AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರಗುತ್ತಿಗೆಯಲ್ಲಿ ಮೀಸಲಾತಿ ತರಲು ಮುಂದಾದ ಸರ್ಕಾರ: ಆರೋಗ್ಯ ಇಲಾಖೆ ನೌಕರರ ವಿರೋಧ ಏಕೆ?

ಹೊರಗುತ್ತಿಗೆ ಪದ್ಧತಿಯಲ್ಲೂ ಮೀಸಲಾತಿ ತರಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಗೆ ತುಮಕೂರಿನ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರಿಂದ ವಿರೋಧ ವ್ಯಕ್ತವಾಗಿದೆ. ಒಂದು ವೇಳೆ ಸರ್ಕಾರ ಮೀಸಲಾತಿ ಜಾರಿ ಮಾಡಿದರೆ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಸಾಕಷ್ಟು ಕುಟುಂಬಗಳು ಬೀದಿ ಪಾಲಾಗುತ್ತವೆ. ಹಾಗಾಗಿ ಯಾವುದೇ ಕಾರಣಕ್ಕೂ ಮೀಸಲಾತಿ ಬೇಡ ಎಂದು ಒತ್ತಾಯಿಸಲಾಗಿದೆ.

ಹೊರಗುತ್ತಿಗೆಯಲ್ಲಿ ಮೀಸಲಾತಿ ತರಲು ಮುಂದಾದ ಸರ್ಕಾರ: ಆರೋಗ್ಯ ಇಲಾಖೆ ನೌಕರರ ವಿರೋಧ ಏಕೆ?
ಹೊರಗುತ್ತಿಗೆಯಲ್ಲಿ ಮೀಸಲಾತಿ ತರಲು ಮುಂದಾದ ಸರ್ಕಾರ: ಆರೋಗ್ಯ ಇಲಾಖೆ ನೌಕರರ ವಿರೋಧ ಏಕೆ?
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: May 26, 2024 | 4:34 PM

Share

ತುಮಕೂರು, ಮೇ 26: ಹೊರಗುತ್ತಿಗೆ ಪದ್ಧತಿಯಲ್ಲೂ ಮೀಸಲಾತಿ (reservation) ತರಲು ಸರ್ಕಾರ ಮುಂದಾಗಿದೆ. ಆದರೆ ಸರ್ಕಾರದ ನಡೆಗೆ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರಿಂದ ವಿರೋಧ ವ್ಯಕ್ತವಾಗಿದೆ.  ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ವಿರೋಧ ವ್ಯಕ್ತಪಡಿಸಿರುವ ನೌಕರರು (employees), ಹೊರಗುತ್ತಿಗೆಯಲ್ಲಿ ಮೀಸಲಾತಿ ಜಾರಿಯಾದರೆ ಬೀದಿ ಪಾಲಾಗುತ್ತವೆ. ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಕುಟುಂಬಗಳು ಬೀದಿ ಪಾಲಾಗುತ್ತವೆ. ಯಾವುದೇ ಕಾರಣಕ್ಕೂ ಹೊರಗುತ್ತಿಗೆಯಲ್ಲಿ ಮೀಸಲಾತಿಯನ್ನ ತರಬಾರದು ಎಂದು ಒತ್ತಾಯಿಸಿದ್ದಾರೆ.

ಇನ್ನು ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ನೀಡಿರುವ ಹೇಳಿಕೆ ಸರಿಯಲ್ಲ. ಹೊರಗುತ್ತಿಗೆ ನೌಕರರ ಬಗ್ಗೆ ಲಘುವಾಗಿ ಮಾತನಾಡಿರುವುದಕ್ಕೆ ವಿರೋಧವಿದೆ. ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ 9 ಸಾವಿರಕ್ಕೂ ಹೆಚ್ಚು ನೌಕರರು ಕೆಲಸ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ: ರಾಜ್ಯ ಸರ್ಕಾರದ ಹೊರ ಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ: ಮಹಿಳೆಯರಿಗೆ ಬಂಪರ್ ಕೊಡುಗೆ

ಸರ್ಕಾರವು ಖಾಸಗಿ ಸಂಸ್ಥೆಗೆ ಟೆಂಡರ್ ನೀಡಿ ನೌಕರರನ್ನು ಶೋಷಿಸುತ್ತಿದೆ. ಖಾಸಗಿ ಸಂಸ್ಥೆ ಬದಲು ಸರ್ಕಾರದಡಿ ಬರುವ ಸಂಸ್ಥೆಗೆ ಟೆಂಡರ್ ನೀಡಬೇಕು. ಆ ಮೂಲಕ ಸೇವಾಭದ್ರತೆ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ನೌಕರರು ಮುಂದಿಟ್ಟಿದ್ದಾರೆ.

ಇತ್ತೀಚೆಗೆ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿಯಲ್ಲೂ ಮೀಸಲಾತಿ ಕಲ್ಪಿಸಲು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಕಛೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯ ನೀತಿಯಾಗಿರುತ್ತದೆ. ಆದರೆ, ಇನ್ನು ಮುಂದೆ ಎಲ್ಲ ಹೊರಗುತ್ತಿಗೆ ನೇಮಕಾತಿಯಲ್ಲಿಯೂ ಮೀಸಲಾತಿಯನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಇದನ್ನೂ ಓದಿ: ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿಗೆ ಸಂಕಷ್ಟ; ಕಳೆದ ಒಂಬತ್ತು ತಿಂಗಳಿಂದ ವೇತನ ಸಿಗದೇ ಪರದಾಟ

ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33 ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳುವುದಕ್ಕೆ ಆದೇಶದಲ್ಲಿ ಸೂಚಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ