AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಣ್ಣೆ ಕಿಕ್ಕಿನಲ್ಲೇ ವಿದ್ಯಾರ್ಥಿಗಳಿಗೆ ಪಾಠ, ಸಹೋದ್ಯೋಗಿಗಳಿಗೆ ಕಿರಿಕ್ಕು; ಎಣ್ಣೆ ಶಿಕ್ಷಕಿ ಬೇಡವೇ ಬೇಡ ಎಂದ ಗ್ರಾಮಸ್ಥರು

ಆಕೆ ಅಂತಿಂತಹ ಶಿಕ್ಷಕಿಯಲ್ಲ, ಸದಾ ಎಣ್ಣೆ ಏಟಿನಲ್ಲೇ ತರಗತಿಗೆ ಬಂದು ವಿದ್ಯಾರ್ಥಿಗಳಿಗೆ ಪಾಠ ಮಾಡುವ ಟೀಚರಮ್ಮ. ಸಾಲದೆಂಬಂತೆ ಏರಿದ ಕಿಕ್ಕು ಇಳಿಯುತ್ತಿದ್ದಂತೆ ಮತ್ತೇರಿಸಲು ಡ್ರವರ್​ನಲ್ಲೂ ಮದ್ಯದ ಬಾಟಲ್​ಗಳನ್ನು ಇರಿಸಿಕೊಂಡಿದ್ದಳು.

ಎಣ್ಣೆ ಕಿಕ್ಕಿನಲ್ಲೇ ವಿದ್ಯಾರ್ಥಿಗಳಿಗೆ ಪಾಠ, ಸಹೋದ್ಯೋಗಿಗಳಿಗೆ ಕಿರಿಕ್ಕು; ಎಣ್ಣೆ ಶಿಕ್ಷಕಿ ಬೇಡವೇ ಬೇಡ ಎಂದ ಗ್ರಾಮಸ್ಥರು
ಮದ್ಯ ಸೇವನೆ ಮಾಡಿ ಶಾಲೆಗೆ ಬರುತ್ತಿದ್ದ ಶಿಕ್ಷಕಿ ಗಂಗಲಕ್ಷ್ಮಮ್ಮ ಮತ್ತು ಆಕೆಯ ಡ್ರವರ್​ನಲ್ಲಿ ಪತ್ತೆಯಾದ ಮದ್ಯದ ಬಾಟಲಿಗಳು
TV9 Web
| Edited By: Rakesh Nayak Manchi|

Updated on:Sep 08, 2022 | 11:17 AM

Share

ಆಕೆ ಅಂತಿಂತಹ ಶಿಕ್ಷಕಿಯಲ್ಲ, ಸದಾ ಎಣ್ಣೆ ಏಟಿನಲ್ಲೇ ತರಗತಿಗೆ ಬಂದು ವಿದ್ಯಾರ್ಥಿಗಳಿಗೆ ಪಾಠ ಮಾಡುವ ಟೀಚರಮ್ಮ. ಸಾಲದೆಂಬಂತೆ ಏರಿದ ಕಿಕ್ಕು ಇಳಿಯುತ್ತಿದ್ದಂತೆ ಮತ್ತೇರಿಸಲು ಡ್ರವರ್​ನಲ್ಲೂ ಮದ್ಯದ ಬಾಟಲ್​ಗಳನ್ನು ಇರಿಸಿಕೊಳ್ಳುತ್ತಿದ್ದಳು ಕಣ್ರಪ್ಪೋ… ಸದಾ ಎಣ್ಣೆ ನಶೆಯಲ್ಲಿರುತ್ತಿರುವ ಈ ಟೀಚರಮ್ಮ ಗ್ರಾಮಸ್ಥರು ಹಾಗೂ ಪೊಲೀಸರ ಕೈಗೆ ಸಿಕ್ಕಿಬೀಳುತ್ತಿದ್ದಂತೆ ಆತ್ಮಹತ್ಯೆಯ ನಾಟಕ ಬೇರೆ ಮಾಡಿದ್ದಾಳೆ ಮಾರಾಯ್ರೆ. ಟೀಚರಮ್ಮನ ಎಣ್ಣೆ ನಶೆ ಬಗ್ಗೆ ತಿಳಿದ ಜನರು,  ನಮ್ಮ ಮಕ್ಕಳಿಗೆ ಎಣ್ಣೆ ಶಿಕ್ಷಕಿ ಬೇಡವೇ ಬೇಡವೆಂದು ಪಟ್ಟುಹಿಡಿದು ನಿಂತ್ತಿದ್ದಾರೆ.

ತುಮಕೂರು ಜಿಲ್ಲೆಯ ಚಿಕ್ಕಸಾರಂಗಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಇಂತಹ ಒಂದು ಘಟನೆ ಬೆಳಕಿಗೆ ಬಂದಿದೆ. ಗಂಗಲಕ್ಷ್ಮಮ್ಮ ಎಂಬ ಶಿಕ್ಷಕಿಗೆ ಕುಡಿತದ ಚಟ ಇದ್ದು, ನಿತ್ಯ ಮದ್ಯ ಸೇವನೆ ಮಾಡಿಯೇ ಶಾಲೆಗೆ ಬರುತ್ತಿದ್ದಳು. ಸಾಲದು ಎಂಬಂತೆ ಎಣ್ಣೆ ನಶೆ ಇಳಿದಾಗ ಮತ್ತೇರಿಲು ತನ್ನ ಡ್ರವರ್ ಒಳಗೂ ಮದ್ಯದ ಬಾಟಲ್​ಗಳನ್ನು ಇರಿಸಿಕೊಂಡಿದ್ದಾಳೆ. ಸದಾ ಎಣ್ಣೆ ಏಟಿನಲ್ಲೇ ಇರುತ್ತಿದ್ದ ಗಂಗಲಕ್ಷ್ಮಮ್ಮ, ವಿದ್ಯಾರ್ಥಿಗಳು ಮತ್ತು ಸಹೋದ್ಯೋಗಿಗಳೊಂದಿಗೆ ಕಿರಿಕ್ ಮಾಡಿಕೊಳ್ಳುತ್ತಿದ್ದಳು. ಅಷ್ಟೇ ಅಲ್ಲದೆ ಕುಡಿದ ಮತ್ತಿನಲ್ಲಿ ವಿದ್ಯಾರ್ಥಿಗಳಿಗೆ ಹೊಡೆಯುತ್ತಿದ್ದಳು.

ಕಳೆದ 20 ವರ್ಷಗಳಿಂದ ಇದೇ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗಂಗಲಕ್ಷ್ಮಮ್ಮನ ಪ್ರತಿನಿತ್ಯ ಜಗಳಕ್ಕೆ ಬೇಸತ್ತಿದ್ದಾರೆ. ಇಂದು ಸರಿಹೋಗಬಹುದು, ನಾಳೆ ಬುದ್ಧಿ ಬರಬಹುದು ಎಂದು ಯೋಚಿಸುತ್ತಿದ್ದ ಶಿಕ್ಷಕರೆಲ್ಲರೂ ಆಕೆಗೆ ಜನ್ಮದಲ್ಲಿ ಬುದ್ಧಿ ಬರಲ್ಲ ಎಂದು ಅರಿತು ಬೇರೆ ಕಡೆಗೆ ವರ್ಗಾವಣೆ ಪಡೆದು ಹೋಗುತ್ತಿದ್ದಾರೆ. ಪೊಲೀಸರು ಮತ್ತು ಗ್ರಾಮಸ್ಥರು ಶಾಲೆಗೆ ಭೇಟಿಕೊಟ್ಟು ಪರಿಶೀಲನೆ ನಡೆಸಲು ಮುಂದಾದಾಗ ಪೊಲೀಸರ ಕರ್ತವ್ಯಕ್ಕೂ ಆಕೆ ಅಡ್ಡಿಪಡಿಸಿದ್ದಾಳೆ. ಅನಿವಾರ್ಯವಾಗಿ ಗ್ರಾಮಸ್ಥರು ಟೇಬಲ್​ ಅನ್ನು ಹೊರತಂದು ಬೀಗ ಒಡೆದು ಡ್ರವರ್​ ತೆರೆದಿದ್ದಾರೆ. ಈ ವೇಳೆ ಮದ್ಯದ ಬಾಟಲ್​ಗಳು ಪತ್ತೆಯಾಗಿವೆ.

ಮದ್ಯದ ಬಾಟಲ್​ಗಳು ಪತ್ತೆಯಾಗುತ್ತಿದ್ದಂತೆ ಗಂಗಲಕ್ಷ್ಮಮ್ಮ ಆತ್ಮಹತ್ಯೆಯ ನಾಟಕವಾಡಿದ್ದಾಳೆ. ಶಾಲೆ ಕೊಠಡಿ ಬಾಗಿಲು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ. ನಂತರ ಆಕೆಯನ್ನು ಬಿಇಓ ವಾಹನದಲ್ಲಿ ಕೂರಿಸಿಕೊಂಡು ಕರೆದೊಯ್ಯಲಾಯಿತು.

ಸದ್ಯ ಎಣ್ಣೆ ಶಿಕ್ಷಕಿ ಡ್ರವರ್​ನಲ್ಲಿ ಪತ್ತೆಯಾದ ಮದ್ಯದ ಬಾಟಲ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಶಾಲೆಗೆ ಬೀಗ ಜಡಿದು ಶಿಕ್ಷಕಿಯರನ್ನ ವರ್ಗಾವಣೆ ಮಾಡುವಂತೆ ಪಟ್ಟು ಹಿಡಿದಿದ್ದು, ಎಣ್ಣೆ ಶಿಕ್ಷಕಿ ನಮ್ಮ ಮಕ್ಕಳಿಗೆ ಬೇಡವೇ ಬೇಡವೆಂದು ಪಟ್ಟುಹಿಡಿದಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:45 am, Thu, 8 September 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು