AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಜೊತೆ ಮೈತ್ರಿ ಬೆನ್ನಲ್ಲೇ ಜೆಡಿಎಸ್​ನ ಮತ್ತೊಂದು ವಿಕೆಟ್ ಪತನ

ಬಿಜೆಪಿ ಜೊತೆ ಮೈತ್ರಿ ಬೆನ್ನಲ್ಲೇ ಜೆಡಿಎಸ್​ನ ಒಂದೊಂದೇ ವಿಕೆಟ್ ಪತನವಾಗುತ್ತಿವೆ. ಇದೀಗ ಜೆಡಿಎಸ್ ರಾಜ್ಯ ಉಪಾಧ್ಯಕ್ಷ, ಮಾಜಿ ಶಾಸಕರೊಬ್ಬರು ಜೆಡಿಎಸ್​ಗೆ ರಾಜೀನಾಮೆ ನೀಡಿದ್ದಾರೆ. ಕುಮಾರಸ್ವಾಮಿ, ದೇವೇಗೌಡರಿಗೆ ರಾಜೀನಾಮೆ ಪತ್ರವನ್ನು ವಾಟ್ಸಪ್ ಮಾಡಿ ದಳಪತಿಗಳಿಗೆ ಶಾಕ್ ಕೊಟ್ಟಿದ್ದಾರೆ.

ಬಿಜೆಪಿ ಜೊತೆ ಮೈತ್ರಿ ಬೆನ್ನಲ್ಲೇ ಜೆಡಿಎಸ್​ನ ಮತ್ತೊಂದು ವಿಕೆಟ್ ಪತನ
ಶಫೀ ಅಹಮದ್
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Sep 27, 2023 | 9:00 AM

Share

ತುಮಕೂರು, (ಸೆಪ್ಟೆಂಬರ್ 27): ಜೆಡಿಎಸ್​, ಬಿಜೆಪಿಯೊಂದಿಗೆ ಮೈತ್ರಿ (JDS And BJP Alliance) ಮಾಡಿಕೊಂಡಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ (Loksabha Elections 2024) ಜಂಟಿಯಾಗಿ ಅಖಾಡಕ್ಕಿಳಿಯಲಿವೆ. ಆದ್ರೆ, ಅದಕ್ಕೂ ಮುನ್ನ ಜೆಡಿಎಸ್​ ನಾಯಕರು ಒಬ್ಬೊಬ್ಬರಾಗಿಯೇ ಪಕ್ಷ ತೊರೆಯುತ್ತಿದ್ದಾರೆ. ಇದೀಗ ತುಮಕೂರಿನಲ್ಲಿ‌ (Tumakuru) ಜೆಡಿಎಸ್​ನ ಮತ್ತೊಂದು ವಿಕೆಟ್​ ಪತನವಾಗಿದೆ. ಅಲ್ಪಸಂಖ್ಯಾತ ಸಮುದಾಯದ ಮುಖಂಡ ಹಾಗೂ ಮಾಜಿ ಶಾಸಕ ಶಫಿ ಅಹಮದ್(shafi ahmed)  ಜೆಡಿಎಸ್​ಗೆ ರಾಜೀನಾಮೆ ನೀಡಿದ್ದಾರೆ.

ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ಹಾಗೂ ರಾಜ್ಯಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಶಫೀ ಅಹಮದ್ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹಾಗೂ ಜಿಲ್ಲಾ ಅಧ್ಯಕ್ಷರಿಗೆ ರವಾನಿಸಿದ್ದಾರೆ. ಅಲ್ಲದೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ, ಹೆಚ್​ಡಿ ದೇವೇಗೌಡ ಅವರಿಗೆ ವಾಟ್ಸಪ್ ಮಾಡಿದ್ದಾರೆ.

ಇದನ್ನೂ ಓದಿ: ಜೆಡಿಎಸ್​ಗೆ ಬಿಗ್​ ಶಾಕ್, ಸಾಮೂಹಿಕವಾಗಿ ಪಕ್ಷ ತೊರೆಯಲು ತೀರ್ಮಾನಿಸಿದ ಮುಸ್ಲಿಂ ನಾಯಕರು

ಕಳದ ವಿಧಾನಸಭಾ ಚುನಾವಣೆಯಲ್ಲಿ ಅಹಮದ್ ಕಾಂಗ್ರೆಸ್​ಗೆ ಗುಡ್ ಬೈ ಹೇಳಿ ಜೆಡಿಎಸ್ ಸೇರಿದ್ದರು. ಇದೀಗ ಜೆಡಿಎಸ್​ ತೊರೆದು ವಾಪಸ್ ಕಾಂಗ್ರೆಸ್​ನತ್ತ ಮುಖ ಮಾಡಿದ್ದಾರೆ. ಆದ್ರೆ, ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ಅವರು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಮೊನ್ನೇ ಅಷ್ಟೇ ಜೆಡಿಎಸ್​ನ ಅಲ್ಪಸಂಖ್ಯಾತ ನಾಯಕರು ಸಭೆ ಮಾಡಿದ್ದು, ಸಾಮೂಹಿಕವಾಗಿ ಜೆಡಿಎಸ್​ ತೊರೆಯಲು ತೀರ್ಮಾನಿಸಿದ್ದಾರೆ. ಆದ್ರೆ,  ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಇಬ್ರಾಹಿಂ ಸಹ ಜೆಡಿಎಸ್​ಗೆ ಗುಡ್​ಬೈ ಹೇಳುವ ಸಾಧ್ಯತೆಗಳು ಹೆಚ್ಚಿವೆ. ಯಾಕಂದ್ರೆ ಇಬ್ರಾಹಿಂ ಹಾಗೂ ಬಿಜೆಪಿಯ ಸಿದ್ಧಾಂತಗಳನ್ನು ಮೊದಲಿನಿಂದಲೂ ವಿರೋಧಿಸಿಕೊಂಡು ಬಂದಿದ್ದಿದ್ದಾರೆ. ಇದೀಗ ಜೆಡಿಎಸ್​ ಬಿಜೆಪಿಯೊಂದಿಗೆ ಮೈತ್ರಿ ಮಾಡಿಜೊಂಡಿದೆ. ಇದರಿಂದ ಅವರು ಪಕ್ಷ ತೊರೆದರೂ ಅಚ್ಚರಿಪಡಬೇಕಿಲ್ಲ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್