AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಜೊತೆ ಮೈತ್ರಿ ಬೆನ್ನಲ್ಲೇ ಜೆಡಿಎಸ್​ನ ಮತ್ತೊಂದು ವಿಕೆಟ್ ಪತನ

ಬಿಜೆಪಿ ಜೊತೆ ಮೈತ್ರಿ ಬೆನ್ನಲ್ಲೇ ಜೆಡಿಎಸ್​ನ ಒಂದೊಂದೇ ವಿಕೆಟ್ ಪತನವಾಗುತ್ತಿವೆ. ಇದೀಗ ಜೆಡಿಎಸ್ ರಾಜ್ಯ ಉಪಾಧ್ಯಕ್ಷ, ಮಾಜಿ ಶಾಸಕರೊಬ್ಬರು ಜೆಡಿಎಸ್​ಗೆ ರಾಜೀನಾಮೆ ನೀಡಿದ್ದಾರೆ. ಕುಮಾರಸ್ವಾಮಿ, ದೇವೇಗೌಡರಿಗೆ ರಾಜೀನಾಮೆ ಪತ್ರವನ್ನು ವಾಟ್ಸಪ್ ಮಾಡಿ ದಳಪತಿಗಳಿಗೆ ಶಾಕ್ ಕೊಟ್ಟಿದ್ದಾರೆ.

ಬಿಜೆಪಿ ಜೊತೆ ಮೈತ್ರಿ ಬೆನ್ನಲ್ಲೇ ಜೆಡಿಎಸ್​ನ ಮತ್ತೊಂದು ವಿಕೆಟ್ ಪತನ
ಶಫೀ ಅಹಮದ್
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Sep 27, 2023 | 9:00 AM

Share

ತುಮಕೂರು, (ಸೆಪ್ಟೆಂಬರ್ 27): ಜೆಡಿಎಸ್​, ಬಿಜೆಪಿಯೊಂದಿಗೆ ಮೈತ್ರಿ (JDS And BJP Alliance) ಮಾಡಿಕೊಂಡಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ (Loksabha Elections 2024) ಜಂಟಿಯಾಗಿ ಅಖಾಡಕ್ಕಿಳಿಯಲಿವೆ. ಆದ್ರೆ, ಅದಕ್ಕೂ ಮುನ್ನ ಜೆಡಿಎಸ್​ ನಾಯಕರು ಒಬ್ಬೊಬ್ಬರಾಗಿಯೇ ಪಕ್ಷ ತೊರೆಯುತ್ತಿದ್ದಾರೆ. ಇದೀಗ ತುಮಕೂರಿನಲ್ಲಿ‌ (Tumakuru) ಜೆಡಿಎಸ್​ನ ಮತ್ತೊಂದು ವಿಕೆಟ್​ ಪತನವಾಗಿದೆ. ಅಲ್ಪಸಂಖ್ಯಾತ ಸಮುದಾಯದ ಮುಖಂಡ ಹಾಗೂ ಮಾಜಿ ಶಾಸಕ ಶಫಿ ಅಹಮದ್(shafi ahmed)  ಜೆಡಿಎಸ್​ಗೆ ರಾಜೀನಾಮೆ ನೀಡಿದ್ದಾರೆ.

ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ಹಾಗೂ ರಾಜ್ಯಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಶಫೀ ಅಹಮದ್ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹಾಗೂ ಜಿಲ್ಲಾ ಅಧ್ಯಕ್ಷರಿಗೆ ರವಾನಿಸಿದ್ದಾರೆ. ಅಲ್ಲದೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ, ಹೆಚ್​ಡಿ ದೇವೇಗೌಡ ಅವರಿಗೆ ವಾಟ್ಸಪ್ ಮಾಡಿದ್ದಾರೆ.

ಇದನ್ನೂ ಓದಿ: ಜೆಡಿಎಸ್​ಗೆ ಬಿಗ್​ ಶಾಕ್, ಸಾಮೂಹಿಕವಾಗಿ ಪಕ್ಷ ತೊರೆಯಲು ತೀರ್ಮಾನಿಸಿದ ಮುಸ್ಲಿಂ ನಾಯಕರು

ಕಳದ ವಿಧಾನಸಭಾ ಚುನಾವಣೆಯಲ್ಲಿ ಅಹಮದ್ ಕಾಂಗ್ರೆಸ್​ಗೆ ಗುಡ್ ಬೈ ಹೇಳಿ ಜೆಡಿಎಸ್ ಸೇರಿದ್ದರು. ಇದೀಗ ಜೆಡಿಎಸ್​ ತೊರೆದು ವಾಪಸ್ ಕಾಂಗ್ರೆಸ್​ನತ್ತ ಮುಖ ಮಾಡಿದ್ದಾರೆ. ಆದ್ರೆ, ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ಅವರು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಮೊನ್ನೇ ಅಷ್ಟೇ ಜೆಡಿಎಸ್​ನ ಅಲ್ಪಸಂಖ್ಯಾತ ನಾಯಕರು ಸಭೆ ಮಾಡಿದ್ದು, ಸಾಮೂಹಿಕವಾಗಿ ಜೆಡಿಎಸ್​ ತೊರೆಯಲು ತೀರ್ಮಾನಿಸಿದ್ದಾರೆ. ಆದ್ರೆ,  ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಇಬ್ರಾಹಿಂ ಸಹ ಜೆಡಿಎಸ್​ಗೆ ಗುಡ್​ಬೈ ಹೇಳುವ ಸಾಧ್ಯತೆಗಳು ಹೆಚ್ಚಿವೆ. ಯಾಕಂದ್ರೆ ಇಬ್ರಾಹಿಂ ಹಾಗೂ ಬಿಜೆಪಿಯ ಸಿದ್ಧಾಂತಗಳನ್ನು ಮೊದಲಿನಿಂದಲೂ ವಿರೋಧಿಸಿಕೊಂಡು ಬಂದಿದ್ದಿದ್ದಾರೆ. ಇದೀಗ ಜೆಡಿಎಸ್​ ಬಿಜೆಪಿಯೊಂದಿಗೆ ಮೈತ್ರಿ ಮಾಡಿಜೊಂಡಿದೆ. ಇದರಿಂದ ಅವರು ಪಕ್ಷ ತೊರೆದರೂ ಅಚ್ಚರಿಪಡಬೇಕಿಲ್ಲ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?