AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲೇ ಓಟದಲ್ಲಿ ದ್ವಿತೀಯ ಸ್ಥಾನ ಗೆದ್ದ ಕೆಲವೇ ನಿಮಿಷಗಳಲ್ಲಿ 15 ವರ್ಷದ ಬಾಲಕ ಹೃದಯಾಘಾತಕ್ಕೆ ಬಲಿ

ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ರಿಲೇ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತಂಡದಲ್ಲಿದ್ದ ಬಾಲಕನೊಬ್ಬ ಓಡಿದ ಕೆಲವೇ ನಿಮಿಷಗಳಲ್ಲಿ ಕುಸಿದುಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ರಿಲೇ ಓಟದಲ್ಲಿ ದ್ವಿತೀಯ ಸ್ಥಾನ ಗೆದ್ದ ಕೆಲವೇ ನಿಮಿಷಗಳಲ್ಲಿ 15 ವರ್ಷದ ಬಾಲಕ ಹೃದಯಾಘಾತಕ್ಕೆ ಬಲಿ
ರಿಲೇ ಓಟದಲ್ಲಿ ದ್ವಿತೀಯ ಸ್ಥಾನ ಗೆದ್ದು ಕೆಲವೇ ನಿಮಿಷಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿ ಭೀಮಾಶಂಕರ್ (ಎಡಚಿತ್ರ) ಮತ್ತು ರಿಲೇ ಸಾಂದರ್ಭಿಕ ಚಿತ್ರ
Rakesh Nayak Manchi
Rakesh Nayak Manchi|

Updated on: Aug 05, 2023 | 3:27 PM

Share

ತುಮಕೂರು, ಆಗಸ್ಟ್ 5: ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ 4×100 ಮೀಟರ್ ರಿಲೇ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಅನುದಾನಿತ ಪ್ರೌಢಶಾಲಾ ತಂಡದಲ್ಲಿ ಭಾಗಿಯಾಗಿದ್ದ 15 ವರ್ಷದ ಬಾಲಕನೊಬ್ಬ ಕೆಲವೇ ನಿಮಿಷಗಳಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ (Heart Attack) ಮೃತಪಟ್ಟ ಘಟನೆ ತುಮಕೂರು (Tumkur) ತಾಲೂಕಿನ ಚಿಕ್ಕತೋಟುಕೆರೆಯಲ್ಲಿ ಗುರುವಾರ (ಆಗಸ್ಟ್ 3) ನಡೆದಿದೆ.

ಬೆಳಧಾರ ಗ್ರಾಮೀಣ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಭೀಮಾಶಂಕರ್ 12 ಸದಸ್ಯರ ರಿಲೇ ತಂಡದ ಸದಸ್ಯನಾಗಿದ್ದ. ಘಟನೆ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ಜೊತೆ ಮಾತನಾಡಿದ ಶಾಲೆಯ ಮುಖ್ಯೋಪಾಧ್ಯಾಯ ನಾಗರಾಜು, “ಗುರುವಾರ ಸಂಜೆ 5.45 ಕ್ಕೆ ಮುಕ್ತಾಯಗೊಂಡ ರಿಲೇಯಲ್ಲಿ ನಮ್ಮ ತಂಡವು ಎರಡನೇ ಸ್ಥಾನವನ್ನು ಗಳಿಸಿದೆ. ಆರಂಭದಲ್ಲಿ ಭೀಮಾಶಂಕರ್ ತಮ್ಮ ತಂಡಕ್ಕೆ ಮುನ್ನಡೆ ಒದಗಿಸಿದ್ದ. ಆದರೆ ನಂತರ ಓಡಿಹೋದ ಇತರರು ಮುನ್ನಡೆ ಮುಂದುವರಿಸುವಲ್ಲಿ ವಿಫಲರಾದರು. ಹೀಗಾಗಿ ಮೊದಲ ಸ್ಥಾನ ಪಡೆಯಲು ಸಾಧ್ಯವಾಗದ ಹಿನ್ನೆಲೆ ಭೀಮಾಶಂಕರ್ ಅಸಮಾಧಾನಗೊಂಡಿದ್ದ ಎಂದರು.

ಇದನ್ನೂ ಓದಿ: ತುಮಕೂರು: ಮೂಢನಂಬಿಕೆಗೆ ಹಸುಗೂಸು ಬಲಿ ಪ್ರಕರಣ; ಸಾವಿಗೆ ಸತ್ಯಾಂಶ ತಿಳಿಯಲು ಹೂತ್ತಿದ್ದ ಮೃತದೇಹ ಹೊರತೆಗೆದ ಪೊಲೀಸ್ರು

ಓಟದ ನಂತರ, ಶಿಕ್ಷಕರು ವಾಪಸ್ ಗ್ರಾಮಕ್ಕೆ ಮರಳಲು ವಾಹನವನ್ನು ಹತ್ತುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದರು. ಆದರೆ ಸಂಜೆ 6 ಗಂಟೆ ಸುಮಾರಿಗೆ ಭೀಮಾಶಂಕರ್ ಕುಸಿದುಬಿದ್ದಿದ್ದಾನೆ. ಕೂಡಲೇ ಆತನನ್ನು ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ರಿಸರ್ಚ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ವೈದ್ಯರು ಭೀಮಾಶಂಕರ್ ಮೃತಪಟ್ಟಿರುವುದಾಗಿ ಘೋಷಿಸಿದರು. ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾಗಿ ನಾಗರಾಜು ಹೇಳಿದರು.

ಭೀಮಾಶಂಕರ್ ಅವರ ತಂದೆ ಬಸವರಾಜು ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಾಗನೂರು ಗ್ರಾಮದವರಾಗಿದ್ದು, ಕೆಂಚಯ್ಯನಪಾಳ್ಯದ ಇಟ್ಟಿಗೆ ಗೂಡುಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಘಟನೆ ಸಂಬಂಧ ಭೀಮಾಶಂಕರ್ ತಂದೆ ಕೋರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಬಾಲಕನ ಶವವನ್ನು ಪೋಷಕರಿಗೆ ಹಸ್ತಾಂತರಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ