ಪೊಲೀಸ್ ಹತ್ಯಾಕಾಂಡ ಕೇಸ್​: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕ್ಸಲ್ ಬೆಂಗಳೂರಿನಲ್ಲಿ​ ಬಂಧನ

2005ರ ಫೆ.11ರಂದು ಪೊಲೀಸ್ ಕ್ಯಾಂಪ್​ ಮೇಲೆ ದಾಳಿ ಮಾಡಿದ್ದು, ಬಸ್ ಕ್ಲೀನರ್​ ಸೇರಿದಂತೆ 7 ಪೊಲೀಸರು ಮೃತಪಟ್ಟಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಡಮುಲ ಮುತ್ಯಾಲ ಚಂದ್ರುನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಮುತ್ಯಾಲ ಚಂದ್ರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.

ಪೊಲೀಸ್ ಹತ್ಯಾಕಾಂಡ ಕೇಸ್​: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕ್ಸಲ್ ಬೆಂಗಳೂರಿನಲ್ಲಿ​ ಬಂಧನ
ಪೊಲೀಸ್ ಹತ್ಯಾಕಾಂಡ ಕೇಸ್​: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕ್ಸಲ್ ಬೆಂಗಳೂರಿನಲ್ಲಿ​ ಬಂಧನ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jul 03, 2024 | 6:41 PM

ತುಮಕೂರು, ಜುಲೈ 03: ಜಿಲ್ಲೆಯ ಪಾವಗಡ ತಾಲೂಕಿನ ವೆಂಕಟಮ್ಮನಹಳ್ಳಿ ಪೊಲೀಸ್ ಹತ್ಯಾಕಾಂಡದ ಆರೋಪಿ ನಕ್ಸಲ್ (Naxal) ಕೊಡಮುಲ ಮುತ್ಯಾಲ ಚಂದ್ರುನನ್ನು ಪೊಲೀಸರು ಬಂಧಿಸಿದ್ದಾರೆ (arrested). 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಡಮುಲ ಮುತ್ಯಾಲ ಚಂದ್ರುನನ್ನು ಇಂದು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಬಳಿಕ ಪಾವಗಡ ಜೆಎಂಎಫ್​ಸಿ ಕೋರ್ಟ್​ಗೆ ಪೊಲೀಸರು ಹಾಜರುಪಡಿಸಿದ್ದರು. ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.

ಮುತ್ಯಾಲ ಚಂದ್ರು ಆಂಧ್ರದ ಅನಂತಪುರಂ ಜಿಲ್ಲೆಯ ಗಾರಲದಿನ್ನೆ ಮಂಡಲಂನ ಕೇಶವಪುರದ ನಿವಾಸಿಯಾಗಿದ್ದು, ಬಿಬಿಎಂಪಿಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು. 2005ರ ಫೆ.11ರಂದು ಪೊಲೀಸ್ ಕ್ಯಾಂಪ್​ ಮೇಲೆ ದಾಳಿ ಮಾಡಿದ್ದು, ಬಸ್ ಕ್ಲೀನರ್​ ಸೇರಿದಂತೆ 7 ಪೊಲೀಸರು ಮೃತಪಟ್ಟಿದ್ದರು.

ಇದನ್ನೂ ಓದಿ: ಚುನಾವಣೆ ಹೊತ್ತಲ್ಲಿ ಕರಾವಳಿಯಲ್ಲಿ ನಕ್ಸಲರ ಚಲನವಲನ: ಮನೆಗೆ ಬಂದು ಊಟ ಮಾಡಿದ ಶಂಕಿತರು

ಸುಮಾರು 300 ಮಾವೋವಾದಿಗಳು ಪೊಲೀಸ್ ಶಿಬಿರದ ಮೇಲೆ ದಾಳಿ ಮಾಡಿದಲ್ಲದೇ ಬಂದೂಕುಗಳು ಮತ್ತು ಬಾಂಬ್‌ಗಳೊಂದಿಗೆ ಕರ್ತವ್ಯದಲ್ಲಿದ್ದ 7 ಪೊಲೀಸರನ್ನು ಕೊಂದು ಹಾಕಿದ್ದರು. ಈ ಪ್ರಕರಣದಲ್ಲಿ 5 ಮಂದಿ ಪೊಲೀಸರು ಗಾಯಗೊಂಡಿದ್ದರು. ಕ್ಯಾಂಪ್ ಮುಂದೆ ನಿಂತಿದ್ದ ಖಾಸಗಿ ಬಸ್ಸಿನ ಚಾಲಕನ್ನನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು.

ಪಾವಗಡ ತಾಲೂಕಿನ ತಿರುಮಣಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ​ ದಾಖಲಾಗಿತ್ತು. ಕೇಸ್​ನಲ್ಲಿ 32 ಜನ ಆರೋಪಿಗಳ ಮೇಲೆ ಪಾವಗಡ ಜೆಎಂಎಫ್​ಸಿ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬೆಂಗಳೂರಿನ ಗೋರಿಪಾಳ್ಯದಲ್ಲಿ ಕೊಟ್ಟಗೆರೆ ಶಂಕರ ಎಂಬಾತನನ್ನು ಬಂಧಿಸಿರುವುದಾಗಿ ತುಮಕೂರಿನ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ. ವಿ ತಿಳಿಸಿದ್ದರು. ಈತ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆರೋಪಿ ಕೊಟ್ಟಗೆರೆ ಶಂಕರ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ರಾಮಗಿರಿ ಗ್ರಾಮದ ನಿವಾಸಿ.

ಇದನ್ನೂ ಓದಿ: ಮತ್ತೆ ಆಕ್ಟಿವ್​ ಆದ ನಕ್ಸಲರು: ಉಡುಪಿ, ಚಿಕ್ಕಮಗಳೂರಿನಲ್ಲಿ 5 ದಿನ ಹೈ ಅಲರ್ಟ್​​

ತಿರುಮಣಿ ಪೊಲೀಸರು ಸ್ಫೋಟಕ ಕಾಯ್ದೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಕಾನೂನುಬಾಹಿರ ಸಭೆ, ಗಲಭೆ, ಕೊಲೆಗೆ ಯತ್ನ, ಕೊಲೆ ಮತ್ತು ಸಾರ್ವಜನಿಕ ಸೇವಕನ ಮೇಲೆ ಹಲ್ಲೆ ಅಥವಾ ಗಾಯವನ್ನು ಉಂಟುಮಾಡುವ ಮೂಲಕ ಐಪಿಸಿ ಹೀಗೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?