AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಜೊತೆ ಮೈತ್ರಿ ಬೆನ್ನಲ್ಲೇ ಜೆಡಿಎಸ್​ನ ಮತ್ತೊಂದು ವಿಕೆಟ್ ಪತನ

ಬಿಜೆಪಿ ಜೊತೆ ಮೈತ್ರಿ ಬೆನ್ನಲ್ಲೇ ಜೆಡಿಎಸ್​ನ ಒಂದೊಂದೇ ವಿಕೆಟ್ ಪತನವಾಗುತ್ತಿವೆ. ಇದೀಗ ಜೆಡಿಎಸ್ ರಾಜ್ಯ ಉಪಾಧ್ಯಕ್ಷ, ಮಾಜಿ ಶಾಸಕರೊಬ್ಬರು ಜೆಡಿಎಸ್​ಗೆ ರಾಜೀನಾಮೆ ನೀಡಿದ್ದಾರೆ. ಕುಮಾರಸ್ವಾಮಿ, ದೇವೇಗೌಡರಿಗೆ ರಾಜೀನಾಮೆ ಪತ್ರವನ್ನು ವಾಟ್ಸಪ್ ಮಾಡಿ ದಳಪತಿಗಳಿಗೆ ಶಾಕ್ ಕೊಟ್ಟಿದ್ದಾರೆ.

ಬಿಜೆಪಿ ಜೊತೆ ಮೈತ್ರಿ ಬೆನ್ನಲ್ಲೇ ಜೆಡಿಎಸ್​ನ ಮತ್ತೊಂದು ವಿಕೆಟ್ ಪತನ
ಶಫೀ ಅಹಮದ್
ಮಹೇಶ್ ಇ, ಭೂಮನಹಳ್ಳಿ
| Updated By: ರಮೇಶ್ ಬಿ. ಜವಳಗೇರಾ|

Updated on: Sep 27, 2023 | 9:00 AM

Share

ತುಮಕೂರು, (ಸೆಪ್ಟೆಂಬರ್ 27): ಜೆಡಿಎಸ್​, ಬಿಜೆಪಿಯೊಂದಿಗೆ ಮೈತ್ರಿ (JDS And BJP Alliance) ಮಾಡಿಕೊಂಡಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ (Loksabha Elections 2024) ಜಂಟಿಯಾಗಿ ಅಖಾಡಕ್ಕಿಳಿಯಲಿವೆ. ಆದ್ರೆ, ಅದಕ್ಕೂ ಮುನ್ನ ಜೆಡಿಎಸ್​ ನಾಯಕರು ಒಬ್ಬೊಬ್ಬರಾಗಿಯೇ ಪಕ್ಷ ತೊರೆಯುತ್ತಿದ್ದಾರೆ. ಇದೀಗ ತುಮಕೂರಿನಲ್ಲಿ‌ (Tumakuru) ಜೆಡಿಎಸ್​ನ ಮತ್ತೊಂದು ವಿಕೆಟ್​ ಪತನವಾಗಿದೆ. ಅಲ್ಪಸಂಖ್ಯಾತ ಸಮುದಾಯದ ಮುಖಂಡ ಹಾಗೂ ಮಾಜಿ ಶಾಸಕ ಶಫಿ ಅಹಮದ್(shafi ahmed)  ಜೆಡಿಎಸ್​ಗೆ ರಾಜೀನಾಮೆ ನೀಡಿದ್ದಾರೆ.

ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ಹಾಗೂ ರಾಜ್ಯಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಶಫೀ ಅಹಮದ್ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹಾಗೂ ಜಿಲ್ಲಾ ಅಧ್ಯಕ್ಷರಿಗೆ ರವಾನಿಸಿದ್ದಾರೆ. ಅಲ್ಲದೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ, ಹೆಚ್​ಡಿ ದೇವೇಗೌಡ ಅವರಿಗೆ ವಾಟ್ಸಪ್ ಮಾಡಿದ್ದಾರೆ.

ಇದನ್ನೂ ಓದಿ: ಜೆಡಿಎಸ್​ಗೆ ಬಿಗ್​ ಶಾಕ್, ಸಾಮೂಹಿಕವಾಗಿ ಪಕ್ಷ ತೊರೆಯಲು ತೀರ್ಮಾನಿಸಿದ ಮುಸ್ಲಿಂ ನಾಯಕರು

ಕಳದ ವಿಧಾನಸಭಾ ಚುನಾವಣೆಯಲ್ಲಿ ಅಹಮದ್ ಕಾಂಗ್ರೆಸ್​ಗೆ ಗುಡ್ ಬೈ ಹೇಳಿ ಜೆಡಿಎಸ್ ಸೇರಿದ್ದರು. ಇದೀಗ ಜೆಡಿಎಸ್​ ತೊರೆದು ವಾಪಸ್ ಕಾಂಗ್ರೆಸ್​ನತ್ತ ಮುಖ ಮಾಡಿದ್ದಾರೆ. ಆದ್ರೆ, ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ಅವರು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಮೊನ್ನೇ ಅಷ್ಟೇ ಜೆಡಿಎಸ್​ನ ಅಲ್ಪಸಂಖ್ಯಾತ ನಾಯಕರು ಸಭೆ ಮಾಡಿದ್ದು, ಸಾಮೂಹಿಕವಾಗಿ ಜೆಡಿಎಸ್​ ತೊರೆಯಲು ತೀರ್ಮಾನಿಸಿದ್ದಾರೆ. ಆದ್ರೆ,  ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಇಬ್ರಾಹಿಂ ಸಹ ಜೆಡಿಎಸ್​ಗೆ ಗುಡ್​ಬೈ ಹೇಳುವ ಸಾಧ್ಯತೆಗಳು ಹೆಚ್ಚಿವೆ. ಯಾಕಂದ್ರೆ ಇಬ್ರಾಹಿಂ ಹಾಗೂ ಬಿಜೆಪಿಯ ಸಿದ್ಧಾಂತಗಳನ್ನು ಮೊದಲಿನಿಂದಲೂ ವಿರೋಧಿಸಿಕೊಂಡು ಬಂದಿದ್ದಿದ್ದಾರೆ. ಇದೀಗ ಜೆಡಿಎಸ್​ ಬಿಜೆಪಿಯೊಂದಿಗೆ ಮೈತ್ರಿ ಮಾಡಿಜೊಂಡಿದೆ. ಇದರಿಂದ ಅವರು ಪಕ್ಷ ತೊರೆದರೂ ಅಚ್ಚರಿಪಡಬೇಕಿಲ್ಲ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ