟ್ಟದಲ್ಲಿ ನಾನಾ ಹೋರಾಟಗಳೂ ನಡೆದಿವೆ. ಇದೀಗ ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆಗೆ ಒತ್ತಾಯಿಸಿ ಕರಾವಳಿಯಲ್ಲಿ ಟ್ವಿಟರ್ ಅಭಿಯಾನ ಜೋರಾಗಿ ನಡೆಯುತ್ತಿದೆ. ತುಳು ಸಂಘಟನೆಗಳು ಮತ್ತು ತುಳು ಭಾಷಿಗರಿಂದ ಟ್ವಿಟರ್ ಅಭಿಯಾನ ಇಂದು ಬೆಳಗ್ಗಿನಿಂದಲೇ ಆರಂಭವಾಗಿದೆ. ಬೆಳಿಗ್ಗೆ ಆರಂಭವಾದ ಅಭಿಯಾನಕ್ಕೆ ಸಾವಿರಾರು ಟ್ವೀಟ್​ಗಳ ಬೆಂಬಲ ಹರಿದುಬರುತ್ತಿದೆ.

ತುಳು ಭಾಷೆಗೆ ಸಾಂವಿಧಾನಿಕ ಸ್ಥಾನಮಾನ ದೊರೆಯಬೇಕು. 8ನೇ ಪರಿಚ್ಛೇದಕ್ಕೆ ತುಳು ಸೇರಬೇಕು ಎಂಬ ಅಭಿಯಾನ ಸದ್ದು ಮಾಡುತ್ತಿದೆ. ಭಾರತದ ಟ್ವಿಟರ್ ಟ್ರೆಂಡಿಂಗ್ ನಲ್ಲಿ #TuluOfficialinKA_KLಗೆ 31ನೇ ಸ್ಥಾನವೂ ದೊರಕಿದೆ. ಬೆಳಿಗ್ಗಿನಿಂದ ಮಧ್ಯಾಹ್ನದವರೆ ಒಂದು ಲಕ್ಷಕ್ಕೂ ಅಧಿಕ ಟ್ವೀಟ್​ಗಳು ಈ ಸಂಬಂಧ ಹರಿದಾಡಿವೆ. ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆ ನೀಡಿ ಎಂದು ನಡೆಯುತ್ತಿರುವ ಭರ್ಜರಿ ಅಭಿಯಾನ ಇದಾಗಿದೆ.

ಈ ಹಿಂದೆಯೂ ತುಳುಭಾಷೆಯ ಸ್ಥಾನಮಾನಕ್ಕಾಗಿ ಟ್ವೀಟ್ ಅಭಿಯಾನ ಮಾಡಲಾಗಿತ್ತು. ಆದರೆ ಸರ್ಕಾರ ತುಳುವರ ಕೂಗಿಗೆ ಕಿವಿಯಾಗಿಲ್ಲ. ಕರಾವಳಿ ಭಾಗದ ರಾಜಕಾರಣಿಗಳು ಕೂಡ ಅಸಕ್ತಿ ತೋರಿರಲಿಲ್ಲ. ಹೀಗಾಗಿ ಇಂದು ಮತ್ತೆ ಜೈ ತುಳುನಾಡು ಸಂಘಟನೆ ನೇತೃತ್ವದಲ್ಲಿ ಶಕ್ತಿ ಪ್ರದರ್ಶನ ನಡೆಯುತ್ತಿದೆ. ಸಂಜೆಯವರೆಗೂ ನಡೆಯಲಿರುವ ಅಭಿಯಾನದಲ್ಲಿ ದೇಶ-ವಿದೇಶಗಳ ತುಳುವರು ಭಾಗಿಯಾಗಿದ್ದಾರೆ.

ಪ್ರಧಾನಿ,ಮುಖ್ಯಮಂತ್ರಿ ಸೇರಿದ ಜನಪ್ರನಿಧಿಗಳಿಗೂ ಟ್ವೀಟ್ ಟ್ಯಾಗ್ ಮಾಡಿ ಒತ್ತಾಯ ಮಾಡಲಾಗುತ್ತಿದೆ. ಕರಾವಳಿಗರು ಹಿಂದೆಂದಿಗಿಂತಲೂ ಹೆಚ್ಚು ಸಕ್ರಿಯವಾಗಿ ಭಾಗವಹಿಸಿ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ. ರಾಜಕೀಯ ರಂಗ, ಸಿನಿಮಾ ರಂಗ, ವಿವಿಧ ಸಂಘಟನೆಗಳು, ಜನಸಾಮಾನ್ಯರು ಸಹಿತ ಹಲವಾರು ಮಂದಿ ಈ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಕನ್ನಡ ಸಿನಿರಂಗದಿಂದ ಬಣ್ಣದ ಬದುಕು ಆರಂಭಿಸಿ ಪರಭಾಷೆಯಲ್ಲಿ ಮಿಂಚಿದ ನಟಿಯರಿವರು

Published On - 5:16 pm, Sun, 13 June 21

Follow Us
TV9 Web
TV9 Web

TV9 Kannada

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!