AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumakuru: ಅಧಿಕಾರಿಗಳು, ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ; ನೆನೆಗುದಿಗೆ ಬಿದ್ದ ಇಎಸ್ಐ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾರ್ಯ

ತುಮಕೂರು ಜಿಲ್ಲೆಯಲ್ಲಿ ರಾಷ್ಟ್ರ ಮಟ್ಟದ ಫುಡ್ ಪಾರ್ಕ್, ವಸಂತ ನರಸಾಪುರದಂತ ಅಂತರಾಷ್ಟ್ರೀಯ ಮಟ್ಟದ ಕೈಗಾರಿಕೆಗಳು ಇರುವ ಕೈಗಾರಿಕಾ ಪ್ರದೇಶ ಇದೆ. ಸುಮಾರು 40 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಇಲ್ಲಿ ಕೆಲಸ ಮಾಡುತಿದ್ದಾರೆ. ಇಲ್ಲಿಯ ಕಾರ್ಮಿಕರಿಗೆ ಅನುಕೂಲ ಆಗಲೆಂದು ಕೇಂದ್ರ ಸರ್ಕಾರ ಇಎಸ್​ಐ ಆಸ್ಪತ್ರೆಗೆ ಮಂಜೂರಾತಿ ಕೊಟ್ಟು ಒಂದು ವರ್ಷ ಕಳೆದಿದೆ. ಆದರೂ ಸೂಕ್ತವಾದ ಜಾಗ ಹುಡುಕಿ ಸ್ವಂತ ಕಟ್ಟಡಲು ಅಧಿಕಾರಿಗಳಿಗೆ ಆಗಿಲ್ಲ.

Tumakuru: ಅಧಿಕಾರಿಗಳು, ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ; ನೆನೆಗುದಿಗೆ ಬಿದ್ದ ಇಎಸ್ಐ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾರ್ಯ
ಅಧಿಕಾರಿಗಳು ನಿರ್ಲಕ್ಷ್ಯ; ನೆನೆಗುದಿಗೆ ಬಿದ್ದ ಇಎಸ್ಐ ಆಸ್ಪತ್ರೆ ಕಾರ್ಯ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on:May 03, 2024 | 7:44 PM

ತುಮಕೂರು, ಮೇ 03: ಸುಮಾರು 40 ಸಾವಿರ ಕಾರ್ಮಿಕರಿರುವ ಬೃಹತ್ ಜಿಲ್ಲೆ. ಹಲವು ಕೈಗಾರಿಕಾ ಪ್ರದೇಶಗಳಿರುವ ಇಲ್ಲಿ ನೋಂದಾಯಿತ ಕಾರ್ಮಿಕ (labors) ಸಂಖ್ಯೆ ಹೆಚ್ಚಿದೆ. ಆದರೆ ಇಎಸ್ಐ ಆಸ್ಪತ್ರೆಗೆ (ESI Hospital) ಮಂಜೂರಾತಿ ಸಿಕ್ಕು ವರ್ಷ ಕಳೆದರೂ ಇನ್ನೂ ಕಟ್ಟಡ ನಿರ್ಮಾಣಕ್ಕೆ ಜಾಗವೇ ಗುರುತಿಸಿಲ್ಲ. ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಕಟ್ಟಡ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿದೆ. ಜಿಲ್ಲೆಯಲ್ಲಿ ರಾಷ್ಟ್ರ ಮಟ್ಟದ ಫುಡ್ ಪಾರ್ಕ್, ವಸಂತ ನರಸಾಪುರದಂತ ಅಂತರಾಷ್ಟ್ರೀಯ ಮಟ್ಟದ ಕೈಗಾರಿಕೆಗಳು ಇರುವ ಕೈಗಾರಿಕಾ ಪ್ರದೇಶ ಇದೆ. ಬೆಂಗಳೂರು ಹೊರತು ಪಡಿಸಿದರೆ ತುಮಕೂರು ಪರ್ಯಾಯ ಕೈಗಾರಿಕಾ ಹಬ್ ಆಗಿ ಬೆಳೆಯುತ್ತಿದೆ.

ಸುಮಾರು 40 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಇಲ್ಲಿ ಕೆಲಸ ಮಾಡುತಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿಯ ಕಾರ್ಮಿಕರಿಗೆ ಅನುಕೂಲ ಆಗಲೆಂದು ಕೇಂದ್ರ ಸರ್ಕಾರ ಇಎಸ್ ಐ ಆಸ್ಪತ್ರೆಗೆ ಮಂಜೂರಾತಿ ಕೊಟ್ಟು ಒಂದು ವರ್ಷ ಕಳೆದಿದೆ. ಆದರೂ ಸೂಕ್ತವಾದ ಜಾಗ ಹುಡುಕಿ ಸ್ವಂತ ಕಟ್ಟಡಲು ಅಧಿಕಾರಿಗಳಿಗೆ ಆಗಿಲ್ಲ. ಕಿಸ್ಕಿಂದೆಯಂತಿರುವ ಬಾಡಿಗೆ ಕಟ್ಟದಲ್ಲಿ ಒಪಿಡಿ ಮಾತ್ರ ನಡೆಯುತ್ತಿದೆ. ಒಳರೋಗಿಗಳಿಗೂ ಅನುಕೂಲ ಆಗುವಂತೆ 100 ಹಾಸಿಗೆ ಆಸ್ಪತ್ರೆ ಮಂಜೂರಾಗಿದೆ. ಆದರೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಕಟ್ಟಡ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿದೆ.

ಇದನ್ನೂ ಓದಿ: Heat Stroke: ಹೆಚ್ಚಿದ ತಾಪಮಾನ, ಕಲ್ಪತರು ನಾಡಿನ ಜನರಲ್ಲಿ ಹೀಟ್ ಸ್ಟ್ರೋಕ್ ಆತಂಕ

ಜಿಲ್ಲಾ ಕೇಂದ್ರದ ಬದಲಿಗೆ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಿದರೆ ಕಾರ್ಮಿಕರಿಗೆ ಸಹಕಾರಿಯಾಗಲಿವ ಎಂಬ ಕಾರಣಕ್ಕೆ ಅಲ್ಲೇ ಜಾಗ ಪಡೆದುಕೊಳ್ಳುವ ಪ್ರಯತ್ನ ಮುಂದುವರಿದಿದ್ದು, ಫಲ ಸಿಕ್ಕಿಲ್ಲ. ಆರಂಭಿಕವಾಗಿ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಒಂದು ಎಕರೆ ಜಾಗವನ್ನುಕೆಐಎಡಿಬಿ ಮಂಜೂರು ಮಾಡಿತ್ತು.

ಬೆಂಗಳೂರಿನ ಇಎಸ್‌ಐ ಆಸ್ಪತ್ರೆ ಅಧಿಕಾರಿ ಗಳು ಈ ಜಾಗವನ್ನು ಪರಿಶೀಲಿಸಿದ್ದು, ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಇಷ್ಟು ಜಾಗದಲ್ಲಿ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಿಸುವುದು ಕಷ್ಟದ ಕೆಲಸವಾಗಿದೆ. ಗುರುತಿಸಿರುವ ಜಾಗದಲ್ಲಿ ಕಟ್ಟಡವನ್ನಷ್ಟೇ ಕಟ್ಟಿಸಬಹುದು. ಆದರೆ ಚಿಕಿತ್ಸೆಗೆ ಬೇಕಾದ ಇತರೆ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಲ್ಲ. ಹಾಗಾಗಿ ಹೆಚ್ಚು ಭೂಮಿಯ ಅವಶ್ಯಕತೆ ಇದೆ.

ಇದನ್ನೂ ಓದಿ: ತುಮಕೂರು: ಹೆಚ್ಚುವರಿ ನೀರು ಬಿಟ್ಟಿಲ್ಲ ಎಂದು ಗ್ರಾ.ಪಂ ಸದಸ್ಯ, ವಾಟರ್ ಮ್ಯಾನ್ ಮೇಲೆ ಹಲ್ಲೆ

ಸುಸಜ್ಜಿತವಾದ ಆಸ್ಪತ್ರೆ, ಸೂಕ್ತವಾದ ಚಿಕಿತ್ಸೆ ಇಲ್ಲದೇ ಕಾರ್ಮಿಕರು ಹೈರಾಣಾಗಿದ್ದಾರೆ. ಸಣ್ಣಪುಟ್ಟದಕ್ಕೂ ಖಾಸಗಿ ಆಸ್ಪತ್ರೆಯ ಕದ ತಟ್ಟುವ ಪರಿಸ್ಥಿತಿ ಇದೆ. ಅತಿ ಜರೂರಾಗಿ ಆಸ್ಪತ್ರೆ ನಿರ್ಮಾಣ ಆದರೆ ಖಾಯಿಲೆ ಬಿದ್ದ ಕಾರ್ಮಿಕರ ಸಂಕಷ್ಟ ದೂರ ಆಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:44 pm, Fri, 3 May 24

‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?